<p><strong>ಉಜಿರೆ</strong>: ಬೆಳ್ತಂಗಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಬಸ್ನಿಲ್ದಾಣ ಕಾಮಗಾರಿ ಕೆಲ ತಿಂಗಳುಗಳಿಂದ ಸ್ಥಗಿತಗೊಂಡಿದ್ದು ಸೊಳ್ಳೆ ಉತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಿದೆ.</p>.<p>2023ರಲ್ಲಿ ₹12 ಕೋಟಿ ವೆಚ್ಚದಲ್ಲಿ ಆರಂಭಗೊಂಡ ಪ್ರಥಮ ಹಂತದ ಕಾಮಗಾರಿಯೇ ಅಪೂರ್ಣವಾಗಿದ್ದು ಸದ್ಯ ಸ್ಥಗಿತಗೊಂಡಿದೆ. ಹೊಂಡಗಳಲ್ಲಿ ಕೊಳಚೆ ನೀರು ನಿಂತಿದ್ದು ಸೊಳ್ಳೆ ಉತ್ಪಾದನಾ ಕೇಂದ್ರಗಳಾಗಿ ಮಾರ್ಪಟ್ಟಿವೆ. ಕಾಮಗಾರಿಗೆ ಬಳಸಿರುವ ಕಬ್ಬಿಣ ತುಕ್ಕು ಹಿಡಿಯುತ್ತಿದೆ. </p>.<p>ಪಕ್ಕದಲ್ಲೆ ಹಳೆ ಬಸ್ನಿಲ್ದಾಣ, ಅರಣ್ಯ ಇಲಾಖೆ ಕಚೇರಿ, ಪೊಲೀಸ್ ಠಾಣೆ, ತಾಲ್ಲೂಕು ಕಚೇರಿ ಹಾಗೂ ಅನೇಕ ಮಳಿಗೆಗಳಿದ್ದು ನಿತ್ಯವೂ ಸಾವಿರಾರು ಜನ ಸಂಚರಿಸುತ್ತಿದ್ದಾರೆ. ಸಾಂಕ್ರಾಮಿಕ ರೋಗಗಳ ಭೀತಿಯಲ್ಲೇ ಜನರು ಓಡಾಟ ನಡೆಸುತ್ತಿದ್ದಾರೆ.</p>.<p>‘ಸುಮಾರು 1.2 ಎಕರೆ ಜಾಗದಲ್ಲಿ ₹12 ಕೋಟಿ ವೆಚ್ಚದಲ್ಲಿ ಬಸ್ನಿಲ್ದಾಣ ನಿರ್ಮಾಣವಾಗಲಿದೆ ಎಂದು ಆರಂಭದಲ್ಲಿ ಪ್ರಕಟಿಸಲಾಗಿತ್ತು. ಅರಣ್ಯ ಇಲಾಖೆ ಕಚೇರಿ ಇರುವ ಜಾಗವನ್ನು ಇನ್ನೂ ಕೆಎಸ್ಆರ್ಟಿಸಿಗೆ ಹಸ್ತಾಂತರಿಸಿಲ್ಲ’ ಎಂದು ತಿಳಿದುಬಂದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ</strong>: ಬೆಳ್ತಂಗಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಬಸ್ನಿಲ್ದಾಣ ಕಾಮಗಾರಿ ಕೆಲ ತಿಂಗಳುಗಳಿಂದ ಸ್ಥಗಿತಗೊಂಡಿದ್ದು ಸೊಳ್ಳೆ ಉತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಿದೆ.</p>.<p>2023ರಲ್ಲಿ ₹12 ಕೋಟಿ ವೆಚ್ಚದಲ್ಲಿ ಆರಂಭಗೊಂಡ ಪ್ರಥಮ ಹಂತದ ಕಾಮಗಾರಿಯೇ ಅಪೂರ್ಣವಾಗಿದ್ದು ಸದ್ಯ ಸ್ಥಗಿತಗೊಂಡಿದೆ. ಹೊಂಡಗಳಲ್ಲಿ ಕೊಳಚೆ ನೀರು ನಿಂತಿದ್ದು ಸೊಳ್ಳೆ ಉತ್ಪಾದನಾ ಕೇಂದ್ರಗಳಾಗಿ ಮಾರ್ಪಟ್ಟಿವೆ. ಕಾಮಗಾರಿಗೆ ಬಳಸಿರುವ ಕಬ್ಬಿಣ ತುಕ್ಕು ಹಿಡಿಯುತ್ತಿದೆ. </p>.<p>ಪಕ್ಕದಲ್ಲೆ ಹಳೆ ಬಸ್ನಿಲ್ದಾಣ, ಅರಣ್ಯ ಇಲಾಖೆ ಕಚೇರಿ, ಪೊಲೀಸ್ ಠಾಣೆ, ತಾಲ್ಲೂಕು ಕಚೇರಿ ಹಾಗೂ ಅನೇಕ ಮಳಿಗೆಗಳಿದ್ದು ನಿತ್ಯವೂ ಸಾವಿರಾರು ಜನ ಸಂಚರಿಸುತ್ತಿದ್ದಾರೆ. ಸಾಂಕ್ರಾಮಿಕ ರೋಗಗಳ ಭೀತಿಯಲ್ಲೇ ಜನರು ಓಡಾಟ ನಡೆಸುತ್ತಿದ್ದಾರೆ.</p>.<p>‘ಸುಮಾರು 1.2 ಎಕರೆ ಜಾಗದಲ್ಲಿ ₹12 ಕೋಟಿ ವೆಚ್ಚದಲ್ಲಿ ಬಸ್ನಿಲ್ದಾಣ ನಿರ್ಮಾಣವಾಗಲಿದೆ ಎಂದು ಆರಂಭದಲ್ಲಿ ಪ್ರಕಟಿಸಲಾಗಿತ್ತು. ಅರಣ್ಯ ಇಲಾಖೆ ಕಚೇರಿ ಇರುವ ಜಾಗವನ್ನು ಇನ್ನೂ ಕೆಎಸ್ಆರ್ಟಿಸಿಗೆ ಹಸ್ತಾಂತರಿಸಿಲ್ಲ’ ಎಂದು ತಿಳಿದುಬಂದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>