<p><strong>ಬೆಳ್ತಂಗಡಿ:</strong> ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಆಲಿಸುವ ಸಭೆಯು ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಮಿನಿ ವಿಧಾಸೌಧದ ಸಭಾಂಗಣದಲ್ಲಿ ಸೋಮವಾರ ನಡೆಯಿತು.</p>.<p>ರೆಂಕೆದಗುತ್ತು, ನಾರಾವಿ ಸೇರಿದಂತೆ ವಿವಿಧ ಕಡೆಗಳಲ್ಲಿ ದಲಿತರು ಮನೆ ಕಟ್ಟಲು ಸರ್ಕಾರಿ ಭೂಮಿ ಒತ್ತುವರಿ ಮಾಡಿದರೆ ಕಂದಾಯ ಇಲಾಖೆ ತ್ವರಿತಗತಿಯಲ್ಲಿ ತೆರವುಗೊಳಿಸುತ್ತದೆ. ಆದರೆ, ಶ್ರೀಮಂತರು ಒತ್ತುವರಿ ಮಾಡಿದ್ದಾರೆ. ಅವರಿಗೆ ಪಟ್ಟಣ ಪಂಚಾಯಿತಿ ಸಹಿತ ಸ್ಥಳೀಯ ಆಡಳಿತಗಳು ವಿದ್ಯುತ್, ನೀರು ಸಂಪರ್ಕಕ್ಕೆ ಪರವಾನಗಿ ಕೊಡುತ್ತಾರೆ. ಈ ರೀತಿಯ ಧೋರಣೆಯನ್ನು ಖಂಡಿಸುವುದಾಗಿ ಮುಖಂಡರಾದ ಸಂಜೀವ ಆರ್., ಬಿ.ಕೆ.ವಸಂತ್, ರಮೇಶ್ ಆರ್., ಶೇಖರ್ ಲಾಯಿಲ, ಶೇಖರ್ ಕುಕ್ಕೇಡಿ, ನೇಮಿರಾಜ್ ಕಿಲ್ಲೂರು ಹೇಳಿದರು.</p>.<p>ಈ ರೀತಿಯ ತಾರತಮ್ಯ ಮಾಡುವುದಿಲ್ಲ. ಹೊಸದಾಗಿ ಒತ್ತುವರಿ ಮಾಡಿದ್ದರೆ ಕ್ರಮ ಕೈಗೊಳ್ಳಲಾಗುತ್ತದೆ. ಹಿಂದೆ ಒತ್ತುವರಿ ಮಾಡಿದ್ದರೆ ಅಂಥವರಿಗೆ ನೋಟೀಸ್ ನೀಡಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಇಲಾಖೆ ಮುಂದಾಗುತ್ತಿದೆ ಎಂದು ತಹಶೀಲ್ದಾರ್ ಹೇಳಿದರು.</p>.<p>ಸುಲ್ಕೇರಿಮೊಗ್ರು ಮಾಳಿಗೆ ಪರಿಶಿಷ್ಟ ಪಂಗಡದವರ ಕಾಲೊನಿಗೆ ವಿದ್ಯುತ್ ಸಂಪರ್ಕ ಇಲ್ಲದೆ ತೊಂದರೆ ಆಗುತ್ತಿದೆ. ಈ ಸಂಬಂಧ ಸಚಿವರನ್ನು ಭೇಟಿಯಾಗಿ ಅನುಮೋದನೆ ಪಡೆದಿದ್ದೇವೆ. ಕಾಮಗಾರಿ ನಡೆಯುತ್ತಿದ್ದು, ದೀಪಾವಳಿ ಒಳಗೆ ಈ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ನೀಡುವಂತೆ ಮುಖಂಡ ಶೇಖರ ಕುಕ್ಕೇಡಿ ಒತ್ತಾಯಿಸಿದರು.</p>.<p>ಪ್ರತಿಕ್ರಿಯಿಸಿದ ಬೆಳ್ತಂಗಡಿ ಮೆಸ್ಕಾಂ ಉಪವಿಭಾಗದ ಎಇಇ ಬೆಂಜಮಿನ್ ಬ್ರಾಗ್ಸ್, ಕಂಬ ಅಳವಡಿಸುವ ಕಾಮಗಾರಿ ನಡೆಯುತ್ತಿದ್ದು, ಕೇಬಲ್ಗಾಗಿ ಟೆಂಡರ್ ಪ್ರಕ್ರಿಯೆ ನಡೆದಿದೆ. ಮುಂಬೈ ಮೂಲದ ಕಂಪನಿ ಸರಬರಾಜು ಮಾಡಲು ಒಪ್ಪಿದ್ದು, ಅಕ್ಟೋಬರ್ ಒಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.</p>.<p>ತಾಲ್ಲೂಕಿನ ಪ್ರತಿ ಮಂಡಲ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂಬೇಡ್ಕರ್ ಭವನಕ್ಕೆ 50 ಸೆಂಟ್ಸ್ ಜಾಗ ಮೀಸಲಿಡಲು ಸಭೆಯಲ್ಲಿ ಒತ್ತಾಯಿಸಿದರು. </p>.<p>ಬೆಳ್ತಂಗಡಿ ಕ್ರೀಡಾಂಗಣದಲ್ಲಿ ಅಂಬೇಡ್ಕರ್ ಭವನದ ನಿವೇಶನಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಮತ್ತು ಸರ್ಕಾರಿ ಮಟ್ಟದಲ್ಲಿ ಹಲವಾರು ಬಾರಿ ಪ್ರಯತ್ನಿಸಿದ್ದು, ಪ್ರಕ್ರಿಯೆ ಏನಾಗಿದೆ ಎಂದು ಶೇಖರ್ ಕುಕ್ಕೇಡಿ ಕೇಳಿದರು. ತಹಶೀಲ್ದಾರ್ ಉತ್ತರಿಸಿ, ಈಗಾಗಲೇ 4 ಎಕರೆ ಜಮೀನು ಸರ್ಕಾರದ ಆರ್ಟಿಸಿ ಆಗಿದ್ದು, ಕೆಲವೇ ದಿನಗಳಲ್ಲಿ ಅಂಬೇಡ್ಕರ್ ಭವನಕ್ಕೆ ಮೀಸಲಿಡಲಾಗುವುದು ಎಂದರು.</p>.<p>ತಾಲ್ಲೂಕಿನ ಸಹಕಾರ ಕ್ಷೇತ್ರದ ಉದ್ಯೋಗದಲ್ಲಿ ದಲಿತರಿಗೆ ಅನ್ಯಾಯ ಮಾಡಲಾಗುತ್ತಿದೆ. ಕಸ ಗುಡಿಸುವ, ಕಚೇರಿ ತೆರೆಯುವ ಕೆಲಸವನ್ನು ದಲಿತರಿಂದ ಮಾಡಿಸಲಾಗುತ್ತಿದೆ. ಬಹುಸಂಖ್ಯೆಯಲ್ಲಿರುವ ದಲಿತರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ತಾರತಮ್ಯ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮುಖಂಡರು ಒತ್ತಾಯಿಸಿದರು.</p>.<p>ಸಹಕಾರ ಸಂಘಗಳ ಅಧಿಕಾರಿ ಪ್ರತಿಮಾ ಉತ್ತರಿಸಿ, ಬಹುತೇಕ ಎಲ್ಲ ಸಹಕಾರ ಸಂಘಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಿಬ್ಬಂದಿ ಇದ್ದಾರೆ ಎಂದರು. ಯಾವ ಸಹಕಾರ ಸಂಘಗಳಲ್ಲಿ ಸಿಇಒ ಹುದ್ದೆಯಲ್ಲಿ ದಲಿತರು ಇದ್ದಾರೆ ಎಂದು ಮುಖಂಡರು ಪ್ರಶ್ನಿಸಿದರು. ಈ ಹುದ್ದೆ ಅನುಭವದ ಅಧಾರದಲ್ಲಿ ಸಿಗುತ್ತದೆ ಎಂದಾಗ ನೇಮಕವೇ ಆಗದಿದ್ದರೆ ಪದೊನ್ನತಿ ಎಲ್ಲಿ ಸಿಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕೊಯ್ಯೂರು ಭೀಮಂಡೆ ಬಳಿ ಮೂರು ದಿನವಾದರೂ ವಿದ್ಯುತ್ ಬಂದಿಲ್ಲ. ಪವರ್ಮ್ಯಾನ್ಗಳು ಕರೆ ಸ್ವೀಕರಿಸುತ್ತಿಲ್ಲ ಎಂದು ಬಿ.