<p><strong>ಬಂಟ್ವಾಳ:</strong> ಇಲ್ಲಿನ ಬಿ.ಸಿ.ರೋಡು ಸರ್ಕಾರಿ ಬಸ್ ನಿಲ್ದಾಣ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಲಾರಿ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಸ್ಥಳೀಯ ಶಂಭೂರು ಗ್ರಾಮದ ಕೊಪ್ಪಲ ನಿವಾಸಿ ಚಿದಾನಂದ (52) ಮೃತಪಟ್ಟವರು. ಬಿ.ಸಿ.ರೋಡು ಕಡೆಯಿಂದ ಬಂದು ಅಜ್ಜಿಬೆಟ್ಟು ಕ್ರಾಸ್ ಎಂಬಲ್ಲಿ ತಿರುವು ಪಡೆಯುತ್ತಿದ್ದ ವೇಳೆ ಎದುರಿನಿಂದ ಬಂದ ಟ್ಯಾಂಕರ್ ಡಿಕ್ಕಿಯಾಗಿದೆ. ಈ ವೇಳೆ ಲಾರಿ ಚಕ್ರದಡಿ ಸಿಲುಕಿ ಅವರು ಮೃತಪಟ್ಟಿದ್ದಾರೆ ಎಂದು ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<p>ಚಿದಾನಂದ ಅವರು ಬಂಟ್ವಾಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿಯಾಗಿದ್ದರು. ಅವರಿಗೆ ಪತ್ನಿ, ಪುತ್ರ ಮತ್ತು ಪುತ್ರಿ ಇದ್ದಾರೆ.</p>.<p>ಈ ತಿರುವು ರಸ್ತೆಯಲ್ಲಿ ಪದೇ ಪದೇ ಅಪಘಾತ ಉಂಟಾಗುತ್ತಿದ್ದು, ಬಿ.ಸಿ.ರೋಡು-ಮಂಗಳೂರು ಕಡೆಯಿಂದ ಬರುವ ವಾಹನಗಳ ನಡುವೆ ಸರ್ಕಾರಿ ಬಸ್ ನಿಲ್ದಾಣದಿಂದ ಪುತ್ತೂರು ಕಡೆಗೆ ಸಂಚರಿಸುವ ಬಸ್ ಇಲ್ಲೇ ತಿರುವು ಪಡೆಯಬೇಕಿದೆ. ಈ ನಡುವೆ ಬಿ.ಸಿ.ರೋಡು ಮೇಲ್ಸೇತುವೆಯಲ್ಲಿ ಮಂಗಳೂರು ಕಡೆಗೆ ವೇಗವಾಗಿ ಬರುವ ವಾಹನಗಳ ನಡುವೆ ಅಪಘಾತ ನಡೆಯುತ್ತಿದೆ. ಈ ಕಾರಣದಿಂದ ಇಲ್ಲೂ ವೃತ್ತ ನಿರ್ಮಿಸಬೇಕು ಎಂಬ ಬೇಡಿಕೆ ಕೇಳಿ ಬಂದಿದೆ. ಇದೇ ರಸ್ತೆ ಬಳಿ ಹೊಸ ಬಸ್ ತಂಗುದಾಣ ನಿರ್ಮಾಣಗೊಂಡಿದೆ ಎಂದು ಆರೋಪಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಟ್ವಾಳ:</strong> ಇಲ್ಲಿನ ಬಿ.ಸಿ.ರೋಡು ಸರ್ಕಾರಿ ಬಸ್ ನಿಲ್ದಾಣ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಲಾರಿ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಸ್ಥಳೀಯ ಶಂಭೂರು ಗ್ರಾಮದ ಕೊಪ್ಪಲ ನಿವಾಸಿ ಚಿದಾನಂದ (52) ಮೃತಪಟ್ಟವರು. ಬಿ.ಸಿ.ರೋಡು ಕಡೆಯಿಂದ ಬಂದು ಅಜ್ಜಿಬೆಟ್ಟು ಕ್ರಾಸ್ ಎಂಬಲ್ಲಿ ತಿರುವು ಪಡೆಯುತ್ತಿದ್ದ ವೇಳೆ ಎದುರಿನಿಂದ ಬಂದ ಟ್ಯಾಂಕರ್ ಡಿಕ್ಕಿಯಾಗಿದೆ. ಈ ವೇಳೆ ಲಾರಿ ಚಕ್ರದಡಿ ಸಿಲುಕಿ ಅವರು ಮೃತಪಟ್ಟಿದ್ದಾರೆ ಎಂದು ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<p>ಚಿದಾನಂದ ಅವರು ಬಂಟ್ವಾಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿಯಾಗಿದ್ದರು. ಅವರಿಗೆ ಪತ್ನಿ, ಪುತ್ರ ಮತ್ತು ಪುತ್ರಿ ಇದ್ದಾರೆ.</p>.<p>ಈ ತಿರುವು ರಸ್ತೆಯಲ್ಲಿ ಪದೇ ಪದೇ ಅಪಘಾತ ಉಂಟಾಗುತ್ತಿದ್ದು, ಬಿ.ಸಿ.ರೋಡು-ಮಂಗಳೂರು ಕಡೆಯಿಂದ ಬರುವ ವಾಹನಗಳ ನಡುವೆ ಸರ್ಕಾರಿ ಬಸ್ ನಿಲ್ದಾಣದಿಂದ ಪುತ್ತೂರು ಕಡೆಗೆ ಸಂಚರಿಸುವ ಬಸ್ ಇಲ್ಲೇ ತಿರುವು ಪಡೆಯಬೇಕಿದೆ. ಈ ನಡುವೆ ಬಿ.ಸಿ.ರೋಡು ಮೇಲ್ಸೇತುವೆಯಲ್ಲಿ ಮಂಗಳೂರು ಕಡೆಗೆ ವೇಗವಾಗಿ ಬರುವ ವಾಹನಗಳ ನಡುವೆ ಅಪಘಾತ ನಡೆಯುತ್ತಿದೆ. ಈ ಕಾರಣದಿಂದ ಇಲ್ಲೂ ವೃತ್ತ ನಿರ್ಮಿಸಬೇಕು ಎಂಬ ಬೇಡಿಕೆ ಕೇಳಿ ಬಂದಿದೆ. ಇದೇ ರಸ್ತೆ ಬಳಿ ಹೊಸ ಬಸ್ ತಂಗುದಾಣ ನಿರ್ಮಾಣಗೊಂಡಿದೆ ಎಂದು ಆರೋಪಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>