<p>ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ತಾಲ್ಲೂಕಿನ ಈ ಪ್ರಸಿದ್ಧ ಯಾತ್ರಾಸ್ಥಳ ವಿವಿಧ ಧರ್ಮಗಳ ನಡುವೆ ಸೌಹಾರ್ದ ಸಾರುವ ಕ್ಷೇತ್ರ ಬಪ್ಪನಾಡು. ಮುಸ್ಲಿಂ ಧರ್ಮದ ‘ಬಪ್ಪ ಬ್ಯಾರಿ’ ಎಂಬ ವ್ಯಾಪಾರಿ ಸುಮಾರು 800 ವರ್ಷಗಳ ಹಿಂದೆ ಇಲ್ಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವನ್ನು ಕಟ್ಟಿಸಿದ್ದ ಎಂಬುದು ಪ್ರತೀತಿ. ಶಾಂಭವೀ ನದಿ ದಂಡೆಯಲ್ಲಿರುವ ಈ ಕ್ಷೇತ್ರದ ವಾರ್ಷಿಕ ಜಾತ್ರೆಯ ಸಂದರ್ಭದಲ್ಲಿ ನಡೆಯುವ ಶಯನೋತ್ಸವ ಇಲ್ಲಿನ ವಿಶೇಷ ಆಚರಣೆಗಳಲ್ಲೊಂದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>