ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧ್ರುವನಾರಾಯಣ ನಿಧನ: ‘ಬಂಟ್ವಾಳ ಪ್ರಜಾಧ್ವನಿ ಯಾತ್ರೆ’ ರದ್ದು

Last Updated 11 ಮಾರ್ಚ್ 2023, 15:43 IST
ಅಕ್ಷರ ಗಾತ್ರ

ಬಂಟ್ವಾಳ: ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಆರ್. ಧ್ರುವನಾರಾಯಣ ನಿಧನದ ಪ್ರಯುಕ್ತ ಶನಿವಾರ ‘ಬಂಟ್ವಾಳ ಪ್ರಜಾಧ್ವನಿ ಯಾತ್ರೆ’ಯನ್ನು ರದ್ದುಗೊಳಿಸಲಾಗಿದೆ.

ಪೊಳಲಿ ಸಮೀಪ ಶುಕ್ರವಾರ 14 ದಿನಗಳ ಪ್ರಜಾಧ್ವನಿ ಯಾತ್ರೆಗೆ ಚಾಲನೆ ನೀಡಲಾಗಿತ್ತು. ಎರಡನೇ ದಿನದ ಯಾತ್ರೆಯನ್ನು ಇಲ್ಲಿನ ಬ್ರಹ್ಮರಕೂಟ್ಲು ಶ್ರೀರಾಮ ಭಜನಾ ಮಂದಿರ ಬಳಿ ಆರಂಭಿಸಬೇಕಿತ್ತು. ಅದೇ ಸ್ಥಳದಲ್ಲಿ ಒಟ್ಟು ಸೇರಿದ ಪಕ್ಷದ ಕಾರ್ಯಕರ್ತರು ಮಾಜಿ ಸಚಿವ ‌ಬಿ.ರಮಾನಾಥ ರೈ ನೇತೃತ್ವದಲ್ಲಿ ಧ್ರುವನಾರಾಯಣ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು.

ಪಕ್ಷದ ಮುಖಂಡರಾದ ಪಿಯೂಸ್ ಎಲ್. ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಕೆ.ಪದ್ಮನಾಭ ರೈ, ಸಂಪತ್ ಕುಮಾರ್ ಶೆಟ್ಟಿ, ಶಬೀರ್ ಸಿದ್ದಕಟ್ಟೆ, ಲೋಲಾಕ್ಷ ಶೆಟ್ಟಿ, ದೇವಿಪ್ರಸಾದ್ ಪೂಂಜಾ, ಸ್ಟೀವನ್ ಡಿ'ಸೋಜ, ಆಲ್ಬರ್ಟ್ ಮಿನೇಜಸ್, ಜಗದೀಶ ಕೊಯಿಲ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT