ಧಾರಾಕಾರ ಮಳೆ: ಹಾಸನ ನಗರದಲ್ಲಿ ಭಾನುವಾರ ಮಧ್ಯಾಹ್ನ ಧಾರಾಕಾರ ಮಳೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಎಂ.ಜಿ.ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಉರುಳಿದ್ದು, ಕಾರು ಜಖಂಗೊಂಡಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೊಯ್ಸಳ ನಗರದಲ್ಲಿ ಅನೇಕ ಮನೆಗಳ ಒಳಗೆ ಮಳೆ ನೀರು ನುಗ್ಗಿತು.