<p><strong>ಬೆಳ್ತಂಗಡಿ</strong>: ಸ್ವಾತಂತ್ರ್ಯದ ಅಮೃತಮಹೋತ್ಸವದ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಆಯೋಜಿಸಿದ್ದ ಆನ್ಲೈನ್ ದೇಶಭಕ್ತಿ ಗೀತೆ ಸ್ಪರ್ಧೆಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಲಭಿಸಿದೆ.</p>.<p>ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ನ ಏಪ್ಯಾ ಮುಖ್ಯಸ್ಥ ಡಾ.ಮನೀಶ್ ವೈಷ್ಣವಿ ಭಾನುವಾರ ಬೆಳ್ತಂಗಡಿ ಶ್ರೀಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಅವರಿಗೆ ಪ್ರಶಸ್ತಿ ಪತ್ರ, ಪದಕವನ್ನು ಪ್ರದಾನ ಮಾಡಿದರು.</p>.<p>‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ನ ಎಲ್ಲಾ ಷರತ್ತು, ನಿಯಮಗಳಿಗನುಸಾರವಾಗಿ ಕಾರ್ಯಕ್ರಮ ಮಾಡಲಾಗಿದೆ. ಬೆಳ್ತಂಗಡಿಯಂತಹ ಗ್ರಾಮೀಣ ಪ್ರದೇಶದಲ್ಲಿ ನಮ್ಮ ಷರತ್ತುಗಳನ್ನು ಪಾಲಿಸಿಕೊಂಡು ತಾಲ್ಲೂಕಿನ ಜನತೆ ಸ್ಪರ್ಧೆಯಲ್ಲಿ ಭಾಗವಹಿಸಿರುವುದು ಶ್ಲಾಘನೀಯ. ಮೂರು ಸಾವಿರಕ್ಕೂ ಹೆಚ್ಚು ವಿಡಿಯೊಗಳು ಬಂದಿದೆ’ ಎಂದುಡಾ. ಮನೀಶ್ ವೈಷ್ಣವಿ ತಿಳಿಸಿದರು.</p>.<p>‘ದೇಶಭಕ್ತಿ ಗೀತೆ ಸ್ಪರ್ಧೆಗೆ ತಾಲ್ಲೂಕಿನ ಜನರ ಜೊತೆಗೆ ಹೊರ ಜಿಲ್ಲೆ, ಹೊರ ರಾಜ್ಯ ಹಾಗೂ ವಿದೇಶದಿಂದ ಸ್ಪಂದನೆ ಸಿಕ್ಕಿದೆ. ಪ್ರಶಸ್ತಿಯು ತಾಲ್ಲೂಕಿನ ಜನತೆಗೆ ಸಿಕ್ಕಿದ ಗೌರವವಾಗಿದೆ. ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹನೀಯರಿಗೆ ಈ ಪ್ರಶಸ್ತಿಯನ್ನು ಸಮರ್ಪಿಸುತ್ತೇನೆ’ ಎಂದರು.</p>.<p>ಆಗಸ್ಟ್ 25 ರಂದು ಸ್ಪರ್ಧೆಯ ಫಲಿತಾಂಶ ಪ್ರಕಟವಾಗಲಿದ್ದು, ಪ್ರಥಮ, ದ್ವಿತೀಯ ಬಹುಮಾನದ ಜತೆಗೆ ಸ್ಪರ್ಧಿಸಿದ ಸ್ಪರ್ಧಾಳುಗಳನ್ನು ಗೌರವಿಸಲಾಗುವುದು.ಬೆಳಗಾವಿ, ಬೀದರ್, ಬೆಂಗಳೂರು, ಮೈಸೂರು, ಕಾಸರಗೋಡು, ಮಹರಾಷ್ಟ್ರ, ದೆಹಲಿ ಹಾಗೂ ವಿದೇಶದಿಂದ ಭಾಗಿಯಾಗಿದ್ದಾರೆ ಎಂದು ಸಂಘಟಕರು ತಿಳಿಸಿದರು.</p>.