<p><strong>ಬೆಳ್ತಂಗಡಿ: </strong>ವಸತಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಖಾತೆ ಸಚಿವ ವಿ. ಸೋಮಣ್ಣ ವಾರದ ಹಿಂದೆ ಬೆಳ್ತಂಗಡಿಗೆ ಬೇಟಿ ನೀಡಿದ ಸಂದರ್ಭ ಮಿನಿ ವಿಮಾನ ನಿಲ್ದಾಣ ನಿರ್ಮಾಣ ಘೋಷಿಸಿದ್ದು, ಈ ಬಗ್ಗೆ ಅಧಿಕಾರಿಗಳು ಮಂಗಳವಾರ ಜಾಗ ಗುರುತಿಸುವಿಕೆ ಕಾರ್ಯ ನಡೆಸಿದರು.</p>.<p>ಧರ್ಮಸ್ಥಳ ಹಾಗೂ ಲಾಯಿಲ ಗ್ರಾಮದಲ್ಲಿ ಸ್ಥಳ ಪರಿಶೀಲನೆ ಕಾರ್ಯ ನಡೆದಿದ್ದು ಬೆಳ್ತಂಗಡಿಯ ಸಾಲು ಮರದ ತಿಮ್ಮಕ್ಕ ಉದ್ಯಾನ ಸಮೀಪದ ಲಾಯಿಲ ಹಾಗೂ ಮೇಲಂತಬೆಟ್ಟು ಗಡಿ ಭಾಗಗಳಲ್ಲಿ ಅಧಿಕಾರಿಗಳು ಸ್ಥಳ ವೀಕ್ಷಣೆಯನ್ನು ಮಾಡಿದ್ದಾರೆ.</p>.<p>ಮಿನಿ ವಿಮಾನ ನಿಲ್ದಾಣಕ್ಕೆ 100 ಎಕರೆಯಷ್ಟು ಜಾಗ ಬೇಕಾಗಿದ್ದು, ಅದರ ಸುತ್ತಮುತ್ತ ಬೆಟ್ಟ ಗುಡ್ಡಗಳು ಅಡ್ಡ ಬಾರದಂತೆ ಜಾಗ ಗುರುತಿಸಬೇಕಾಗಿರುವುದರಿಂದ ಈ ಪ್ರದೇಶದಲ್ಲೂ ವೀಕ್ಷಣೆ ಮಾಡಲಾಗಿದೆ.</p>.<p>ಪೂರ್ವಿ ಮಠ್ ನೇತೃತ್ವದ ಬೆಂಗಳೂರಿನ ಕೆ.ಎಸ್.ಐ.ಐ.ಡಿ.ಸಿ ತಾಂತ್ರಿಕ ವಿಭಾಗದ ಅಧಿಕಾರಿಗಳು, ಪುತ್ತೂರು ಉಪ ವಿಭಾಗಾಧಿಕಾರಿ ಗಿರೀಶ್ ನಂದನ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್, ಕಂದಾಯ ನಿರೀಕ್ಷಕ ಪ್ರತೀಶ್, ಲಾಯಿಲ ಗ್ರಾಮಲೆಕ್ಕಿಗರಾದ ರನಿತಾ, ಗ್ರಾಮ ಸಹಾಯಕ ಸತೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳ್ತಂಗಡಿ: </strong>ವಸತಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಖಾತೆ ಸಚಿವ ವಿ. ಸೋಮಣ್ಣ ವಾರದ ಹಿಂದೆ ಬೆಳ್ತಂಗಡಿಗೆ ಬೇಟಿ ನೀಡಿದ ಸಂದರ್ಭ ಮಿನಿ ವಿಮಾನ ನಿಲ್ದಾಣ ನಿರ್ಮಾಣ ಘೋಷಿಸಿದ್ದು, ಈ ಬಗ್ಗೆ ಅಧಿಕಾರಿಗಳು ಮಂಗಳವಾರ ಜಾಗ ಗುರುತಿಸುವಿಕೆ ಕಾರ್ಯ ನಡೆಸಿದರು.</p>.<p>ಧರ್ಮಸ್ಥಳ ಹಾಗೂ ಲಾಯಿಲ ಗ್ರಾಮದಲ್ಲಿ ಸ್ಥಳ ಪರಿಶೀಲನೆ ಕಾರ್ಯ ನಡೆದಿದ್ದು ಬೆಳ್ತಂಗಡಿಯ ಸಾಲು ಮರದ ತಿಮ್ಮಕ್ಕ ಉದ್ಯಾನ ಸಮೀಪದ ಲಾಯಿಲ ಹಾಗೂ ಮೇಲಂತಬೆಟ್ಟು ಗಡಿ ಭಾಗಗಳಲ್ಲಿ ಅಧಿಕಾರಿಗಳು ಸ್ಥಳ ವೀಕ್ಷಣೆಯನ್ನು ಮಾಡಿದ್ದಾರೆ.</p>.<p>ಮಿನಿ ವಿಮಾನ ನಿಲ್ದಾಣಕ್ಕೆ 100 ಎಕರೆಯಷ್ಟು ಜಾಗ ಬೇಕಾಗಿದ್ದು, ಅದರ ಸುತ್ತಮುತ್ತ ಬೆಟ್ಟ ಗುಡ್ಡಗಳು ಅಡ್ಡ ಬಾರದಂತೆ ಜಾಗ ಗುರುತಿಸಬೇಕಾಗಿರುವುದರಿಂದ ಈ ಪ್ರದೇಶದಲ್ಲೂ ವೀಕ್ಷಣೆ ಮಾಡಲಾಗಿದೆ.</p>.<p>ಪೂರ್ವಿ ಮಠ್ ನೇತೃತ್ವದ ಬೆಂಗಳೂರಿನ ಕೆ.ಎಸ್.ಐ.ಐ.ಡಿ.ಸಿ ತಾಂತ್ರಿಕ ವಿಭಾಗದ ಅಧಿಕಾರಿಗಳು, ಪುತ್ತೂರು ಉಪ ವಿಭಾಗಾಧಿಕಾರಿ ಗಿರೀಶ್ ನಂದನ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್, ಕಂದಾಯ ನಿರೀಕ್ಷಕ ಪ್ರತೀಶ್, ಲಾಯಿಲ ಗ್ರಾಮಲೆಕ್ಕಿಗರಾದ ರನಿತಾ, ಗ್ರಾಮ ಸಹಾಯಕ ಸತೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>