ಕೆ.ವಸಂತ್ ಆರೋಪಿಸಿದರು.</p>.<p>ಸವಣಾಲು ಹಿತ್ತಿಲ ಪೇಲ ಬಳಿ ಸೇತುವೆ ನಿರ್ಮಿಸದೆ ನಿರ್ಲಕ್ಷ್ಯ ವಹಿಸಿದ ಇಲಾಖೆಯ ವಿರುದ್ಧ ಕ್ರಮ ಕೈಗೊಳ್ಳಬೇಕು. ತಕ್ಷಣ ಸೇತುವೆ ನಿರ್ಮಿಸಬೇಕೆಂದು ಶೇಖರ ಎಲ್. ಒತ್ತಾಯಿಸಿದರು. ಈ ಬಗ್ಗೆ ಪ್ರಸ್ತಾಪನೆ ಸಲ್ಲಿಸಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದರು.</p>.<p>ಮುಗುಳಿ ಬಳಿ ಎರಡು ಹಾಸ್ಟೆಲ್ಗಳಿದ್ದು ಸುಮಾರು 200 ವಿದ್ಯಾರ್ಥಿಗಳಿದ್ದಾರೆ. ಅವರು 5 ಕಿ.ಮೀ ನಡೆದುಕೊಂಡು ಹೋಗಬೇಕು. ಇಲ್ಲದೆ ಇದ್ದರ ಆಟೊ ಅವಲಂಬಿಸಬೇಕು. ಸಮಸ್ಯೆ ನಿವಾರಿಸಲು ಸರ್ಕಾರಿ ಬಸ್ ವ್ಯವಸ್ಥೆ ಮಾಡಬೇಕು ಎಂದು ಸಂಜೀವ ಆರ್., ಬಿ.ಕೆ.ವಸಂತ್ ಒತ್ತಾಯಿಸಿದರು.</p>.<p>ಬೆಳ್ತಂಗಡಿ ಹಳೆಕೋಟೆ ಬಳಿ ಇರುವ ಹಾಸ್ಟೆಲ್ನಿಂದ ರಾತ್ರಿ 9ಗಂಟೆಯ ನಂತರ ವಿದ್ಯಾರ್ಥಿಗಳು ಪೇಟೆ ಕಡೆ ಸುತ್ತಾಡುತ್ತಿರುತ್ತಾರೆ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಬಿ.ಕೆ.ವಸಂತ್ ಒತ್ತಾಯಿಸಿದರು. </p>.<p>ಬೆಳ್ತಂಗಡಿ ಸಮುದಾಯ ಆಸ್ಪತ್ರೆ ಡಿ ದರ್ಜೆ ನೌಕರಿಗೆ ಪ್ರತಿ ತಿಂಗಳು ವೇತನವಾಗುವಂತೆ ನೋಡಿಕೊಳ್ಳಬೇಕು. ಕರಂಬಾರು ಅಂಬೇಡ್ಕರ್ ಭವನಕ್ಕೆ ಮೀಸಲಿಟ್ಟ ಜಾಗವನ್ನು ರಸ್ತೆಗೆ ಬಳಸಲಾಗುತ್ತಿದ್ದು, ಕ್ರಮ ಕೈಗೊಳ್ಳಬೇಕು. ಕಣಿಯೂರಿನಲ್ಲಿ ನಿರ್ಮಾಣವಾಗುತ್ತಿರುವ ಅಂಬೇಡ್ಕರ್ ಭವನದಲ್ಲಿ ಉದ್ಘಾಟನೆಗೆ ಮೊದಲೇ ನೀರು ಸೋರುತ್ತಿದ್ದು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಸಭೆಯಲ್ಲಿ ಒತ್ತಾಯಿಸಲಾಯಿತು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಸಮಾಜ ಕಲ್ಯಾಣಾಧಿಕಾರಿ ಧನಂಜಯ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳ್ತಂಗಡಿ:</strong> ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಆಲಿಸುವ ಸಭೆಯು ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಮಿನಿ ವಿಧಾಸೌಧದ ಸಭಾಂಗಣದಲ್ಲಿ ಸೋಮವಾರ ನಡೆಯಿತು.