<p>ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಉದ್ದದ ಪಲ್ಕೆ-ಕೋಡಿರಸ್ತೆಗೆ ನಿರ್ಮಾಣವಾಗುತ್ತಿದ್ದ ಕಾಮಗಾರಿ ಅವೈಜ್ಞಾನಿಕವಾಗಿ ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ರಸ್ತೆ ಕಾಮಗಾರಿಗೆ ತಡೆಯೊಡ್ಡಿದ ಘಟನೆ ಬುಧವಾರ ನಡೆದಿದೆ.</p>.<p>ಕಡಿರುದ್ಯಾವರ ಗ್ರಾಮದ ಉದ್ದದ ಪಲ್ಕೆ-ಕೋಡಿರಸ್ತೆ ನಡುವೆ ಸುಮಾರು 200 ಮೀಟರ್ ಕಾಂಕ್ರೀಟ್ ರಸ್ತೆಗೆ ಜಿಲ್ಲಾ ಪಂಚಾಯಿತಿ ನಿಧಿಯಿಂದ ಸುಮಾರು ₹ 10 ಲಕ್ಷ ಅನುದಾನದಡಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಕಾಂಕ್ರಿಟ್ ರಸ್ತೆ ನಿರ್ಮಾಣದ ವೇಳೆ ಸ್ಕಿಡ್ಡರ್ ಅಳವಡಿಸದೆ ನಿರ್ಮಿಸಿದ್ದಾರೆ. ಇದರಿಂದ ರಸ್ತೆ ಒಂದು ವರ್ಷವೂ ಬಾಳಿಕೆ ಬರುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಗ್ರಾಮಸ್ಥರು ಜಿಲ್ಲಾ ಪಂಚಾಯಿತಿ ಎಂಜಿನಿಯರ್ ಅವರನ್ನು ತರಾಟೆಗೆ ತೆಗೆದುಕೊಂಡರು.</p>.<p>ಇದಕ್ಕೆ ಗುತ್ತಿಗೆದಾರರು ಈ ವಿಧಾನ ನಮ್ಮಲ್ಲಿಲ್ಲ, ನಾವಿನ್ನು ರಸ್ತೆ ನಿರ್ಮಿಸುವುದಿಲ್ಲ ಎಂದು ಕಾಮಗಾರಿ ಅರ್ಧದಲ್ಲೆ ನಿಲ್ಲಿಸಿ ವಾಹನ ತೆರವುಗೊಳಿಸಲು ನಿರ್ಧರಿಸಿದ್ದರು. ಇದಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಾವತಿ ಬಾಲಕೃಷ್ಣ ಮೂಲಕ ಸೂಕ್ತ ಕ್ರಮಕ್ಕೆ ಆಗ್ರಹಿಸಿದರು. ಅಧ್ಯಕ್ಷರು ವೈಜ್ಞಾನಿಕ ಕ್ರಮದಲ್ಲೆ ರಸ್ತೆ ನಿರ್ಮಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದ್ದಾರೆ.</p>.<p>ಇದೇ ಪದ್ಧತಿಯಲ್ಲಿ ದೂಂಬೆಟ್ಡು ಸಮೀಪ ಈ ರೀತಿ ರಸ್ತೆ ನಿರ್ಮಿಸಿದ್ದರಿಂದ ರಸ್ತೆ ಬಾಳಿಕೆ ಬಂದಿರಲಿಲ್ಲ. ಹಾಗಾಗಿ ಸ್ಕಿಡ್ಡರ್ ಬಳಸಿ ರಸ್ತೆ ನಿರ್ಮಿಸಿ ಎಂದು ಗ್ರಾಮಸ್ಥರು ಆಗ್ರಹಿಸಿದರು. ಈ ವೇಳೆ ಗ್ರಾಮಸ್ಥರಾದ ರಾಮಚಂದ್ರ ಗೌಡ, ರಾಘವೇಂದ್ರ ಭಟ್, ಜಗದೀಶ್ ಗೌಡ, ಕಮಲಾ ಕೋಡಿ, ನಿರಂಜನ್ ಉದ್ದದ ಪಲ್ಕೆ, ಜಗದೀಶ್ ನಾಯ್ಕ್, ರಾಜೇಶ್ ಕೋಡಿ, ಸಂಜೀವ ಗೌಡ, ಕೇಶವ ರಾಮಂದೊಟ್ಟು, ಕೃಷ್ಣಪ್ಪ. ಗಿರಿಯಮ್ಮ, ಪುಷ್ಪಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಉದ್ದದ ಪಲ್ಕೆ-ಕೋಡಿರಸ್ತೆಗೆ ನಿರ್ಮಾಣವಾಗುತ್ತಿದ್ದ ಕಾಮಗಾರಿ ಅವೈಜ್ಞಾನಿಕವಾಗಿ ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ರಸ್ತೆ ಕಾಮಗಾರಿಗೆ ತಡೆಯೊಡ್ಡಿದ ಘಟನೆ ಬುಧವಾರ ನಡೆದಿದೆ.