ಲಾಕ್ಡೌನ್ ಜಾರಿಯಾದ ಬಳಿಕ ಜಿಲ್ಲೆಯಲ್ಲಿ ಬೀಡಿ ಉದ್ಯಮ ಸ್ಥಗಿತವಾಗಿತ್ತು. ಜಿಲ್ಲೆಯಲ್ಲಿ ಸುಮಾರು 1.90 ಲಕ್ಷ ಬೀಡಿ ಕಾರ್ಮಿಕರಿದ್ದು, ಅವರ ಜೀವನ ನಿರ್ವಹಣೆಗೂ ಸಮಸ್ಯೆಯಾಗಿತ್ತು. ಹೀಗಾಗಿ, ಮತ್ತೆ ಉದ್ಯಮವನ್ನು ಆರಂಭಿಸುವಂತೆ ಕಾರ್ಮಿಕ ಸಂಘಟನೆಗಳು, ಬೀಡಿ ಕಂಪನಿಗಳು ಜಿಲ್ಲಾಡಳಿತದ ಮೇಲೆ ಒತ್ತಡ ತಂದಿದ್ದವು. ಹೀಗಾಗಿ ಜಿಲ್ಲಾ ಉಸ್ತುವಾರಿ ಸಚಿವಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಏ. 18ರಂದು ಸಭೆ ನಡೆದು, ಏ.20ರಿಂದಲೇ ಶೇ 50ರಷ್ಟು ಕೆಲಸ ನೀಡಲು ಬೀಡಿ ಕಂಪನಿಗಳಿಗೆ ಅನುಮತಿ ನೀಡಲಾಗಿತ್ತು.