<p>ಬಂಟ್ವಾಳ: ಇಲ್ಲಿನ ಅಮ್ಡಾಡಿ ಗ್ರಾಮದ ಮಂಗ್ಲಿಮಾರ್ ಸಮೀಪದ ಅಕ್ಕೇರಿಪಾದೆ ಎಂಬಲ್ಲಿ ನವೀಕರಣಗೊಂಡ ಗುಡಿಯಲ್ಲಿ ದೈವಗಳ ಪುನರ್ ಪ್ರತಿಷ್ಠೆ ಸೋಮವಾರ ನಡೆಯಿತು.</p>.<p>ಕ್ಷೇತ್ರದ ತಂತ್ರಿ ಉದಯ ಪಾಂಗಣ್ಣಾಯ ಅವರ ಮಾರ್ಗದರ್ಶನದಲ್ಲಿ ಪುರೋಹಿತ ನರಸಿಂಹ ಮಯ್ಯ ಅವರು ಬ್ರಹ್ಮಲಿಂಗೇಶ್ವರ ಸಹಿತ ರಕ್ತೇಶ್ವರಿ, ಅಣ್ಣಪ್ಪ ಸ್ವಾಮಿ ಮತ್ತು ಜುಮಾದಿ ಬಂಟ ದೈವಗಳ ಗುಡಿಯಲ್ಲಿ ಬಿಂಬ ಪುನರ್ ಪ್ರತಿಷ್ಠೆ ಮತ್ತು ಕಲಶಾಭಿಷೇಕ ನೆರವೇರಿಸಿದರು.</p>.<p>ಕಲಾಯಿ ಮಹಮ್ಮಾಯಿ ದೇವರಿಗೆ ದೃಢಕಲಶ, ಭೈರವ ಸಹಿತ ಕಲ್ಲುರ್ಟಿ ಪಂಜುರ್ಲಿ ದೈವ ಪ್ರತಿಷ್ಠೆ ಮತ್ತು ನಾಗ ಸಾನಿಧ್ಯದಲ್ಲಿ ವಿಶೇಷ ಪೂಜೆ ನಡೆಯಿತು. ಮಧ್ಯಾಹ್ನ ಮಂಗಲಿಮಾರು ಅಣ್ಣಪ್ಪ ಸ್ವಾಮಿ ದೈವಸ್ಥಾನದಲ್ಲಿ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.</p>.<p>ದೈವಸ್ಥಾನದ ಗಡಿಪ್ರಧಾನ ಬಡಾಜೆ ರವಿಶಂಕರ ಶೆಟ್ಟಿ, ಆರಾಧನಾ ಸಮಿತಿ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಪ್ರಮುಖರಾದ ಎಂ.ತುಂಗಪ್ಪ ಬಂಗೇರ, ದೇವಪ್ಪ ಕುಲಾಲ್, ಕರುಣೇಂದ್ರ ಪೂಜಾರಿ, ಮಲ್ಲಿಕಾ ವಿ.ಶೆಟ್ಟಿ, ಲೋಕೇಶ ಸುವರ್ಣ, ಪ್ರೇಮನಾಥ ಕರ್ಕೇರ, ನರಸಿಂಹ ಹೊಳ್ಳ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-29-1307823202</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಂಟ್ವಾಳ: ಇಲ್ಲಿನ ಅಮ್ಡಾಡಿ ಗ್ರಾಮದ ಮಂಗ್ಲಿಮಾರ್ ಸಮೀಪದ ಅಕ್ಕೇರಿಪಾದೆ ಎಂಬಲ್ಲಿ ನವೀಕರಣಗೊಂಡ ಗುಡಿಯಲ್ಲಿ ದೈವಗಳ ಪುನರ್ ಪ್ರತಿಷ್ಠೆ ಸೋಮವಾರ ನಡೆಯಿತು.</p>.<p>ಕ್ಷೇತ್ರದ ತಂತ್ರಿ ಉದಯ ಪಾಂಗಣ್ಣಾಯ ಅವರ ಮಾರ್ಗದರ್ಶನದಲ್ಲಿ ಪುರೋಹಿತ ನರಸಿಂಹ ಮಯ್ಯ ಅವರು ಬ್ರಹ್ಮಲಿಂಗೇಶ್ವರ ಸಹಿತ ರಕ್ತೇಶ್ವರಿ, ಅಣ್ಣಪ್ಪ ಸ್ವಾಮಿ ಮತ್ತು ಜುಮಾದಿ ಬಂಟ ದೈವಗಳ ಗುಡಿಯಲ್ಲಿ ಬಿಂಬ ಪುನರ್ ಪ್ರತಿಷ್ಠೆ ಮತ್ತು ಕಲಶಾಭಿಷೇಕ ನೆರವೇರಿಸಿದರು.</p>.<p>ಕಲಾಯಿ ಮಹಮ್ಮಾಯಿ ದೇವರಿಗೆ ದೃಢಕಲಶ, ಭೈರವ ಸಹಿತ ಕಲ್ಲುರ್ಟಿ ಪಂಜುರ್ಲಿ ದೈವ ಪ್ರತಿಷ್ಠೆ ಮತ್ತು ನಾಗ ಸಾನಿಧ್ಯದಲ್ಲಿ ವಿಶೇಷ ಪೂಜೆ ನಡೆಯಿತು. ಮಧ್ಯಾಹ್ನ ಮಂಗಲಿಮಾರು ಅಣ್ಣಪ್ಪ ಸ್ವಾಮಿ ದೈವಸ್ಥಾನದಲ್ಲಿ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.</p>.<p>ದೈವಸ್ಥಾನದ ಗಡಿಪ್ರಧಾನ ಬಡಾಜೆ ರವಿಶಂಕರ ಶೆಟ್ಟಿ, ಆರಾಧನಾ ಸಮಿತಿ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಪ್ರಮುಖರಾದ ಎಂ.ತುಂಗಪ್ಪ ಬಂಗೇರ, ದೇವಪ್ಪ ಕುಲಾಲ್, ಕರುಣೇಂದ್ರ ಪೂಜಾರಿ, ಮಲ್ಲಿಕಾ ವಿ.ಶೆಟ್ಟಿ, ಲೋಕೇಶ ಸುವರ್ಣ, ಪ್ರೇಮನಾಥ ಕರ್ಕೇರ, ನರಸಿಂಹ ಹೊಳ್ಳ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-29-1307823202</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>