<p>ಬಂಟ್ವಾಳ: ಪುರಸಭೆ ವ್ಯಾಪ್ತಿಯ ಕೌಡೇಲು ಮತ್ತು ರೆಂಗೇಲು ಪರಿಸರದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ, ಸ್ಥಳೀಯರು ಪುರಸಭೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಕೊಡಪಾನ ಮತ್ತು ಬಕೆಟ್ ಹಿಡಿದುಕೊಂಡು ಬಂದಿದ್ದ ಪ್ರತಿಭಟನಾಕಾರರು ಪುರಸಭೆ ಎದುರು ಬಟ್ಟೆ ತೊಳೆದು ಅಲ್ಲೇ ಒಣಗಿಸಿ ಗಮನ ಸೆಳೆದರು.</p>.<p>ಕಬೀರ್ ಆಹಮ್ಮದ್ ಮಾತನಾಡಿ, ಪುರಸಭೆ ವ್ಯಾಪ್ತಿಯ ಕೌಡೇಲು ಮತ್ತು ರೆಂಗೇಲು ಪರಿಸರದ ನಿವಾಸಿಗಳು ಕುಡಿಯುವ ನೀರಿಲ್ಲದೆ ಕಂಗಾಲಾಗಿದ್ದಾರೆ. ಈ ಬಗ್ಗೆ ನಾವು ಹಲವು ಬಾರಿ ನೀಡಿರುವ ಮನವಿ ಮತ್ತು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದ್ದರೂ ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಆರೋಪಿಸಿದರು.</p>.<p>ಈ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಲವು ತಿಂಗಳಿನಿಂದ ಇದ್ದರೂ ಸಮಯಕ್ಕೆ ಸರಿಯಾಗಿ ನೀರಿನ ಬಿಲ್ ನೀಡುತ್ತಿರುವುದು ನಾಚಿಕೆಗೇಡು ಎಂದು ಅವರು ಟೀಕಿಸಿದರು.</p>.<p>ಪುರಸಭೆ ಮುಖ್ಯಾಧಿಕಾರಿ ತೀರ್ಥಪ್ರಸಾದ್ ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ನಡೆಸಿದಾಗ ಕೆಲಹೊತ್ತು ಪರಸ್ಪರ ಮಾತಿನ ಚಕಮಕಿ ನಡೆಯಿತು.</p>.<p>ಇಲ್ಲಿನ ಕೆಲವೊಂದು ಮನೆಗಳಲ್ಲಿ ಕುಡಿಯುವ ನೀರನ್ನು ಅಡಿಕೆ ಮತ್ತು ತೆಂಗಿನ ಗಿಡಗಳಿಗೆ ಬಳಸುವ ಮೂಲಕ ದುರುಪಯೋಗಪಡಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಮುಖ್ಯಾಧಿಕಾರಿ ಎಚ್ಚರಿಸಿದರು.</p>.<p>ಪ್ರಮುಖರಾದ ಶಬೀರ್, ನವಾಝ್, ಕಬೀರ್ ಅಕ್ಕರಂಗಡಿ, ಆಶ್ರಫ್ ತಲಪಾಡಿ, ಕುಂಞಿಮೋನು, ಹಮೀದ್, ರಝಾಕ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-29-872868359</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಂಟ್ವಾಳ: ಪುರಸಭೆ ವ್ಯಾಪ್ತಿಯ ಕೌಡೇಲು ಮತ್ತು ರೆಂಗೇಲು ಪರಿಸರದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ, ಸ್ಥಳೀಯರು ಪುರಸಭೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಕೊಡಪಾನ ಮತ್ತು ಬಕೆಟ್ ಹಿಡಿದುಕೊಂಡು ಬಂದಿದ್ದ ಪ್ರತಿಭಟನಾಕಾರರು ಪುರಸಭೆ ಎದುರು ಬಟ್ಟೆ ತೊಳೆದು ಅಲ್ಲೇ ಒಣಗಿಸಿ ಗಮನ ಸೆಳೆದರು.</p>.<p>ಕಬೀರ್ ಆಹಮ್ಮದ್ ಮಾತನಾಡಿ, ಪುರಸಭೆ ವ್ಯಾಪ್ತಿಯ ಕೌಡೇಲು ಮತ್ತು ರೆಂಗೇಲು ಪರಿಸರದ ನಿವಾಸಿಗಳು ಕುಡಿಯುವ ನೀರಿಲ್ಲದೆ ಕಂಗಾಲಾಗಿದ್ದಾರೆ. ಈ ಬಗ್ಗೆ ನಾವು ಹಲವು ಬಾರಿ ನೀಡಿರುವ ಮನವಿ ಮತ್ತು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದ್ದರೂ ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಆರೋಪಿಸಿದರು.</p>.<p>ಈ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಲವು ತಿಂಗಳಿನಿಂದ ಇದ್ದರೂ ಸಮಯಕ್ಕೆ ಸರಿಯಾಗಿ ನೀರಿನ ಬಿಲ್ ನೀಡುತ್ತಿರುವುದು ನಾಚಿಕೆಗೇಡು ಎಂದು ಅವರು ಟೀಕಿಸಿದರು.</p>.<p>ಪುರಸಭೆ ಮುಖ್ಯಾಧಿಕಾರಿ ತೀರ್ಥಪ್ರಸಾದ್ ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ನಡೆಸಿದಾಗ ಕೆಲಹೊತ್ತು ಪರಸ್ಪರ ಮಾತಿನ ಚಕಮಕಿ ನಡೆಯಿತು.</p>.<p>ಇಲ್ಲಿನ ಕೆಲವೊಂದು ಮನೆಗಳಲ್ಲಿ ಕುಡಿಯುವ ನೀರನ್ನು ಅಡಿಕೆ ಮತ್ತು ತೆಂಗಿನ ಗಿಡಗಳಿಗೆ ಬಳಸುವ ಮೂಲಕ ದುರುಪಯೋಗಪಡಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಮುಖ್ಯಾಧಿಕಾರಿ ಎಚ್ಚರಿಸಿದರು.</p>.<p>ಪ್ರಮುಖರಾದ ಶಬೀರ್, ನವಾಝ್, ಕಬೀರ್ ಅಕ್ಕರಂಗಡಿ, ಆಶ್ರಫ್ ತಲಪಾಡಿ, ಕುಂಞಿಮೋನು, ಹಮೀದ್, ರಝಾಕ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-29-872868359</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>