<p><strong>ಮಂಗಳೂರು</strong>: ತಾಲ್ಲೂಕಿನ ಮಳಲಿ ನಾರ್ಲಪದವು ಬಳಿ ಮಗಳ (11) ಜೊತೆ ಬೈಕಿನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಟಾಟಾ ಸುಮೊ ವಾಹನದಲ್ಲಿ ಬಂದ ಯುವಕರಿಬ್ಬರು ಅಡ್ಡಗಟ್ಟಿ ಹಲ್ಲೆ ನಡೆಸಿದ್ದು, ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ ಬೈಕಿನಲ್ಲಿ ಗೋಮಾಂಸ ಪತ್ತೆಯಾಗಿದ್ದು, ಈ ಬಗ್ಗೆಯೂ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. </p><p>‘ಮೂಲರಪಟ್ಣದ ಅಬ್ದುಲ್ ಸತ್ತಾರ್ ಹಲ್ಲೆಗೆ ಒಳಗಾದವರು. ಎಡಪದವಿನ ಸುಮಿತ್ ಭಂಡಾರಿ (21), ರಜತ್ ನಾಯ್ಕ್ (30) ಹಲ್ಲೆ ನಡೆಸಿದ ಆರೋಪಿಗಳು. ಸುಮಾರು 19 ಕೆ.ಜಿ. ಗೋಮಾಂಸವನ್ನು ಅಧಿಕೃತ<br>ದಾಖಲೆಗಳಿಲ್ಲದೆಯೇ ಬೈಕಿನಲ್ಲಿ ಸಾಗಿಸಿದ್ದಕ್ಕೆ ಆರೋಪಿ ಅಬ್ದುಲ್ ಸತ್ತಾರ್ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳ ಲಾಗಿದೆ’ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದಾರೆ. </p><p>ಘಟನೆ ವೇಳೆ ಬೈಕ್ ರಸ್ತೆಗೆ ಬಿದ್ದಿದ್ದು, ಬಿಸಿಯಾಗಿದ್ದ ಸೈಲೆನ್ಸರ್ ತಾಗಿ ಬಾಲಕಿಗೆ ಕಾಲಿನಲ್ಲಿ ಸುಟ್ಟ ಗಾಯ ಗಳಾಗಿವೆ. ಘಟನೆ ಬಳಿಕ ಅಬ್ದುಲ್ ಸತ್ತಾರ್ ಪರಾರಿ ಯಾಗಿದ್ದಾರೆ. ಬಾಲಕಿಯನ್ನು ಸ್ಥಳೀಯರು ಆಸ್ಪತ್ರೆಗೆ<br>ಸೇರಿಸಿ ದ್ದರು.</p><p>‘ಆರೋಪಿಗಳಾದ ಸುಮಿತ್ ಭಂಡಾರಿ ಹಾಗೂ ರಜತ್ ನಾಯ್ಕ್ನನ್ನು ಠಾಣೆಗೆ ಕರೆಸಿ ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗಿದೆ. ಅಬ್ದುಲ್ ಸತ್ತಾರ್ ಗೋಮಾಂಸ ಸರಬರಾಜು ಮಾಡುತ್ತಿದ್ದ ಮಾಹಿತಿ ಇದೆ. ಆತ ಸಿಕ್ಕಿಲ್ಲ’ ಎಂದು ಅವರು ತಿಳಿಸಿದ್ದಾರೆ. </p><p>‘ಮತ್ತೊಬ್ಬ ಯುವಕನ ಫೋಟೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡು, ‘ಆತನೂ ಹಲ್ಲೆ ನಡೆಸಿದ್ದ’ ಎಂದು ಸುದ್ದಿ ಹಬ್ಬಿಸಲಾಗಿದೆ. ಈ ಪ್ರಕರಣದಲ್ಲಿ ಆ ಯುವಕನ ಪಾತ್ರವಿರುವುದು ಖಚಿತವಾಗಿಲ್ಲ. ಆತನ ಪಾತ್ರ ಇಲ್ಲದಿದ್ದರೆ, ಈ ಬಗ್ಗೆ ಸುದ್ದಿ ಹಬ್ಬಿಸಿದವರ ವಿರುದ್ಧವೂ ಕ್ರಮಕೈಗೊಳ್ಳಲಿದ್ದೇವೆ’ ಎಂದು ಕಮಿಷನರ್ ಸ್ಪಷ್ಟಪಡಿಸಿದ್ದಾರೆ. </p><p>ಈ ಘಟನೆ ನಡೆದ ಸ್ಥಳದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ತಾಲ್ಲೂಕಿನ ಮಳಲಿ ನಾರ್ಲಪದವು ಬಳಿ ಮಗಳ (11) ಜೊತೆ ಬೈಕಿನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಟಾಟಾ ಸುಮೊ ವಾಹನದಲ್ಲಿ ಬಂದ ಯುವಕರಿಬ್ಬರು ಅಡ್ಡಗಟ್ಟಿ ಹಲ್ಲೆ ನಡೆಸಿದ್ದು, ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ ಬೈಕಿನಲ್ಲಿ ಗೋಮಾಂಸ ಪತ್ತೆಯಾಗಿದ್ದು, ಈ ಬಗ್ಗೆಯೂ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. </p><p>‘ಮೂಲರಪಟ್ಣದ ಅಬ್ದುಲ್ ಸತ್ತಾರ್ ಹಲ್ಲೆಗೆ ಒಳಗಾದವರು. ಎಡಪದವಿನ ಸುಮಿತ್ ಭಂಡಾರಿ (21), ರಜತ್ ನಾಯ್ಕ್ (30) ಹಲ್ಲೆ ನಡೆಸಿದ ಆರೋಪಿಗಳು. ಸುಮಾರು 19 ಕೆ.ಜಿ. ಗೋಮಾಂಸವನ್ನು ಅಧಿಕೃತ<br>ದಾಖಲೆಗಳಿಲ್ಲದೆಯೇ ಬೈಕಿನಲ್ಲಿ ಸಾಗಿಸಿದ್ದಕ್ಕೆ ಆರೋಪಿ ಅಬ್ದುಲ್ ಸತ್ತಾರ್ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳ ಲಾಗಿದೆ’ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದಾರೆ. </p><p>ಘಟನೆ ವೇಳೆ ಬೈಕ್ ರಸ್ತೆಗೆ ಬಿದ್ದಿದ್ದು, ಬಿಸಿಯಾಗಿದ್ದ ಸೈಲೆನ್ಸರ್ ತಾಗಿ ಬಾಲಕಿಗೆ ಕಾಲಿನಲ್ಲಿ ಸುಟ್ಟ ಗಾಯ ಗಳಾಗಿವೆ. ಘಟನೆ ಬಳಿಕ ಅಬ್ದುಲ್ ಸತ್ತಾರ್ ಪರಾರಿ ಯಾಗಿದ್ದಾರೆ. ಬಾಲಕಿಯನ್ನು ಸ್ಥಳೀಯರು ಆಸ್ಪತ್ರೆಗೆ<br>ಸೇರಿಸಿ ದ್ದರು.</p><p>‘ಆರೋಪಿಗಳಾದ ಸುಮಿತ್ ಭಂಡಾರಿ ಹಾಗೂ ರಜತ್ ನಾಯ್ಕ್ನನ್ನು ಠಾಣೆಗೆ ಕರೆಸಿ ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗಿದೆ. ಅಬ್ದುಲ್ ಸತ್ತಾರ್ ಗೋಮಾಂಸ ಸರಬರಾಜು ಮಾಡುತ್ತಿದ್ದ ಮಾಹಿತಿ ಇದೆ. ಆತ ಸಿಕ್ಕಿಲ್ಲ’ ಎಂದು ಅವರು ತಿಳಿಸಿದ್ದಾರೆ. </p><p>‘ಮತ್ತೊಬ್ಬ ಯುವಕನ ಫೋಟೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡು, ‘ಆತನೂ ಹಲ್ಲೆ ನಡೆಸಿದ್ದ’ ಎಂದು ಸುದ್ದಿ ಹಬ್ಬಿಸಲಾಗಿದೆ. ಈ ಪ್ರಕರಣದಲ್ಲಿ ಆ ಯುವಕನ ಪಾತ್ರವಿರುವುದು ಖಚಿತವಾಗಿಲ್ಲ. ಆತನ ಪಾತ್ರ ಇಲ್ಲದಿದ್ದರೆ, ಈ ಬಗ್ಗೆ ಸುದ್ದಿ ಹಬ್ಬಿಸಿದವರ ವಿರುದ್ಧವೂ ಕ್ರಮಕೈಗೊಳ್ಳಲಿದ್ದೇವೆ’ ಎಂದು ಕಮಿಷನರ್ ಸ್ಪಷ್ಟಪಡಿಸಿದ್ದಾರೆ. </p><p>ಈ ಘಟನೆ ನಡೆದ ಸ್ಥಳದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>