<p><strong>ಬೆಳ್ತಂಗಡಿ:</strong> ಮಾರಾಟ ಮಾಡಲು ಕಾರಿನಲ್ಲಿ ಎಂಡಿಎಂಎ ಸಂಗ್ರಹಿಸಿಟ್ಟದ್ದನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p><p>ಬೆಳ್ತಂಗಡಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುವೆಟ್ಟು ಗ್ರಾಮದ ಮದ್ದಡ್ಕ ರಸ್ತೆಯಲ್ಲಿ ಶನಿವಾರ ಸಂಜೆ ಬೆಳ್ತಂಗಡಿ ಪಿಎಸ್ಐ ಆನಂದ್ ಎಂ. ನೇತೃತ್ವದ ತಂಡ ಕರ್ತವ್ಯದಲ್ಲಿದ್ದಾಗ ಅನುಮಾನಾಸ್ಪದವಾಗಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಕಾರನ್ನು ಪರಿಶೀಲಿಸಿದಾಗ ಕಾರಿನ ಒಳಗೆ ಮಾದಕ ವಸ್ತು ಪತ್ತೆಯಾಗಿದೆ.</p><p>₹ 5.54 ಲಕ್ಷ ಮೌಲ್ಯದ 55.48 ಗ್ರಾಂ ಎಂಡಿಎಂಎ, ₹ 6 ಲಕ್ಷ ಮೌಲ್ಯದ ಕಾರನ್ನು ವಶಪಡಿಸಿಕೊಂಡಿದ್ದಾರೆ. ದೇರಳಕಟ್ಟೆಯ ಕೋಟೆಕಾರು ಉಮರ್ ಶರೀಫ್ (42) ಆರೋಪಿ. ಬೆಳ್ತಂಗಡಿ ತಾಲ್ಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ ಜ್ಯೂಸ್ ಹೌಸ್ ಅಂಗಡಿ ಹೊಂದಿದ್ದಾನೆ.</p><p>ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿನಿ ಸಿ.ಕೆ. ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಪೂರ್ ಮಠ ನೇತೃತ್ವದಲ್ಲಿ ಎಎಸ್ಐ ತಿಲಕ್ ರಾಜ್, ಪಂಪಾಪತಿ, ಶ್ರೀನಿವಾಸ, ಗಿರೀಶ್, ಪ್ರಕಾಶ್ ಪೂಜಾರಿ, ಜಗದೀಶ್, ಧರಿಶ್, ಯಮನಪ್ಪ, ದುಂಡಪ್ಪ, ಎಫ್ಎಸ್ಎಲ್ ತಂಡದ ಅರ್ಪಿತಾ, ಕಾವ್ಯಶ್ರೀ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳ್ತಂಗಡಿ:</strong> ಮಾರಾಟ ಮಾಡಲು ಕಾರಿನಲ್ಲಿ ಎಂಡಿಎಂಎ ಸಂಗ್ರಹಿಸಿಟ್ಟದ್ದನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p><p>ಬೆಳ್ತಂಗಡಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುವೆಟ್ಟು ಗ್ರಾಮದ ಮದ್ದಡ್ಕ ರಸ್ತೆಯಲ್ಲಿ ಶನಿವಾರ ಸಂಜೆ ಬೆಳ್ತಂಗಡಿ ಪಿಎಸ್ಐ ಆನಂದ್ ಎಂ. ನೇತೃತ್ವದ ತಂಡ ಕರ್ತವ್ಯದಲ್ಲಿದ್ದಾಗ ಅನುಮಾನಾಸ್ಪದವಾಗಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಕಾರನ್ನು ಪರಿಶೀಲಿಸಿದಾಗ ಕಾರಿನ ಒಳಗೆ ಮಾದಕ ವಸ್ತು ಪತ್ತೆಯಾಗಿದೆ.</p><p>₹ 5.54 ಲಕ್ಷ ಮೌಲ್ಯದ 55.48 ಗ್ರಾಂ ಎಂಡಿಎಂಎ, ₹ 6 ಲಕ್ಷ ಮೌಲ್ಯದ ಕಾರನ್ನು ವಶಪಡಿಸಿಕೊಂಡಿದ್ದಾರೆ. ದೇರಳಕಟ್ಟೆಯ ಕೋಟೆಕಾರು ಉಮರ್ ಶರೀಫ್ (42) ಆರೋಪಿ. ಬೆಳ್ತಂಗಡಿ ತಾಲ್ಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ ಜ್ಯೂಸ್ ಹೌಸ್ ಅಂಗಡಿ ಹೊಂದಿದ್ದಾನೆ.</p><p>ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿನಿ ಸಿ.ಕೆ. ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಪೂರ್ ಮಠ ನೇತೃತ್ವದಲ್ಲಿ ಎಎಸ್ಐ ತಿಲಕ್ ರಾಜ್, ಪಂಪಾಪತಿ, ಶ್ರೀನಿವಾಸ, ಗಿರೀಶ್, ಪ್ರಕಾಶ್ ಪೂಜಾರಿ, ಜಗದೀಶ್, ಧರಿಶ್, ಯಮನಪ್ಪ, ದುಂಡಪ್ಪ, ಎಫ್ಎಸ್ಎಲ್ ತಂಡದ ಅರ್ಪಿತಾ, ಕಾವ್ಯಶ್ರೀ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>