ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲಾ ಬಸ್‌ ಡಿಕ್ಕಿ: ವ್ಯಕ್ತಿ ಸಾವು

Published 22 ಮೇ 2023, 4:33 IST
Last Updated 22 ಮೇ 2023, 4:33 IST
ಅಕ್ಷರ ಗಾತ್ರ

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಗುರುವಾನಕೆರೆ ಜಂಕ್ಷನ್‌ ಬಳಿ ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುವ ವಾಹನ ಡಿಕ್ಕಿ ಹೊಡೆದು ಪಾದಚಾರಿಯೊಬ್ಬರು ಭಾನುವಾರ ಮೃತಪಟ್ಟರು.

ತಾಲ್ಲೂಕಿನ ಕಡಿರುದ್ಯಾವರ ಗ್ರಾಮದ ಗಜಂತ್ತೋಡಿ ದರ್ಖಾಸು ಮನೆಯ ಸುರೇಶ್‌ನಾಯ್ಕ ಮೃತರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

‘ಸುರೇಶ ನಾಯ್ಕ  ಅವರು ರಸ್ತೆ ದಾಟಲೆಂದು ರಸ್ತೆ ಬದಿಯಲ್ಲಿ ‌ನಿಂತು ಕೊಂಡಿದ್ದರು.  ಆಗ ಬೆಳ್ತಂಗಡಿ ಕಡೆಯಿಂದ ಮದ್ದಡ್ಕ ಕಡೆಗೆ ಹೋಗುತ್ತಿದ್ದ ಶಾಲಾ ಬಸ್‌ ಅವರಿಗೆ ಡಿಕ್ಕಿ ಹೊಡೆದಿತ್ತು. ಬಸ್ಸಿನ ಹಿಂಬದಿ ಚಕ್ರ ಅವರ ಕಾಲಿನ ಮೇಲೆ ಹರಿದು ಹೋಗಿತ್ತು. ಅವರ ಎಡ ಕಾಲಿನ ಪಾದಕ್ಕೆ, ಎಡ ಕೆನ್ನೆಗೆ, ಸೊಂಟಕ್ಕೆ ತೀವ್ರ ಗಾಯಗಳಾಗಿದ್ದವು. ಅವರನ್ನು ಚಿಕಿತ್ಸೆಗಾಗಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತ ಪಟ್ಟರು ಎಂದು ವೈದ್ಯರು ತಿಳಿಸಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದರು.

ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT