ಇಲ್ಲಿ ಮುಸ್ಲಿಂ ಹಾಗೂ ಹಿಂದೂ ವ್ಯಾಪಾರಿಗಳು ನೂರಾರು ವರ್ಷಗಳಿಂದ ಜೊತೆ ಜೊತೆಯಲ್ಲೇ ವ್ಯಾಪಾರ ವಹಿವಾಟು ನಡೆಸುತ್ತಾ ಬಂದಿದ್ದರು.
ವಿಶ್ವ ಹಿಂದೂ ಪರಿಷತ್ನ ಪ್ರಮುಖರು ಮನವಿ ನೀಡಿದ ಬೆನ್ನಿಗೆ ಈ ವಿವಾದ ಗರಿಗೆದರಿತ್ತು. ಆದರೆ, 2022ರ ಜಾತ್ರೆ ಸಂದರ್ಭದಲ್ಲಿ ಮುಜುರಾಯಿ ಇಲಾಖೆಯ ನಿಯಮವನ್ನು ಮುಂದಿಟ್ಟುಕೊಂಡು ಮುಸ್ಲಿಂ ವ್ಯಾಪಾರಿಗಳು ಇಲ್ಲಿ ಮಳಿಗೆ ಸ್ಥಾಪಿಸುವುದಕ್ಕೆ ಅವಕಾಶ ನಿರಾಕರಿಸಲಾಗಿತ್ತು. ಈ ಸಲವೂ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ಎಂದು ಆಡಳಿತ ಮಂಡಳಿಯು ನಿರ್ಧರಿಸಿದೆ.