</p>.<p>ಕಡಿರುದ್ಯಾವರ ಗ್ರಾಮದ ಉದ್ದದ ಪಲ್ಕೆ-ಕೋಡಿರಸ್ತೆ ನಡುವೆ ಸುಮಾರು 200 ಮೀಟರ್ ಕಾಂಕ್ರೀಟ್ ರಸ್ತೆಗೆ ಜಿಲ್ಲಾ ಪಂಚಾಯಿತಿ ನಿಧಿಯಿಂದ ಸುಮಾರು ₹ 10 ಲಕ್ಷ ಅನುದಾನದಡಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಕಾಂಕ್ರಿಟ್ ರಸ್ತೆ ನಿರ್ಮಾಣದ ವೇಳೆ ಸ್ಕಿಡ್ಡರ್ ಅಳವಡಿಸದೆ ನಿರ್ಮಿಸಿದ್ದಾರೆ. ಇದರಿಂದ ರಸ್ತೆ ಒಂದು ವರ್ಷವೂ ಬಾಳಿಕೆ ಬರುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಗ್ರಾಮಸ್ಥರು ಜಿಲ್ಲಾ ಪಂಚಾಯಿತಿ ಎಂಜಿನಿಯರ್ ಅವರನ್ನು ತರಾಟೆಗೆ ತೆಗೆದುಕೊಂಡರು.</p>.<p>ಇದಕ್ಕೆ ಗುತ್ತಿಗೆದಾರರು ಈ ವಿಧಾನ ನಮ್ಮಲ್ಲಿಲ್ಲ, ನಾವಿನ್ನು ರಸ್ತೆ ನಿರ್ಮಿಸುವುದಿಲ್ಲ ಎಂದು ಕಾಮಗಾರಿ ಅರ್ಧದಲ್ಲೆ ನಿಲ್ಲಿಸಿ ವಾಹನ ತೆರವುಗೊಳಿಸಲು ನಿರ್ಧರಿಸಿದ್ದರು. ಇದಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಾವತಿ ಬಾಲಕೃಷ್ಣ ಮೂಲಕ ಸೂಕ್ತ ಕ್ರಮಕ್ಕೆ ಆಗ್ರಹಿಸಿದರು. ಅಧ್ಯಕ್ಷರು ವೈಜ್ಞಾನಿಕ ಕ್ರಮದಲ್ಲೆ ರಸ್ತೆ ನಿರ್ಮಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದ್ದಾರೆ.</p>.<p>ಇದೇ ಪದ್ಧತಿಯಲ್ಲಿ ದೂಂಬೆಟ್ಡು ಸಮೀಪ ಈ ರೀತಿ ರಸ್ತೆ ನಿರ್ಮಿಸಿದ್ದರಿಂದ ರಸ್ತೆ ಬಾಳಿಕೆ ಬಂದಿರಲಿಲ್ಲ. ಹಾಗಾಗಿ ಸ್ಕಿಡ್ಡರ್ ಬಳಸಿ ರಸ್ತೆ ನಿರ್ಮಿಸಿ ಎಂದು ಗ್ರಾಮಸ್ಥರು ಆಗ್ರಹಿಸಿದರು. ಈ ವೇಳೆ ಗ್ರಾಮಸ್ಥರಾದ ರಾಮಚಂದ್ರ ಗೌಡ, ರಾಘವೇಂದ್ರ ಭಟ್, ಜಗದೀಶ್ ಗೌಡ, ಕಮಲಾ ಕೋಡಿ, ನಿರಂಜನ್ ಉದ್ದದ ಪಲ್ಕೆ, ಜಗದೀಶ್ ನಾಯ್ಕ್, ರಾಜೇಶ್ ಕೋಡಿ, ಸಂಜೀವ ಗೌಡ, ಕೇಶವ ರಾಮಂದೊಟ್ಟು, ಕೃಷ್ಣಪ್ಪ. ಗಿರಿಯಮ್ಮ, ಪುಷ್ಪಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>