ಬಂಟ್ವಾಳ: ಇಲ್ಲಿನ ವಾಮದಪದವು ಸಮೀಪದ ಅಜ್ಜಿಬೆಟ್ಟು ಪರಿಸರದಲ್ಲಿ ಡೆಂಗಿ ಪ್ರಕರಣದಿಂದ ಒಬ್ಬರು ಸಾವನ್ನಪ್ಪಿದ್ದು, ಸಾಂಕ್ರಾಮಿಕ ರೋಗ ತಡೆಗಟ್ಟುವಲ್ಲಿ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸುವುದರ ಜೊತೆಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.
ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ನೇತೃತ್ವದಲ್ಲಿ ಮಂಗಳವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಉಪವಿಭಾಗಾಧಿಕಾರಿ ಮದನ್ ಮೋಹನ್, ತಹಶೀಲ್ದಾರ್ ಡಾ. ಸ್ಮಿತಾ ರಾಮು, ಸಿಡಿಪಿಒ ಗಾಯತ್ರಿ ಬಾಯಿ ಎಚ್., ಉಷಾ ಡಿ., ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಜಯಶ್ರೀ, ತೋಟಗಾರಿಕಾ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ಇದ್ದರು.