</p>.<p>ರೆಂಕೆದಗುತ್ತು, ನಾರಾವಿ ಸೇರಿದಂತೆ ವಿವಿಧ ಕಡೆಗಳಲ್ಲಿ ದಲಿತರು ಮನೆ ಕಟ್ಟಲು ಸರ್ಕಾರಿ ಭೂಮಿ ಒತ್ತುವರಿ ಮಾಡಿದರೆ ಕಂದಾಯ ಇಲಾಖೆ ತ್ವರಿತಗತಿಯಲ್ಲಿ ತೆರವುಗೊಳಿಸುತ್ತದೆ. ಆದರೆ, ಶ್ರೀಮಂತರು ಒತ್ತುವರಿ ಮಾಡಿದ್ದಾರೆ. ಅವರಿಗೆ ಪಟ್ಟಣ ಪಂಚಾಯಿತಿ ಸಹಿತ ಸ್ಥಳೀಯ ಆಡಳಿತಗಳು ವಿದ್ಯುತ್, ನೀರು ಸಂಪರ್ಕಕ್ಕೆ ಪರವಾನಗಿ ಕೊಡುತ್ತಾರೆ. ಈ ರೀತಿಯ ಧೋರಣೆಯನ್ನು ಖಂಡಿಸುವುದಾಗಿ ಮುಖಂಡರಾದ ಸಂಜೀವ ಆರ್., ಬಿ.ಕೆ.ವಸಂತ್, ರಮೇಶ್ ಆರ್., ಶೇಖರ್ ಲಾಯಿಲ, ಶೇಖರ್ ಕುಕ್ಕೇಡಿ, ನೇಮಿರಾಜ್ ಕಿಲ್ಲೂರು ಹೇಳಿದರು.</p>.<p>ಈ ರೀತಿಯ ತಾರತಮ್ಯ ಮಾಡುವುದಿಲ್ಲ. ಹೊಸದಾಗಿ ಒತ್ತುವರಿ ಮಾಡಿದ್ದರೆ ಕ್ರಮ ಕೈಗೊಳ್ಳಲಾಗುತ್ತದೆ. ಹಿಂದೆ ಒತ್ತುವರಿ ಮಾಡಿದ್ದರೆ ಅಂಥವರಿಗೆ ನೋಟೀಸ್ ನೀಡಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಇಲಾಖೆ ಮುಂದಾಗುತ್ತಿದೆ ಎಂದು ತಹಶೀಲ್ದಾರ್ ಹೇಳಿದರು.</p>.<p>ಸುಲ್ಕೇರಿಮೊಗ್ರು ಮಾಳಿಗೆ ಪರಿಶಿಷ್ಟ ಪಂಗಡದವರ ಕಾಲೊನಿಗೆ ವಿದ್ಯುತ್ ಸಂಪರ್ಕ ಇಲ್ಲದೆ ತೊಂದರೆ ಆಗುತ್ತಿದೆ. ಈ ಸಂಬಂಧ ಸಚಿವರನ್ನು ಭೇಟಿಯಾಗಿ ಅನುಮೋದನೆ ಪಡೆದಿದ್ದೇವೆ. ಕಾಮಗಾರಿ ನಡೆಯುತ್ತಿದ್ದು, ದೀಪಾವಳಿ ಒಳಗೆ ಈ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ನೀಡುವಂತೆ ಮುಖಂಡ ಶೇಖರ ಕುಕ್ಕೇಡಿ ಒತ್ತಾಯಿಸಿದರು.</p>.<p>ಪ್ರತಿಕ್ರಿಯಿಸಿದ ಬೆಳ್ತಂಗಡಿ ಮೆಸ್ಕಾಂ ಉಪವಿಭಾಗದ ಎಇಇ ಬೆಂಜಮಿನ್ ಬ್ರಾಗ್ಸ್, ಕಂಬ ಅಳವಡಿಸುವ ಕಾಮಗಾರಿ ನಡೆಯುತ್ತಿದ್ದು, ಕೇಬಲ್ಗಾಗಿ ಟೆಂಡರ್ ಪ್ರಕ್ರಿಯೆ ನಡೆದಿದೆ. ಮುಂಬೈ ಮೂಲದ ಕಂಪನಿ ಸರಬರಾಜು ಮಾಡಲು ಒಪ್ಪಿದ್ದು, ಅಕ್ಟೋಬರ್ ಒಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.