<p><strong>ಬೆಳ್ತಂಗಡಿ (ದಕ್ಷಿಣ ಕನ್ನಡ):</strong> ಇಲ್ಲಿಯ ಶಾಸಕ ಹರೀಶ್ ಪೂಂಜ ಅವರ ನಿವಾಸದ ಎದುರು ಪೊಲೀಸರು ಬೀಡುಬಿಟ್ಟಿದ್ದಾರೆ.</p><p>ಮೇ.18 ರಂದು ಅಕ್ರಮ ಕಲ್ಲು ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಬಿಜೆಪಿ ಯುವ ಮೋರ್ಚಾ ಮಂಡಲ ಘಟಕದ ಅಧ್ಯಕ್ಷರನ್ನು ಬಂಧಿಸಿದ್ದರು.</p><p>ಇದನ್ನು ಖಂಡಿಸಿ ಶಾಸಕ ಹರೀಶ್ ಪೂಂಜ ಕಾರ್ಯಕರ್ತರೊಂದಿಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಧ್ಯರಾತ್ರಿ ಪ್ರತಿಭಟಿಸಿ ಪೊಲೀಸರನ್ನು ನಿಂದಿಸಿದ್ದರು.</p><p>ಈ ವಿಚಾರವಾಗಿ ಪೊಲೀಸರು ಶಾಸಕರ ಮೇಲೂ ಪ್ರಕರಣ ದಾಖಲಿಸಿಕೊಂಡಿದ್ದರು.</p><p>ಬಿಜೆಪಿ ಮುಖಂಡನ ಬಂಧನ ಹಾಗೂ ತನ್ನ ಮೇಲೆ ಪ್ರಕರಣ ದಾಖಲಾಗಿದ್ದನ್ನು ವಿರೋಧಿಸಿ ಮೇ.20 ರಂದು ತಾಲ್ಲೂಕು ಆಡಳಿತ ಕಚೇರಿಯು ಮುಂದೆ ಪ್ರತಿಭಟನೆ ನಡೆಸಿದ್ದರು.</p><p>ಶಾಸಕರು ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ್ದಾರೆ, ಪೊಲೀಸ್ ಅಧಿಕಾರಿಗಳನ್ನು ನಿಂದಿಸಿದ್ದಾರೆ ಎಂದು ಎರಡನೇ ಪ್ರಕರಣ ದಾಖಲಿಸಲಾಗಿತ್ತು</p><p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜ ಬಂಧನಕ್ಕೆ ಮುಂದಾಗಿದ್ದು, ಅವರ ಗರ್ಡಾಡಿ ನಿವಾಸದ ಮುಂದೆ ಪೊಲೀಸ್ ತಂಡ ಸಜ್ಜಾಗಿದೆ. ಯಾವುದೇ ಸಮಯದಲ್ಲೂ ಹರೀಶ್ ಪೂಂಜ ಬಂಧನದ ಸಾಧ್ಯತೆ ಇದೆ ಎನ್ನಲಾಗಿದೆ.</p><p>ಈ ಹಿನ್ನೆಲೆ ಅವರ ಮನೆಗೆ ಸಾರ್ವಜನಿಕ ಭೇಟಿಗೆ ಪೊಲೀಸರು ನಿರಾಕರಿಸಿದ್ದು, ಮನೆಗೆ ಹೋಗುವ ರಸ್ತೆಗೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ವಿಚಾರ ತಿಳಿದು ಅವರ ಮನೆ ಮುಂದೆ ಕಾರ್ಯಕರ್ತರು ಜಮಾಯಿಸಲಾರಂಬಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳ್ತಂಗಡಿ (ದಕ್ಷಿಣ ಕನ್ನಡ):</strong> ಇಲ್ಲಿಯ ಶಾಸಕ ಹರೀಶ್ ಪೂಂಜ ಅವರ ನಿವಾಸದ ಎದುರು ಪೊಲೀಸರು ಬೀಡುಬಿಟ್ಟಿದ್ದಾರೆ.</p><p>ಮೇ.18 ರಂದು ಅಕ್ರಮ ಕಲ್ಲು ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಬಿಜೆಪಿ ಯುವ ಮೋರ್ಚಾ ಮಂಡಲ ಘಟಕದ ಅಧ್ಯಕ್ಷರನ್ನು ಬಂಧಿಸಿದ್ದರು.</p><p>ಇದನ್ನು ಖಂಡಿಸಿ ಶಾಸಕ ಹರೀಶ್ ಪೂಂಜ ಕಾರ್ಯಕರ್ತರೊಂದಿಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಧ್ಯರಾತ್ರಿ ಪ್ರತಿಭಟಿಸಿ ಪೊಲೀಸರನ್ನು ನಿಂದಿಸಿದ್ದರು.</p><p>ಈ ವಿಚಾರವಾಗಿ ಪೊಲೀಸರು ಶಾಸಕರ ಮೇಲೂ ಪ್ರಕರಣ ದಾಖಲಿಸಿಕೊಂಡಿದ್ದರು.</p><p>ಬಿಜೆಪಿ ಮುಖಂಡನ ಬಂಧನ ಹಾಗೂ ತನ್ನ ಮೇಲೆ ಪ್ರಕರಣ ದಾಖಲಾಗಿದ್ದನ್ನು ವಿರೋಧಿಸಿ ಮೇ.20 ರಂದು ತಾಲ್ಲೂಕು ಆಡಳಿತ ಕಚೇರಿಯು ಮುಂದೆ ಪ್ರತಿಭಟನೆ ನಡೆಸಿದ್ದರು.</p><p>ಶಾಸಕರು ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ್ದಾರೆ, ಪೊಲೀಸ್ ಅಧಿಕಾರಿಗಳನ್ನು ನಿಂದಿಸಿದ್ದಾರೆ ಎಂದು ಎರಡನೇ ಪ್ರಕರಣ ದಾಖಲಿಸಲಾಗಿತ್ತು</p><p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜ ಬಂಧನಕ್ಕೆ ಮುಂದಾಗಿದ್ದು, ಅವರ ಗರ್ಡಾಡಿ ನಿವಾಸದ ಮುಂದೆ ಪೊಲೀಸ್ ತಂಡ ಸಜ್ಜಾಗಿದೆ. ಯಾವುದೇ ಸಮಯದಲ್ಲೂ ಹರೀಶ್ ಪೂಂಜ ಬಂಧನದ ಸಾಧ್ಯತೆ ಇದೆ ಎನ್ನಲಾಗಿದೆ.</p><p>ಈ ಹಿನ್ನೆಲೆ ಅವರ ಮನೆಗೆ ಸಾರ್ವಜನಿಕ ಭೇಟಿಗೆ ಪೊಲೀಸರು ನಿರಾಕರಿಸಿದ್ದು, ಮನೆಗೆ ಹೋಗುವ ರಸ್ತೆಗೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ವಿಚಾರ ತಿಳಿದು ಅವರ ಮನೆ ಮುಂದೆ ಕಾರ್ಯಕರ್ತರು ಜಮಾಯಿಸಲಾರಂಬಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>