ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ , ಮಂಗಳೂರು ವಿಶ್ವವಿದ್ಯಾಲಯ ಬ್ಯಾರಿ ಅಧ್ಯಯನ ಪೀಠ ಸಹಯೋಗದಲ್ಲಿ ಭಾನುವಾರ ‘ಬ್ಯಾರಿ ಭಾಷಾ ದಿನಾಚರಣೆ’ ನಗರದ ವಿಶ್ವವಿದ್ಯಾಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಜರುಗಿತು.
‘ಬ್ಯಾರಿ ಭಾಷಾ ದಿನಾಚರಣೆ’ ಅಂಗವಾಗಿ ವಿವಿಧ ಸ್ಪರ್ಧೆ, ಬ್ಯಾರಿ ಗಾಯನ ಸ್ಪರ್ಧೆ, ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್, ರಿಜಿಸ್ಟ್ರಾರ್ ಪೂರ್ಣಿಮಾ ಹಾಗೂ ಇತರರು ಇದ್ದರು.