</p>.<p>ತಾಲ್ಲೂಕಿನ ಪ್ರತಿ ಮಂಡಲ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂಬೇಡ್ಕರ್ ಭವನಕ್ಕೆ 50 ಸೆಂಟ್ಸ್ ಜಾಗ ಮೀಸಲಿಡಲು ಸಭೆಯಲ್ಲಿ ಒತ್ತಾಯಿಸಿದರು. </p>.<p>ಬೆಳ್ತಂಗಡಿ ಕ್ರೀಡಾಂಗಣದಲ್ಲಿ ಅಂಬೇಡ್ಕರ್ ಭವನದ ನಿವೇಶನಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಮತ್ತು ಸರ್ಕಾರಿ ಮಟ್ಟದಲ್ಲಿ ಹಲವಾರು ಬಾರಿ ಪ್ರಯತ್ನಿಸಿದ್ದು, ಪ್ರಕ್ರಿಯೆ ಏನಾಗಿದೆ ಎಂದು ಶೇಖರ್ ಕುಕ್ಕೇಡಿ ಕೇಳಿದರು. ತಹಶೀಲ್ದಾರ್ ಉತ್ತರಿಸಿ, ಈಗಾಗಲೇ 4 ಎಕರೆ ಜಮೀನು ಸರ್ಕಾರದ ಆರ್ಟಿಸಿ ಆಗಿದ್ದು, ಕೆಲವೇ ದಿನಗಳಲ್ಲಿ ಅಂಬೇಡ್ಕರ್ ಭವನಕ್ಕೆ ಮೀಸಲಿಡಲಾಗುವುದು ಎಂದರು.</p>.<p>ತಾಲ್ಲೂಕಿನ ಸಹಕಾರ ಕ್ಷೇತ್ರದ ಉದ್ಯೋಗದಲ್ಲಿ ದಲಿತರಿಗೆ ಅನ್ಯಾಯ ಮಾಡಲಾಗುತ್ತಿದೆ. ಕಸ ಗುಡಿಸುವ, ಕಚೇರಿ ತೆರೆಯುವ ಕೆಲಸವನ್ನು ದಲಿತರಿಂದ ಮಾಡಿಸಲಾಗುತ್ತಿದೆ. ಬಹುಸಂಖ್ಯೆಯಲ್ಲಿರುವ ದಲಿತರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ತಾರತಮ್ಯ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮುಖಂಡರು ಒತ್ತಾಯಿಸಿದರು.</p>.<p>ಸಹಕಾರ ಸಂಘಗಳ ಅಧಿಕಾರಿ ಪ್ರತಿಮಾ ಉತ್ತರಿಸಿ, ಬಹುತೇಕ ಎಲ್ಲ ಸಹಕಾರ ಸಂಘಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಿಬ್ಬಂದಿ ಇದ್ದಾರೆ ಎಂದರು. ಯಾವ ಸಹಕಾರ ಸಂಘಗಳಲ್ಲಿ ಸಿಇಒ ಹುದ್ದೆಯಲ್ಲಿ ದಲಿತರು ಇದ್ದಾರೆ ಎಂದು ಮುಖಂಡರು ಪ್ರಶ್ನಿಸಿದರು. ಈ ಹುದ್ದೆ ಅನುಭವದ ಅಧಾರದಲ್ಲಿ ಸಿಗುತ್ತದೆ ಎಂದಾಗ ನೇಮಕವೇ ಆಗದಿದ್ದರೆ ಪದೊನ್ನತಿ ಎಲ್ಲಿ ಸಿಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕೊಯ್ಯೂರು ಭೀಮಂಡೆ ಬಳಿ ಮೂರು ದಿನವಾದರೂ ವಿದ್ಯುತ್ ಬಂದಿಲ್ಲ. ಪವರ್ಮ್ಯಾನ್ಗಳು ಕರೆ ಸ್ವೀಕರಿಸುತ್ತಿಲ್ಲ ಎಂದು ಬಿ.