ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜಿನ ಶಿವರಾಮ ಕಾರಂತ ಅಧ್ಯಯನ ಕೇಂದ್ರ ಮತ್ತು ಕನ್ನಡ ಸಂಘದ ಸಹಯೋಗದಲ್ಲಿ ನೀಡುವ ‘ನಿರಂಜನ ಪ್ರಶಸ್ತಿ’ಗೆ ಸಂಶೋಧಕಿ ಡಾ. ವೈ. ಸಿ. ಭಾನುಮತಿ ಹಾಗೂ ಸಿದ್ದಮೂಲೆ ಶಂಕರನಾರಾಯಣ ಭಟ್ ಸ್ಥಾಪಿತ ‘ಶಂಕರ ಸಾಹಿತ್ಯ ಪ್ರಶಸ್ತಿ’ಗೆ ಕಥೆಗಾರ ಶ್ರೀಧರ ಬಳಗಾರ್ ಅವರನ್ನು ಆಯ್ಕೆ ಮಾಡಲಾಗಿದೆ.