<p><strong>ಮಂಗಳೂರು</strong>: ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಶಾಖೆಯು ವೈದ್ಯರ ದಿನಾಚರಣೆ ಸಂದರ್ಭದಲ್ಲಿ ನೀಡುವ ಡಾ.ಬಿ.ಸಿ.ರಾಯ್ ಪ್ರಶಸ್ತಿಗೆ ಈ ಬಾರಿ ಮಂಗಳೂರು ಐಎಂಎ ಅಧ್ಯಕ್ಷ ಡಾ.ಅಣ್ಣಯ್ಯ ಕುಲಾಲ್ ಉಳ್ತೂರು ಆಯ್ಕೆಯಾಗಿದ್ದಾರೆ.</p>.<p>ಶ್ರೀನಿವಾಸ ವಿಶ್ವವಿದ್ಯಾಲಯದ ಮುಖ್ಯ ವೈದ್ಯಾಧಿಕಾರಿಯಾಗಿರುವ ಡಾ.ಕುಲಾಲ್, ಎರಡು ದಶಕಗಳಿಂದ ವೈದ್ಯ ಪ್ರಾಧ್ಯಾಪಕರಾಗಿ, ಕುಟುಂಬ ವೈದ್ಯ ಹಾಗೂ ಆರೋಗ್ಯ ಸಲಹಾ ತಜ್ಞರಾಗಿ ಕುಲಾಲ್ ಹೆಲ್ತ್ ಸೆಂಟರ್ ಮೂಲಕ ಸೇವೆ ಸಲ್ಲಿಸುತ್ತಿದ್ದಾರೆ.</p>.<p>ಹಳ್ಳಿಗಳಲ್ಲಿ ವೈದ್ಯಕೀಯ ಸೇವೆ, ವೈದ್ಯಕೀಯ ಶಿಕ್ಷಣ, ವೈದ್ಯ ಸಂಘಟನೆ, ವೈದ್ಯ ಸಾಹಿತ್ಯ ಮುಂತಾದ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಡಾ.ಕುಲಾಲ್ ಅವರು, ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನ, ಸರ್ವಜ್ಞ ಸೆಕೆಂಡ್ ಒಪೀನಿಯನ್ ಸೆಂಟರ್, ಕನ್ನಡಕಟ್ಟೆ ಮೂಲಕ ಆರೋಗ್ಯ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಜಾಗೃತಿ ಮೂಡಿಸುತ್ತಿದ್ದಾರೆ.</p>.<p>ಐಎಂಎ ಬರಹಗಾರರ ಬಳಗ ಹುಟ್ಟುಹಾಕಿ, ಪ್ರಥಮ ವೈದ್ಯ ಬರಹಗಾರರ ರಾಜ್ಯ ಸಮ್ಮೇಳನವನ್ನು ನಗರದ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಪ್ರಶಸ್ತಿಗೆ ಪಾತ್ರರಾದ ಅತ್ಯಂತ ಕಿರಿಯ ವಯಸ್ಸಿನ ವೈದ್ಯರು ಎಂಬ ಹೆಗ್ಗಳಿಕೆಯೂ ಅವರದ್ದಾಗಿದೆ.</p>.<p>ಬಿಜೆಪಿ ವೈದ್ಯಕೀಯ ಪ್ರಕೋಷ್ಠ ಮತ್ತು ಶಿಕ್ಷಣ ಪ್ರಕೋಷ್ಠಗಳಲ್ಲಿ ಜಿಲ್ಲೆ ಹಾಗೂ ರಾಜ್ಯ ಸಂಚಾಲಕರಾಗಿರುವ ಡಾ.ಅಣ್ಣಯ್ಯ ಕುಲಾಲ್, ಸಮಾಜಮುಖಿ ಕಾರ್ಯಗಳ ಜತೆಗೆ ಬರಹ, ಭಾಷಣ, ಸಂಘಟನಾ ಚಾತುರ್ಯದ ಮೂಲಕವೂ ಹೆಸರು ಗಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಶಾಖೆಯು ವೈದ್ಯರ ದಿನಾಚರಣೆ ಸಂದರ್ಭದಲ್ಲಿ ನೀಡುವ ಡಾ.