ಕೆ.ವಸಂತ್ ಆರೋಪಿಸಿದರು.</p>.<p>ಸವಣಾಲು ಹಿತ್ತಿಲ ಪೇಲ ಬಳಿ ಸೇತುವೆ ನಿರ್ಮಿಸದೆ ನಿರ್ಲಕ್ಷ್ಯ ವಹಿಸಿದ ಇಲಾಖೆಯ ವಿರುದ್ಧ ಕ್ರಮ ಕೈಗೊಳ್ಳಬೇಕು. ತಕ್ಷಣ ಸೇತುವೆ ನಿರ್ಮಿಸಬೇಕೆಂದು ಶೇಖರ ಎಲ್. ಒತ್ತಾಯಿಸಿದರು. ಈ ಬಗ್ಗೆ ಪ್ರಸ್ತಾಪನೆ ಸಲ್ಲಿಸಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದರು.</p>.<p>ಮುಗುಳಿ ಬಳಿ ಎರಡು ಹಾಸ್ಟೆಲ್ಗಳಿದ್ದು ಸುಮಾರು 200 ವಿದ್ಯಾರ್ಥಿಗಳಿದ್ದಾರೆ. ಅವರು 5 ಕಿ.ಮೀ ನಡೆದುಕೊಂಡು ಹೋಗಬೇಕು. ಇಲ್ಲದೆ ಇದ್ದರ ಆಟೊ ಅವಲಂಬಿಸಬೇಕು. ಸಮಸ್ಯೆ ನಿವಾರಿಸಲು ಸರ್ಕಾರಿ ಬಸ್ ವ್ಯವಸ್ಥೆ ಮಾಡಬೇಕು ಎಂದು ಸಂಜೀವ ಆರ್., ಬಿ.ಕೆ.ವಸಂತ್ ಒತ್ತಾಯಿಸಿದರು.</p>.<p>ಬೆಳ್ತಂಗಡಿ ಹಳೆಕೋಟೆ ಬಳಿ ಇರುವ ಹಾಸ್ಟೆಲ್ನಿಂದ ರಾತ್ರಿ 9ಗಂಟೆಯ ನಂತರ ವಿದ್ಯಾರ್ಥಿಗಳು ಪೇಟೆ ಕಡೆ ಸುತ್ತಾಡುತ್ತಿರುತ್ತಾರೆ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಬಿ.ಕೆ.ವಸಂತ್ ಒತ್ತಾಯಿಸಿದರು. </p>.<p>ಬೆಳ್ತಂಗಡಿ ಸಮುದಾಯ ಆಸ್ಪತ್ರೆ ಡಿ ದರ್ಜೆ ನೌಕರಿಗೆ ಪ್ರತಿ ತಿಂಗಳು ವೇತನವಾಗುವಂತೆ ನೋಡಿಕೊಳ್ಳಬೇಕು. ಕರಂಬಾರು ಅಂಬೇಡ್ಕರ್ ಭವನಕ್ಕೆ ಮೀಸಲಿಟ್ಟ ಜಾಗವನ್ನು ರಸ್ತೆಗೆ ಬಳಸಲಾಗುತ್ತಿದ್ದು, ಕ್ರಮ ಕೈಗೊಳ್ಳಬೇಕು. ಕಣಿಯೂರಿನಲ್ಲಿ ನಿರ್ಮಾಣವಾಗುತ್ತಿರುವ ಅಂಬೇಡ್ಕರ್ ಭವನದಲ್ಲಿ ಉದ್ಘಾಟನೆಗೆ ಮೊದಲೇ ನೀರು ಸೋರುತ್ತಿದ್ದು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಸಭೆಯಲ್ಲಿ ಒತ್ತಾಯಿಸಲಾಯಿತು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಸಮಾಜ ಕಲ್ಯಾಣಾಧಿಕಾರಿ ಧನಂಜಯ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>