ಬೆಳ್ತಂಗಡಿ: ತಾಲ್ಲೂಕಿನ ಬಂದಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ್ ಅವರಿಗೆ ರಾಜ್ಯ ಮಟ್ಟದ ಅಕ್ಷರ ಸಿರಿ ಪ್ರಶಸ್ತಿ ಲಭಿಸಿದೆ.
ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸೂಕ್ತ ತರಬೇತಿ ನೀಡಿ ಕಳೆದ ಅನೇಕ ವರ್ಷಗಳಿಂದ ಬಾಲಕಿಯರ ವಿಭಾಗದ ವಾಲಿಬಾಲ್, ಕೊಕ್ಕೊ ಹಾಗೂ ಅಥ್ಲೆಟಿಕ್ಸ್ ವಿಭಾಗದಲ್ಲಿ ತಮ್ಮ ಶಾಲೆಯ ಮಕ್ಕಳನ್ನು ಸತತವಾಗಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಕೊಂಡೊಯ್ದ ಸಾಧನೆಗಾಗಿ ಈ ಪ್ರಶಸ್ತಿ ಲಭಿಸಿದೆ.
ನ.30ರಂದು ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ ಪ್ರಶಸ್ತಿ ಪ್ರದಾನ ಮಾಡುವರು.