ಬದಲಾವಣೆ ಮಾಡಿ ಎಂದು ಅಲ್ಪಸಂಖ್ಯಾತರು ಕೇಳದಿದ್ದರೂ ಹಟಕ್ಕೆ ಬಿದ್ದಂತೆ ರಾಷ್ಟ್ರೀಯತೆ ವಿಚಾರಕ್ಕೆ ಮತ್ತು ಬಹುಸಂಖ್ಯಾತ ಹಿಂದೂಗಳ ಭಾವನೆಗಳಿಗೆ ಘಾಸಿ ಮಾಡಲು ಮಾಡಲು, ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಹೆಡಗೇವಾರ್, ಸಾವರ್ಕರ್ ಪಠ್ಯ ಕೈ ಬಿಟ್ಟು ದ್ರೋಹ ಎಸಗಲಾಗುತ್ತಿದೆ. ಇದನ್ನು ಖಂಡಿಸಿ ಬಿಜೆಪಿ ಜನಾಂದೋಲನ ನಡೆಸಲಿದೆ ಎಂದು ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್, ಗಣೇಶ್ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.