<p>ಬೆಳ್ತಂಗಡಿ: ‘ದುಡಿಯುವ ಜನರ ಏಕತೆಯನ್ನು ಒಡೆಯುವ ಕೆಲಸವನ್ನು ದುಡಿಸುವ ವರ್ಗ ಮಾಡುತ್ತಿದ್ದು, ಯಾವುದೇ ಕುತಂತ್ರಕ್ಕೆ ಒಳಗಾಗದೆ ಏಕತೆಯಿಂದ ಬದುಕನ್ನು ಉತ್ತಮ ಪಡಿಸಿಕೊಳ್ಳುವುದು ದುಡಿಯುವ ವರ್ಗದ ರಾಜಕೀಯವಾಗಬೇಕು’ ಎಂದು ಸಿಐಟಿಯು ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಂ.ಭಟ್ ಹೇಳಿದರು.</p>.<p>ಕಾರ್ಮಿಕ ದಿನಾಚರಣೆ ಅಂಗವಾಗಿ ಬೆಳ್ತಂಗಡಿ ಅಂಬೇಡ್ಕರ್ ಭವನದಿಂದ ತಾಲ್ಲೂಕು ಕಚೇರಿವರೆಗೆ ನಡೆದ ರ್ಯಾಲಿಯನ್ನು ಸಮಾಪನಗೊಳಿಸಿ ಬೆಳ್ತಂಗಡಿ ಆಡಳಿತ ಸೌಧದ ಆವರಣದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಅಂಬೇಡ್ಕರ್ ಭವನದಲ್ಲಿ ನಡೆದ ಸಭೆಯಲ್ಲಿ ಸಿಐಟಿಯು ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯದರ್ಶಿ ಈಶ್ವರಿ ಪದ್ಮುಂಜ ಮಾತನಾಡಿ, ಶೋಷಣೆಯ ವಿರುದ್ಧ ಸಿಡಿದೇಳಬೇಕು ಎಂದರು.</p>.<p>ರೈತ ಸಂಘದ ಲಕ್ಷ್ಮಣ ಗೌಡ, ಆಶಾ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷೆ ದೇವಕಿ, ಜೆ.ಎಂ.ಎಸ್ ಜಿಲ್ಲಾ ಘಟಕದ ಅಧ್ಯಕ್ಷೆ ಕಿರಣಪ್ರಭಾ, ಡಿವೈಎಫ್ಐ ತಾಲ್ಲೂಕು ಘಟಕದ ಕಾರ್ಯದರ್ಶಿ ಅಭಿಷೇಕ್, ಎಸ್.ಎಫ್.ಐ. ಜಿಲ್ಲಾ ಘಟದಕ ಕಾರ್ಯದರ್ಶಿ ವಿನುಶರಮಣ ಮಾತನಾಡಿದರು.</p>.<p>ಪ್ರಮುಖರಾದ ಪುಷ್ಪ, ಶ್ರೇಯ ಪುದುವೆಟ್ಟು, ಜಯರಾಮ ಮಯ್ಯ, ಸುಕುಮಾರ್ ದಿಡುಪೆ, ಅಜಿ ಎಂ.ಜೋಸ್, ಅಪ್ಪಿ, ಕುಮಾರಿ ಭಾಗವಹಿಸಿದ್ದರು. ಸಂಗಾತಿ ಗುಂಪು ಯೋಜನೆಯ ಗುಂಪುಗಳಿಗೆ ಲಾಭಾಂಶ ವಿತರಿಸಲಾಯಿತು.</p>.<p>ಕಾರ್ಯಕರ್ತೆ ಅಪ್ಸರಾಲಿಯ ಮನವಿ ವಾಚಿಸಿದರು. ಸಿಐಟಿಯು ತಾಲ್ಲೂಕು ಘಟಕದ ಸಂಚಾಲಕ ಲೋಕೇಶ್ ಸ್ವಾಗತಿಸಿ, ಅಶ್ವಿತ ವಂದಿಸಿದರು. ಬೆಳ್ತಂಗಡಿ ತಾಲ್ಲೂಕು ಬೀಡಿ ಕೆಲಸಗಾರ ಸಂಘದ ಪ್ರಧಾನ ಕಾರ್ಯದರ್ಶಿ ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-29-576750816</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳ್ತಂಗಡಿ: ‘ದುಡಿಯುವ ಜನರ ಏಕತೆಯನ್ನು ಒಡೆಯುವ ಕೆಲಸವನ್ನು ದುಡಿಸುವ ವರ್ಗ ಮಾಡುತ್ತಿದ್ದು, ಯಾವುದೇ ಕುತಂತ್ರಕ್ಕೆ ಒಳಗಾಗದೆ ಏಕತೆಯಿಂದ ಬದುಕನ್ನು ಉತ್ತಮ ಪಡಿಸಿಕೊಳ್ಳುವುದು ದುಡಿಯುವ ವರ್ಗದ ರಾಜಕೀಯವಾಗಬೇಕು’ ಎಂದು ಸಿಐಟಿಯು ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಂ.ಭಟ್ ಹೇಳಿದರು.</p>.<p>ಕಾರ್ಮಿಕ ದಿನಾಚರಣೆ ಅಂಗವಾಗಿ ಬೆಳ್ತಂಗಡಿ ಅಂಬೇಡ್ಕರ್ ಭವನದಿಂದ ತಾಲ್ಲೂಕು ಕಚೇರಿವರೆಗೆ ನಡೆದ ರ್ಯಾಲಿಯನ್ನು ಸಮಾಪನಗೊಳಿಸಿ ಬೆಳ್ತಂಗಡಿ ಆಡಳಿತ ಸೌಧದ ಆವರಣದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಅಂಬೇಡ್ಕರ್ ಭವನದಲ್ಲಿ ನಡೆದ ಸಭೆಯಲ್ಲಿ ಸಿಐಟಿಯು ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯದರ್ಶಿ ಈಶ್ವರಿ ಪದ್ಮುಂಜ ಮಾತನಾಡಿ, ಶೋಷಣೆಯ ವಿರುದ್ಧ ಸಿಡಿದೇಳಬೇಕು ಎಂದರು.</p>.<p>ರೈತ ಸಂಘದ ಲಕ್ಷ್ಮಣ ಗೌಡ, ಆಶಾ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷೆ ದೇವಕಿ, ಜೆ.ಎಂ.ಎಸ್ ಜಿಲ್ಲಾ ಘಟಕದ ಅಧ್ಯಕ್ಷೆ ಕಿರಣಪ್ರಭಾ, ಡಿವೈಎಫ್ಐ ತಾಲ್ಲೂಕು ಘಟಕದ ಕಾರ್ಯದರ್ಶಿ ಅಭಿಷೇಕ್, ಎಸ್.ಎಫ್.ಐ. ಜಿಲ್ಲಾ ಘಟದಕ ಕಾರ್ಯದರ್ಶಿ ವಿನುಶರಮಣ ಮಾತನಾಡಿದರು.</p>.<p>ಪ್ರಮುಖರಾದ ಪುಷ್ಪ, ಶ್ರೇಯ ಪುದುವೆಟ್ಟು, ಜಯರಾಮ ಮಯ್ಯ, ಸುಕುಮಾರ್ ದಿಡುಪೆ, ಅಜಿ ಎಂ.ಜೋಸ್, ಅಪ್ಪಿ, ಕುಮಾರಿ ಭಾಗವಹಿಸಿದ್ದರು. ಸಂಗಾತಿ ಗುಂಪು ಯೋಜನೆಯ ಗುಂಪುಗಳಿಗೆ ಲಾಭಾಂಶ ವಿತರಿಸಲಾಯಿತು.</p>.<p>ಕಾರ್ಯಕರ್ತೆ ಅಪ್ಸರಾಲಿಯ ಮನವಿ ವಾಚಿಸಿದರು. ಸಿಐಟಿಯು ತಾಲ್ಲೂಕು ಘಟಕದ ಸಂಚಾಲಕ ಲೋಕೇಶ್ ಸ್ವಾಗತಿಸಿ, ಅಶ್ವಿತ ವಂದಿಸಿದರು. ಬೆಳ್ತಂಗಡಿ ತಾಲ್ಲೂಕು ಬೀಡಿ ಕೆಲಸಗಾರ ಸಂಘದ ಪ್ರಧಾನ ಕಾರ್ಯದರ್ಶಿ ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-29-576750816</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>