<p>ಬೆಳ್ತಂಗಡಿ: ನಗರದ ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ಸೋಮವಾರ ರಾತ್ರಿ ಕಳ್ಳರು ನುಗ್ಗಿ ನಗದು ಕಳವು ಮಾಡಿದ್ದಾರೆ.</p>.<p>ಕೋರ್ಟ್ ರಸ್ತೆಯ ಧರ್ಮಶ್ರೀ ಕಟ್ಟಡದ ಸಮೃದ್ಧಿ ಎಂಟರ್ಪ್ರೈಸಸ್ನಿಂದ ಸುಮಾರು ₹ 1.50 ಲಕ್ಷ ನಗದು, ಸಿಸಿಟಿವಿ ಮೆಮೊರಿ ಕಾರ್ಡ್ ಕಳವು ಮಾಡಿದ್ದಾರೆ. ಅದೇ ಕಟ್ಟಡದ ಮಹಮ್ಮದ್ ಹನೀಫ್ ಅವರ ಟಿ.ಎಚ್.ರಿಯಲ್ ಎಸ್ಟೇಟ್ ಕಚೇರಿ, ಕಟ್ಟಡ ಮಾಲೀಕರ ಕಚೇರಿ, ವಕೀಲರಾದ ರಾಧಾಕೃಷ್ಣ, ಉಷಾ ಎನ್.ಜಿ., ಯತೀಶ್ ಶೆಟ್ಟಿ ಪಿ. ಅವರ ಕಚೇರಿಗೆ ಕಳ್ಳರು ನುಗ್ಗಿದ್ದಾರೆ.</p>.<p>ಮಾತೃಶ್ರೀ ಹೋಟೆಲ್ನ ಡಬ್ಬಿ ಯಿಂದ ಸುಮಾರು ₹ 5ಸಾವಿರ, ಡ್ರಾಯರ್ನಿಂದ ಸುಮಾರು ₹ 2 ಸಾವಿರ, ಶಬರಿ ಎಂಟರ್ಪ್ರೈಸಸ್ನಿಂದ ಸುಮಾರು ₹ 2 ಸಾವಿರ, ವಕೀಲ ಜಯರಾಮ ಮಣಿ ಯಾಣಿ ಅವರ ಕಚೇರಿ, ಮೆ. ಹಿಮಾಲಯ ಫೈನಾನ್ಸ್ ಮತ್ತು ಇನ್ವೆಸ್ಟ್ಮೆಂಟ್, ವಕೀಲ ಜಿತೇಶ್ ಕೆ. ಅವರ ಕಚೇರಿಗೆ ನುಗ್ಗಿದ್ದಾರೆ.</p>.<p>ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-29-1991731828</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳ್ತಂಗಡಿ: ನಗರದ ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ಸೋಮವಾರ ರಾತ್ರಿ ಕಳ್ಳರು ನುಗ್ಗಿ ನಗದು ಕಳವು ಮಾಡಿದ್ದಾರೆ.</p>.<p>ಕೋರ್ಟ್ ರಸ್ತೆಯ ಧರ್ಮಶ್ರೀ ಕಟ್ಟಡದ ಸಮೃದ್ಧಿ ಎಂಟರ್ಪ್ರೈಸಸ್ನಿಂದ ಸುಮಾರು ₹ 1.50 ಲಕ್ಷ ನಗದು, ಸಿಸಿಟಿವಿ ಮೆಮೊರಿ ಕಾರ್ಡ್ ಕಳವು ಮಾಡಿದ್ದಾರೆ. ಅದೇ ಕಟ್ಟಡದ ಮಹಮ್ಮದ್ ಹನೀಫ್ ಅವರ ಟಿ.ಎಚ್.ರಿಯಲ್ ಎಸ್ಟೇಟ್ ಕಚೇರಿ, ಕಟ್ಟಡ ಮಾಲೀಕರ ಕಚೇರಿ, ವಕೀಲರಾದ ರಾಧಾಕೃಷ್ಣ, ಉಷಾ ಎನ್.ಜಿ., ಯತೀಶ್ ಶೆಟ್ಟಿ ಪಿ. ಅವರ ಕಚೇರಿಗೆ ಕಳ್ಳರು ನುಗ್ಗಿದ್ದಾರೆ.</p>.<p>ಮಾತೃಶ್ರೀ ಹೋಟೆಲ್ನ ಡಬ್ಬಿ ಯಿಂದ ಸುಮಾರು ₹ 5ಸಾವಿರ, ಡ್ರಾಯರ್ನಿಂದ ಸುಮಾರು ₹ 2 ಸಾವಿರ, ಶಬರಿ ಎಂಟರ್ಪ್ರೈಸಸ್ನಿಂದ ಸುಮಾರು ₹ 2 ಸಾವಿರ, ವಕೀಲ ಜಯರಾಮ ಮಣಿ ಯಾಣಿ ಅವರ ಕಚೇರಿ, ಮೆ. ಹಿಮಾಲಯ ಫೈನಾನ್ಸ್ ಮತ್ತು ಇನ್ವೆಸ್ಟ್ಮೆಂಟ್, ವಕೀಲ ಜಿತೇಶ್ ಕೆ. ಅವರ ಕಚೇರಿಗೆ ನುಗ್ಗಿದ್ದಾರೆ.</p>.<p>ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-29-1991731828</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>