<p>ಬೆಳ್ತಂಗಡಿ: ತಾಲ್ಲೂಕಿನ ಮಲವಂತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುದುರೆಮುಖ ರಾಷ್ಟ್ರೀಯ ಉದ್ಯಾನದಲ್ಲಿ ವಾಸವಾಗಿರುವ 9 ಕುಟುಂಬಗಳ ಪುನರ್ವಸತಿಗೆ ಅಂದಾಜು ಮೊತ್ತ ₹ 10 ಕೋಟಿ ಅನುದಾನವನ್ನು ಮಂಜೂರುಗೊಳಿಸುವಂತೆ ಕೆಪಿಸಿಸಿ ಪ್ರಧಾನ ಕಾರ್ಯ ದರ್ಶಿ ರಕ್ಷಿತ್ ಶಿವರಾಂ ನೇತೃತ್ವದ ನಿಯೋಗವು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.</p>.<p>ಇಲ್ಲಿನ 9 ಕುಟುಂಬಗಳು ಸ್ವಯಂ ಪ್ರೇರಿತ ಪುನರ್ವಸತಿಗೆ ಒಲವು ತೋರಿದ್ದು, ಈಗಾಗಲೇ ಕಡತ ಸಿದ್ಧಪಡಿಸಿ ಅಂದಾಜು ಮೊತ್ತವನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಮಕ್ಷಮದಲ್ಲಿ ಮುಕ್ತಾಯದ ಹಂತಕ್ಕೆ ಬಂದಿದೆ. ಈ ಬಗ್ಗೆ ಸ್ವಯಂ ಪ್ರೇರಿತ ಪುನರ್ವಸತಿಗೆ ಒಲವು ಹೊಂದಿರುವ ಕುಟುಂಬಗಳ ಸದಸ್ಯರು ಸಚಿವರನ್ನು ಭೇಟಿ ಮಾಡಿದರು. ಮನವಿಗೆ ಸಚಿವರು ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ರಕ್ಷಿತ್ ಶಿವರಾಂ ತಿಳಿಸಿದ್ದಾರೆ.</p>.<p>ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೊ, ಮಲವಂತಿಗೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕೆ. ಯು. ಮೊಹಮ್ಮದ್, ಫಲಾನುಭವಿ ಗಳಾದ ಸಂತೋಷ್ ಗೌಡ, ನಾರಾಯಣ ಮಲೆ ಕುಡಿಯ, ಬಾಲಕೃಷ್ಣ ಮಲೆಕುಡಿಯ, ಹರೀಶ್ ಮಲೆಕುಡಿಯ, ಪುರಂದರ ಗೌಡ ಜತೆಗಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-126-1910997074</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳ್ತಂಗಡಿ: ತಾಲ್ಲೂಕಿನ ಮಲವಂತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುದುರೆಮುಖ ರಾಷ್ಟ್ರೀಯ ಉದ್ಯಾನದಲ್ಲಿ ವಾಸವಾಗಿರುವ 9 ಕುಟುಂಬಗಳ ಪುನರ್ವಸತಿಗೆ ಅಂದಾಜು ಮೊತ್ತ ₹ 10 ಕೋಟಿ ಅನುದಾನವನ್ನು ಮಂಜೂರುಗೊಳಿಸುವಂತೆ ಕೆಪಿಸಿಸಿ ಪ್ರಧಾನ ಕಾರ್ಯ ದರ್ಶಿ ರಕ್ಷಿತ್ ಶಿವರಾಂ ನೇತೃತ್ವದ ನಿಯೋಗವು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.</p>.<p>ಇಲ್ಲಿನ 9 ಕುಟುಂಬಗಳು ಸ್ವಯಂ ಪ್ರೇರಿತ ಪುನರ್ವಸತಿಗೆ ಒಲವು ತೋರಿದ್ದು, ಈಗಾಗಲೇ ಕಡತ ಸಿದ್ಧಪಡಿಸಿ ಅಂದಾಜು ಮೊತ್ತವನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಮಕ್ಷಮದಲ್ಲಿ ಮುಕ್ತಾಯದ ಹಂತಕ್ಕೆ ಬಂದಿದೆ. ಈ ಬಗ್ಗೆ ಸ್ವಯಂ ಪ್ರೇರಿತ ಪುನರ್ವಸತಿಗೆ ಒಲವು ಹೊಂದಿರುವ ಕುಟುಂಬಗಳ ಸದಸ್ಯರು ಸಚಿವರನ್ನು ಭೇಟಿ ಮಾಡಿದರು. ಮನವಿಗೆ ಸಚಿವರು ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ರಕ್ಷಿತ್ ಶಿವರಾಂ ತಿಳಿಸಿದ್ದಾರೆ.</p>.<p>ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೊ, ಮಲವಂತಿಗೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕೆ. ಯು. ಮೊಹಮ್ಮದ್, ಫಲಾನುಭವಿ ಗಳಾದ ಸಂತೋಷ್ ಗೌಡ, ನಾರಾಯಣ ಮಲೆ ಕುಡಿಯ, ಬಾಲಕೃಷ್ಣ ಮಲೆಕುಡಿಯ, ಹರೀಶ್ ಮಲೆಕುಡಿಯ, ಪುರಂದರ ಗೌಡ ಜತೆಗಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-126-1910997074</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>