ಬಿ.ಸಿ.ರಾಯ್ ಪ್ರಶಸ್ತಿಗೆ ಈ ಬಾರಿ ಮಂಗಳೂರು ಐಎಂಎ ಅಧ್ಯಕ್ಷ ಡಾ.ಅಣ್ಣಯ್ಯ ಕುಲಾಲ್ ಉಳ್ತೂರು ಆಯ್ಕೆಯಾಗಿದ್ದಾರೆ.</p>.<p>ಶ್ರೀನಿವಾಸ ವಿಶ್ವವಿದ್ಯಾಲಯದ ಮುಖ್ಯ ವೈದ್ಯಾಧಿಕಾರಿಯಾಗಿರುವ ಡಾ.ಕುಲಾಲ್, ಎರಡು ದಶಕಗಳಿಂದ ವೈದ್ಯ ಪ್ರಾಧ್ಯಾಪಕರಾಗಿ, ಕುಟುಂಬ ವೈದ್ಯ ಹಾಗೂ ಆರೋಗ್ಯ ಸಲಹಾ ತಜ್ಞರಾಗಿ ಕುಲಾಲ್ ಹೆಲ್ತ್ ಸೆಂಟರ್ ಮೂಲಕ ಸೇವೆ ಸಲ್ಲಿಸುತ್ತಿದ್ದಾರೆ.</p>.<p>ಹಳ್ಳಿಗಳಲ್ಲಿ ವೈದ್ಯಕೀಯ ಸೇವೆ, ವೈದ್ಯಕೀಯ ಶಿಕ್ಷಣ, ವೈದ್ಯ ಸಂಘಟನೆ, ವೈದ್ಯ ಸಾಹಿತ್ಯ ಮುಂತಾದ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಡಾ.ಕುಲಾಲ್ ಅವರು, ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನ, ಸರ್ವಜ್ಞ ಸೆಕೆಂಡ್ ಒಪೀನಿಯನ್ ಸೆಂಟರ್, ಕನ್ನಡಕಟ್ಟೆ ಮೂಲಕ ಆರೋಗ್ಯ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಜಾಗೃತಿ ಮೂಡಿಸುತ್ತಿದ್ದಾರೆ.</p>.<p>ಐಎಂಎ ಬರಹಗಾರರ ಬಳಗ ಹುಟ್ಟುಹಾಕಿ, ಪ್ರಥಮ ವೈದ್ಯ ಬರಹಗಾರರ ರಾಜ್ಯ ಸಮ್ಮೇಳನವನ್ನು ನಗರದ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಪ್ರಶಸ್ತಿಗೆ ಪಾತ್ರರಾದ ಅತ್ಯಂತ ಕಿರಿಯ ವಯಸ್ಸಿನ ವೈದ್ಯರು ಎಂಬ ಹೆಗ್ಗಳಿಕೆಯೂ ಅವರದ್ದಾಗಿದೆ.</p>.<p>ಬಿಜೆಪಿ ವೈದ್ಯಕೀಯ ಪ್ರಕೋಷ್ಠ ಮತ್ತು ಶಿಕ್ಷಣ ಪ್ರಕೋಷ್ಠಗಳಲ್ಲಿ ಜಿಲ್ಲೆ ಹಾಗೂ ರಾಜ್ಯ ಸಂಚಾಲಕರಾಗಿರುವ ಡಾ.ಅಣ್ಣಯ್ಯ ಕುಲಾಲ್, ಸಮಾಜಮುಖಿ ಕಾರ್ಯಗಳ ಜತೆಗೆ ಬರಹ, ಭಾಷಣ, ಸಂಘಟನಾ ಚಾತುರ್ಯದ ಮೂಲಕವೂ ಹೆಸರು ಗಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>