<p>ಕಾರ್ಯಕ್ರಮದ ಸಂಯೋಜಕ ಪ್ರಶಾಂತ್ ಶೆಟ್ಟಿ, ನಿರ್ದೇಶಕ ಸ್ಮಿತೇಶ್ ಬಾರ್ಯ, ಅನೀಶ್ ವೇಣೂರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳ್ತಂಗಡಿ</strong>: ಸ್ವಾತಂತ್ರ್ಯದ ಅಮೃತಮಹೋತ್ಸವದ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಆಯೋಜಿಸಿದ್ದ ಆನ್ಲೈನ್ ದೇಶಭಕ್ತಿ ಗೀತೆ ಸ್ಪರ್ಧೆಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಲಭಿಸಿದೆ.</p>.<p>ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ನ ಏಪ್ಯಾ ಮುಖ್ಯಸ್ಥ ಡಾ.ಮನೀಶ್ ವೈಷ್ಣವಿ ಭಾನುವಾರ ಬೆಳ್ತಂಗಡಿ ಶ್ರೀಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಅವರಿಗೆ ಪ್ರಶಸ್ತಿ ಪತ್ರ, ಪದಕವನ್ನು ಪ್ರದಾನ ಮಾಡಿದರು.</p>.<p>‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ನ ಎಲ್ಲಾ ಷರತ್ತು, ನಿಯಮಗಳಿಗನುಸಾರವಾಗಿ ಕಾರ್ಯಕ್ರಮ ಮಾಡಲಾಗಿದೆ. ಬೆಳ್ತಂಗಡಿಯಂತಹ ಗ್ರಾಮೀಣ ಪ್ರದೇಶದಲ್ಲಿ ನಮ್ಮ ಷರತ್ತುಗಳನ್ನು ಪಾಲಿಸಿಕೊಂಡು ತಾಲ್ಲೂಕಿನ ಜನತೆ ಸ್ಪರ್ಧೆಯಲ್ಲಿ ಭಾಗವಹಿಸಿರುವುದು ಶ್ಲಾಘನೀಯ. ಮೂರು ಸಾವಿರಕ್ಕೂ ಹೆಚ್ಚು ವಿಡಿಯೊಗಳು ಬಂದಿದೆ’ ಎಂದುಡಾ. ಮನೀಶ್ ವೈಷ್ಣವಿ ತಿಳಿಸಿದರು.</p>.<p>‘ದೇಶಭಕ್ತಿ ಗೀತೆ ಸ್ಪರ್ಧೆಗೆ ತಾಲ್ಲೂಕಿನ ಜನರ ಜೊತೆಗೆ ಹೊರ ಜಿಲ್ಲೆ, ಹೊರ ರಾಜ್ಯ ಹಾಗೂ ವಿದೇಶದಿಂದ ಸ್ಪಂದನೆ ಸಿಕ್ಕಿದೆ. ಪ್ರಶಸ್ತಿಯು ತಾಲ್ಲೂಕಿನ ಜನತೆಗೆ ಸಿಕ್ಕಿದ ಗೌರವವಾಗಿದೆ. ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹನೀಯರಿಗೆ ಈ ಪ್ರಶಸ್ತಿಯನ್ನು ಸಮರ್ಪಿಸುತ್ತೇನೆ’ ಎಂದರು.</p>.<p>ಆಗಸ್ಟ್ 25 ರಂದು ಸ್ಪರ್ಧೆಯ ಫಲಿತಾಂಶ ಪ್ರಕಟವಾಗಲಿದ್ದು, ಪ್ರಥಮ, ದ್ವಿತೀಯ ಬಹುಮಾನದ ಜತೆಗೆ ಸ್ಪರ್ಧಿಸಿದ ಸ್ಪರ್ಧಾಳುಗಳನ್ನು ಗೌರವಿಸಲಾಗುವುದು.ಬೆಳಗಾವಿ, ಬೀದರ್, ಬೆಂಗಳೂರು, ಮೈಸೂರು, ಕಾಸರಗೋಡು, ಮಹರಾಷ್ಟ್ರ, ದೆಹಲಿ ಹಾಗೂ ವಿದೇಶದಿಂದ ಭಾಗಿಯಾಗಿದ್ದಾರೆ ಎಂದು ಸಂಘಟಕರು ತಿಳಿಸಿದರು.</p>.<p>ಕಾರ್ಯಕ್ರಮದ ಸಂಯೋಜಕ ಪ್ರಶಾಂತ್ ಶೆಟ್ಟಿ, ನಿರ್ದೇಶಕ ಸ್ಮಿತೇಶ್ ಬಾರ್ಯ, ಅನೀಶ್ ವೇಣೂರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>