<p><strong>ಬಂಟ್ವಾಳ</strong>: ಇಲ್ಲಿನ ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್, ಸಂಗಬೆಟ್ಟು ಗ್ರಾಮದ ಕಲ್ಕುರಿ ಪದವಿನ ಶಾಂತಾ ಬಾಲಕೃಷ್ಣ ನಾಯ್ಕ ದಂಪತಿಗೆ ಸುಸಜ್ಜಿತ ಮನೆ ನಿರ್ಮಿಸಲು ನೆರವು, ವಿವಿಧ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ₹ 9.40 ಲಕ್ಷ ಮೊತ್ತದ ವಿವಿಧ ಕೊಡುಗೆ ಸಲ್ಲಿಸಿದೆ ಎಂದು ರೋಟರಿ ಜಿಲ್ಲಾ ಗವರ್ನರ್ ವಿಕ್ರಂ ದತ್ತ ಹೇಳಿದರು.</p>.<p>ಕ್ಲಬ್ನ ವಿವಿಧ ಸಾಮಾಜಿಕ ಕೊಡುಗೆ ಉದ್ಘಾಟಿಸಿ ಅವರು ಮಾತನಾಡಿದರು. ಕ್ಲಬ್ ಅಧ್ಯಕ್ಷ ಸುರೇಶ ಶೆಟ್ಟಿ ಸಿದ್ಧಕಟ್ಟೆ ಅಧ್ಯಕ್ಷತೆ ವಹಿಸಿದ್ದರು.</p>.<p>ಅಗ್ರಾರ್ ಆಂಗ್ಲ ಮಾಧ್ಯಮ ಶಾಲೆಗೆ ₹ 60 ಸಾವಿರ ಮೊತ್ತದ ಶುದ್ಧ ಕುಡಿಯುವ ನೀರಿನ ಘಟಕ, ಆರಂಬೋಡಿ ಸರ್ಕಾರಿ ಪ್ರಾಥಮಿಕ ಶಾಲೆಗೆ ರಂಗ ಮಂದಿರ, ಸಿದ್ಧಕಟ್ಟೆ ಸರ್ಕಾರಿ ಪ್ರೌಢಶಾಲೆ ರಂಗಮಂದಿರ ನಿರ್ಮಾಣಕ್ಕೆ ₹ 65 ಸಾವಿರ ನೆರವು, ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಯೋಗಾಲಯ ಕೊಠಡಿಗೆ ₹ 25 ಸಾವಿರ, ಟೈಲರಿಂಗ್ ತರಬೇತಿ ಶಿಕ್ಷಕಿಗೆ ₹ 20 ಸಾವಿರ ಗೌರವಧನ, ಹೆಣ್ಣೂರುಪದವು ಅಂಗನವಾಡಿ ಕೇಂದ್ರ ನವೀಕರಣಕ್ಕೆ ₹ 50 ಸಾವಿರ, ಹೆಣ್ಣೂರುಪದವು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ₹ 15 ಸಾವಿರ ಮೊತ್ತದ ಕುಡಿಯುವ ನೀರಿನ ಶುದ್ಧೀಕರಣ ಘಟಕ, ಇಬ್ಬರು ಕ್ಯಾನ್ಸರ್ ಪೀಡಿತರಿಗೆ ತಲಾ ₹ 30 ಸಾವಿರ ಮೊತ್ತ ನೀಡಲಾಯಿತು.</p>.<p>ಸಹಾಯಕ ಗವರ್ನರ್ ಮುರಳಿಕೃಷ್ಣ ಆರ್.ವಿ, ಮಾಜಿ ಗವರ್ನರ್ ಎನ್.ಪ್ರಕಾಶ ಕಾರಂತ್, ವಲಯ ಸೇನಾನಿ ಗಣೇಶ ಶೆಟ್ಟಿ ಆರಂಬೋಡಿ, ಕ್ಲಬ್ ಸ್ಥಾಪಕಾಧ್ಯಕ್ಷ ಅವಿಲ್ ಮಿನೇಜಸ್ ಪಾಲ್ಗೊಂಡಿದ್ದರು. ರಾಜೇಶ ಶೆಟ್ಟಿ ಸೀತಾಳ ವಂದಿಸಿದರು. ರಾಘವೇಂದ್ರ ಭಟ್ ನಿರೂಪಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಟ್ವಾಳ</strong>: