<p><strong>ಬೆಳ್ತಂಗಡಿ</strong>: ತಾಲ್ಲೂಕಿನ ವಿವಿಧೆಡೆ ಗುರುವಾರ ಸಂಜೆ, ಗಾಳಿ, ಗುಡುಗು, ಸಿಡಿಲು ಸಹಿತ ಮಳೆಯಾಗಿದೆ.</p>.<p>ಬೆಳ್ತಂಗಡಿ ನಗರ, ಉಜಿರೆ, ಕಲ್ಮಂಜ, ಮುಂಡಾಜೆ, ಕಡಿರುದ್ಯಾವರ, ಕಕ್ಕಿಂಜೆ, ತೋಟತ್ತಾಡಿ, ಚಿಬಿದ್ರೆ, ಚಾರ್ಮಾಡಿ, ಕರಂಬಾರು, ಶಿರ್ಲಾಲು, ಮಲವಂತಿಗೆ, ಮಿತ್ತಬಾಗಿಲು, ಗೇರುಕಟ್ಟೆಯಲ್ಲಿ ಭಾರಿ ಮಳೆ ಸುರಿದಿದೆ.</p>.<p>ಕಡಿರುದ್ಯಾವರ ಗ್ರಾಮದ ಮಲ್ಲಡ್ಕ ಬಳಿ ಗಾಳಿ ಮಳೆಗೆ ಸುಮಾರು 20 ವಿದ್ಯುತ್ ಕಂಬಗಳು ಧರೆಗುರುಳಿವೆ.</p>.<p>ಕೊಲ್ಲಿ-ಕಿಲ್ಲೂರು ರಸ್ತೆಯಲ್ಲಿ ರಸ್ತೆಗೆ ಮರ ಉರುಳಿ ಎರಡು ವಿದ್ಯುತ್ ಕಂಬಗಳು ಮುರಿದಿವೆ. ತಾಲ್ಲೂಕಿನ ಅಲ್ಲಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿರುವುದರಿಂದ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ.</p>.<p>ಕೆಲವು ಕಡೆ ಭಾರಿ ಸಿಡಿಲಿನ ಆಘಾತಕ್ಕೆ ಹಲವು ಮನೆಗಳ ವಿದ್ಯುತ್ ಉಪಕರಣಗಳಿಗೂ ಹಾನಿ ಉಂಟಾಗಿದೆ. ತಾಲ್ಲೂಕಿನ ವಿವಿಧೆಡೆ ನೂರಾರು ಅಡಿಕೆ ಮರಗಳು ಧರೆಗೆ ಉರುಳಿವೆ.</p>.<p>ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಹಲವೆಡೆ ಮಳೆ ನೀರಿನೊಂದಿಗೆ ರಸ್ತೆಗೆ ಮಣ್ಣು ಹರಿದು ಬಂದಿದ್ದು, ವಾಹನ ಸವಾರರು ತೊಂದರೆ ಅನುಭವಿಸಿದರು.</p>.<p>ಕಾಸರಗೋಡು ಜಿಲ್ಲೆಯಲ್ಲಿ ಗುರು ವಾರ ರಾತ್ರಿ ಗುಡುಗು ಸಹಿತ ಬಿರುಸಿನ ಮಳೆಯಾಗಿದೆ. ಸಂಜೆಯಿಂದಲೇ ಮೋಡಮುಸುಕಿದ ವಾತಾವರಣವಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-29-537374548</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳ್ತಂಗಡಿ</strong>: ತಾಲ್ಲೂಕಿನ ವಿವಿಧೆಡೆ ಗುರುವಾರ ಸಂಜೆ, ಗಾಳಿ, ಗುಡುಗು, ಸಿಡಿಲು ಸಹಿತ ಮಳೆಯಾಗಿದೆ.</p>.<p>ಬೆಳ್ತಂಗಡಿ ನಗರ, ಉಜಿರೆ, ಕಲ್ಮಂಜ, ಮುಂಡಾಜೆ, ಕಡಿರುದ್ಯಾವರ, ಕಕ್ಕಿಂಜೆ, ತೋಟತ್ತಾಡಿ, ಚಿಬಿದ್ರೆ, ಚಾರ್ಮಾಡಿ, ಕರಂಬಾರು, ಶಿರ್ಲಾಲು, ಮಲವಂತಿಗೆ, ಮಿತ್ತಬಾಗಿಲು, ಗೇರುಕಟ್ಟೆಯಲ್ಲಿ ಭಾರಿ ಮಳೆ ಸುರಿದಿದೆ.</p>.<p>ಕಡಿರುದ್ಯಾವರ ಗ್ರಾಮದ ಮಲ್ಲಡ್ಕ ಬಳಿ ಗಾಳಿ ಮಳೆಗೆ ಸುಮಾರು 20 ವಿದ್ಯುತ್ ಕಂಬಗಳು ಧರೆಗುರುಳಿವೆ.</p>.<p>ಕೊಲ್ಲಿ-ಕಿಲ್ಲೂರು ರಸ್ತೆಯಲ್ಲಿ ರಸ್ತೆಗೆ ಮರ ಉರುಳಿ ಎರಡು ವಿದ್ಯುತ್ ಕಂಬಗಳು ಮುರಿದಿವೆ. ತಾಲ್ಲೂಕಿನ ಅಲ್ಲಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿರುವುದರಿಂದ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ.</p>.<p>ಕೆಲವು ಕಡೆ ಭಾರಿ ಸಿಡಿಲಿನ ಆಘಾತಕ್ಕೆ ಹಲವು ಮನೆಗಳ ವಿದ್ಯುತ್ ಉಪಕರಣಗಳಿಗೂ ಹಾನಿ ಉಂಟಾಗಿದೆ. ತಾಲ್ಲೂಕಿನ ವಿವಿಧೆಡೆ ನೂರಾರು ಅಡಿಕೆ ಮರಗಳು ಧರೆಗೆ ಉರುಳಿವೆ.</p>.<p>ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಹಲವೆಡೆ ಮಳೆ ನೀರಿನೊಂದಿಗೆ ರಸ್ತೆಗೆ ಮಣ್ಣು ಹರಿದು ಬಂದಿದ್ದು, ವಾಹನ ಸವಾರರು ತೊಂದರೆ ಅನುಭವಿಸಿದರು.</p>.<p>ಕಾಸರಗೋಡು ಜಿಲ್ಲೆಯಲ್ಲಿ ಗುರು ವಾರ ರಾತ್ರಿ ಗುಡುಗು ಸಹಿತ ಬಿರುಸಿನ ಮಳೆಯಾಗಿದೆ. ಸಂಜೆಯಿಂದಲೇ ಮೋಡಮುಸುಕಿದ ವಾತಾವರಣವಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-29-537374548</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>