<p><strong>ಬೆಳ್ತಂಗಡಿ:</strong> ಚಿನ್ನವನ್ನು ಪಾಲಿಶ್ ಮಾಡಿಕೊಡುವ ನೆಪದಲ್ಲಿ ವ್ಯಕ್ತಿಯೊಬ್ಬ ಮನೆಗೆ ಬಂದು ರಾಸಾಯನಿಕ ಬಳಸಿ ಚಿನ್ನವನ್ನು ಕರಗಿಸಿ ವಂಚನೆ ಮಾಡಿ ಪರಾರಿಯಾದ ಪ್ರಕರಣ ಸಂಬಂಧ ವೇಣೂರು ಪೊಲೀಸರು ಮೂಡುಬಿದಿರೆ ತಾಲ್ಲೂಕಿನ ಗಂಟಾಲ್ಕಟ್ಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.</p>.<p>ಬಿಹಾರ ರಾಜ್ಯದ ಸುಫೋಲ್ ಜಿಲ್ಲೆಯ ತ್ರಿವೇಣೆಗಂಝ್ ತಾಲ್ಲೂಕಿನ ರಘನಾಥಪುರ ಗ್ರಾಮದ ನಿವಾಸಿ ಸೂರಜ್ ದೇವ್ ಮಂಡಲ್ ಪುತ್ರ ಚಂದನ್ ಕುಮಾರ್ (30) ಆರೋಪಿ.</p>.<p>ಬೆಳ್ತಂಗಡಿ ತಾಲ್ಲೂಕಿನ ಕಾಶಿಪಟ್ನದ ಮಹಿಳೆಯೊಬ್ಬರ ಮನೆಗೆ ಸೇಲ್ಸ್ ಮ್ಯಾನ್ ಎಂದು ಪರಿಚಯಿಸಿ ಚಿನ್ನದ ಒಡವೆಗಳನ್ನು ಪಾಲಿಶ್ ಮಾಡಿಕೊಡುವ ನೆಪದಲ್ಲಿ ಪಡೆದು ಕರಗಿಸಿ ವಂಚಿಸಿದ್ದ.</p>.<p>ಡಿವೈಎಸ್ಪಿ ರೋಹಿನಿ ಸಿ.ಕೆ., ಬೆಳ್ತಂಗಡಿ ಸಿಪಿಐ ರವಿ ಬಿ.ಎಸ್. ಮಾರ್ಗದರ್ಶನದಲ್ಲಿ ವೇಣೂರು ಠಾಣೆ ಪಿಎಸ್ಐ ಅಕ್ಷಯ್ ಡವಗಿ, ಓಮನ ಎನ್. ನೇತೃತ್ವದಲ್ಲಿ ಎಎಸ್ಐಗಳಾದ ವೆಂಕಟೇಶ್ ನಾಯ್ಕ್, ಬೆನ್ನಿಚ್ಚನ್, ಕೃಷ್ಣ, ಕೇಶವತಿ, ಬಸವರಾಜ್, ಮೋಹನ್, ರಾಕೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳ್ತಂಗಡಿ:</strong> ಚಿನ್ನವನ್ನು ಪಾಲಿಶ್ ಮಾಡಿಕೊಡುವ ನೆಪದಲ್ಲಿ ವ್ಯಕ್ತಿಯೊಬ್ಬ ಮನೆಗೆ ಬಂದು ರಾಸಾಯನಿಕ ಬಳಸಿ ಚಿನ್ನವನ್ನು ಕರಗಿಸಿ ವಂಚನೆ ಮಾಡಿ ಪರಾರಿಯಾದ ಪ್ರಕರಣ ಸಂಬಂಧ ವೇಣೂರು ಪೊಲೀಸರು ಮೂಡುಬಿದಿರೆ ತಾಲ್ಲೂಕಿನ ಗಂಟಾಲ್ಕಟ್ಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.</p>.<p>ಬಿಹಾರ ರಾಜ್ಯದ ಸುಫೋಲ್ ಜಿಲ್ಲೆಯ ತ್ರಿವೇಣೆಗಂಝ್ ತಾಲ್ಲೂಕಿನ ರಘನಾಥಪುರ ಗ್ರಾಮದ ನಿವಾಸಿ ಸೂರಜ್ ದೇವ್ ಮಂಡಲ್ ಪುತ್ರ ಚಂದನ್ ಕುಮಾರ್ (30) ಆರೋಪಿ.</p>.<p>ಬೆಳ್ತಂಗಡಿ ತಾಲ್ಲೂಕಿನ ಕಾಶಿಪಟ್ನದ ಮಹಿಳೆಯೊಬ್ಬರ ಮನೆಗೆ ಸೇಲ್ಸ್ ಮ್ಯಾನ್ ಎಂದು ಪರಿಚಯಿಸಿ ಚಿನ್ನದ ಒಡವೆಗಳನ್ನು ಪಾಲಿಶ್ ಮಾಡಿಕೊಡುವ ನೆಪದಲ್ಲಿ ಪಡೆದು ಕರಗಿಸಿ ವಂಚಿಸಿದ್ದ.</p>.<p>ಡಿವೈಎಸ್ಪಿ ರೋಹಿನಿ ಸಿ.ಕೆ., ಬೆಳ್ತಂಗಡಿ ಸಿಪಿಐ ರವಿ ಬಿ.ಎಸ್. ಮಾರ್ಗದರ್ಶನದಲ್ಲಿ ವೇಣೂರು ಠಾಣೆ ಪಿಎಸ್ಐ ಅಕ್ಷಯ್ ಡವಗಿ, ಓಮನ ಎನ್. ನೇತೃತ್ವದಲ್ಲಿ ಎಎಸ್ಐಗಳಾದ ವೆಂಕಟೇಶ್ ನಾಯ್ಕ್, ಬೆನ್ನಿಚ್ಚನ್, ಕೃಷ್ಣ, ಕೇಶವತಿ, ಬಸವರಾಜ್, ಮೋಹನ್, ರಾಕೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>