<p><strong>ಮಂಗಳೂರು</strong>: ದಕ್ಷಿಣ ಕನ್ನಡ ಕ್ಷೇತ್ರದ ಲೋಕಸಭಾ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟವಾಗಿದ್ದು, ಮೊದಲ ದಿನ ಇಬ್ಬರು ಅಭ್ಯರ್ಥಿಗಳ ನಾಮಪತ್ರಗಳು ಸಲ್ಲಿಕೆಯಾಗಿವೆ.</p><p>ಬಿಜೆಪಿ ಅಭ್ಯರ್ಥಿ ಕ್ಯಾ. ಬೃಜೇಶ್ ಚೌಟ ಅವರ ನಾಮಪತ್ರ ಗುರುವಾರ ಸಲ್ಲಿಕೆಯಾಗಿದ್ದು, ರವಿಶಂಕರ ಮಿಜಾರ್ ಅವರು ಇದಕ್ಕೆ ಸೂಚಕರಾಗಿ ಸಹಿಹಾಕಿದ್ದಾರೆ. ಬೃಜೇಶ್ ಚೌಟ ಏ. 4ರಂದು ಇನ್ನೊಮ್ಮೆ ನಾಮಪತ್ರ ಸಲ್ಲಿಸಲಿ ದ್ದಾರೆ.</p><p>ಜನತಾದಳ ಯುನೈಟೆಡ್ ಪಕ್ಷದ ಅಭ್ಯರ್ಥಿ ಸುಪ್ರೀತ್ ಕುಮಾರ್ ಪೂಜಾರಿ ಅವರೂ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ.</p><p>ಡಿ.ಸಿ ಕಚೇರಿ ಸುತ್ತ ನಿಷೇಧಾಜ್ಞೆ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುತ್ತಿವೆ. ಯಾವುದೇ ಅಹಿತಕರ ಘಟನೆ ಸಂಭವಿಸುವುದನ್ನು ತಡೆಯಲು ಇದೇ 28ರಿಂದ ಏಪ್ರಿಲ್ 8ರ ಸಂಜೆ 6ಗಂಟೆಯವರೆಗೆ ಕಚೇರಿಯ ಆವರಣದ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ದಕ್ಷಿಣ ಕನ್ನಡ ಕ್ಷೇತ್ರದ ಲೋಕಸಭಾ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟವಾಗಿದ್ದು, ಮೊದಲ ದಿನ ಇಬ್ಬರು ಅಭ್ಯರ್ಥಿಗಳ ನಾಮಪತ್ರಗಳು ಸಲ್ಲಿಕೆಯಾಗಿವೆ.</p><p>ಬಿಜೆಪಿ ಅಭ್ಯರ್ಥಿ ಕ್ಯಾ. ಬೃಜೇಶ್ ಚೌಟ ಅವರ ನಾಮಪತ್ರ ಗುರುವಾರ ಸಲ್ಲಿಕೆಯಾಗಿದ್ದು, ರವಿಶಂಕರ ಮಿಜಾರ್ ಅವರು ಇದಕ್ಕೆ ಸೂಚಕರಾಗಿ ಸಹಿಹಾಕಿದ್ದಾರೆ. ಬೃಜೇಶ್ ಚೌಟ ಏ. 4ರಂದು ಇನ್ನೊಮ್ಮೆ ನಾಮಪತ್ರ ಸಲ್ಲಿಸಲಿ ದ್ದಾರೆ.</p><p>ಜನತಾದಳ ಯುನೈಟೆಡ್ ಪಕ್ಷದ ಅಭ್ಯರ್ಥಿ ಸುಪ್ರೀತ್ ಕುಮಾರ್ ಪೂಜಾರಿ ಅವರೂ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ.</p><p>ಡಿ.ಸಿ ಕಚೇರಿ ಸುತ್ತ ನಿಷೇಧಾಜ್ಞೆ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುತ್ತಿವೆ. ಯಾವುದೇ ಅಹಿತಕರ ಘಟನೆ ಸಂಭವಿಸುವುದನ್ನು ತಡೆಯಲು ಇದೇ 28ರಿಂದ ಏಪ್ರಿಲ್ 8ರ ಸಂಜೆ 6ಗಂಟೆಯವರೆಗೆ ಕಚೇರಿಯ ಆವರಣದ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>