ಇಲ್ಲಿನ ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್, ಸಂಗಬೆಟ್ಟು ಗ್ರಾಮದ ಕಲ್ಕುರಿ ಪದವಿನ ಶಾಂತಾ ಬಾಲಕೃಷ್ಣ ನಾಯ್ಕ ದಂಪತಿಗೆ ಸುಸಜ್ಜಿತ ಮನೆ ನಿರ್ಮಿಸಲು ನೆರವು, ವಿವಿಧ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ₹ 9.40 ಲಕ್ಷ ಮೊತ್ತದ ವಿವಿಧ ಕೊಡುಗೆ ಸಲ್ಲಿಸಿದೆ ಎಂದು ರೋಟರಿ ಜಿಲ್ಲಾ ಗವರ್ನರ್ ವಿಕ್ರಂ ದತ್ತ ಹೇಳಿದರು.</p>.<p>ಕ್ಲಬ್ನ ವಿವಿಧ ಸಾಮಾಜಿಕ ಕೊಡುಗೆ ಉದ್ಘಾಟಿಸಿ ಅವರು ಮಾತನಾಡಿದರು. ಕ್ಲಬ್ ಅಧ್ಯಕ್ಷ ಸುರೇಶ ಶೆಟ್ಟಿ ಸಿದ್ಧಕಟ್ಟೆ ಅಧ್ಯಕ್ಷತೆ ವಹಿಸಿದ್ದರು.</p>.<p>ಅಗ್ರಾರ್ ಆಂಗ್ಲ ಮಾಧ್ಯಮ ಶಾಲೆಗೆ ₹ 60 ಸಾವಿರ ಮೊತ್ತದ ಶುದ್ಧ ಕುಡಿಯುವ ನೀರಿನ ಘಟಕ, ಆರಂಬೋಡಿ ಸರ್ಕಾರಿ ಪ್ರಾಥಮಿಕ ಶಾಲೆಗೆ ರಂಗ ಮಂದಿರ, ಸಿದ್ಧಕಟ್ಟೆ ಸರ್ಕಾರಿ ಪ್ರೌಢಶಾಲೆ ರಂಗಮಂದಿರ ನಿರ್ಮಾಣಕ್ಕೆ ₹ 65 ಸಾವಿರ ನೆರವು, ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಯೋಗಾಲಯ ಕೊಠಡಿಗೆ ₹ 25 ಸಾವಿರ, ಟೈಲರಿಂಗ್ ತರಬೇತಿ ಶಿಕ್ಷಕಿಗೆ ₹ 20 ಸಾವಿರ ಗೌರವಧನ, ಹೆಣ್ಣೂರುಪದವು ಅಂಗನವಾಡಿ ಕೇಂದ್ರ ನವೀಕರಣಕ್ಕೆ ₹ 50 ಸಾವಿರ, ಹೆಣ್ಣೂರುಪದವು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ₹ 15 ಸಾವಿರ ಮೊತ್ತದ ಕುಡಿಯುವ ನೀರಿನ ಶುದ್ಧೀಕರಣ ಘಟಕ, ಇಬ್ಬರು ಕ್ಯಾನ್ಸರ್ ಪೀಡಿತರಿಗೆ ತಲಾ ₹ 30 ಸಾವಿರ ಮೊತ್ತ ನೀಡಲಾಯಿತು.</p>.<p>ಸಹಾಯಕ ಗವರ್ನರ್ ಮುರಳಿಕೃಷ್ಣ ಆರ್.ವಿ, ಮಾಜಿ ಗವರ್ನರ್ ಎನ್.ಪ್ರಕಾಶ ಕಾರಂತ್, ವಲಯ ಸೇನಾನಿ ಗಣೇಶ ಶೆಟ್ಟಿ ಆರಂಬೋಡಿ, ಕ್ಲಬ್ ಸ್ಥಾಪಕಾಧ್ಯಕ್ಷ ಅವಿಲ್ ಮಿನೇಜಸ್ ಪಾಲ್ಗೊಂಡಿದ್ದರು. ರಾಜೇಶ ಶೆಟ್ಟಿ ಸೀತಾಳ ವಂದಿಸಿದರು. ರಾಘವೇಂದ್ರ ಭಟ್ ನಿರೂಪಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>