ಮಣ್ಣಿನ ಹಣತೆಯ ಲಕ್ಷ ದೀಪಗಳನ್ನು ರಥಬೀದಿಯಿಂದ ಕಾಶಿಕಟ್ಟೆ ಗಣಪತಿ ದೇವಸ್ಥಾನ, ಸವಾರಿ ಮಂಟಪ, ಅಭಯ ಹನುಮಂತ ದೇವಸ್ಥಾನ, ಕುಮಾರಧಾರ ಮತ್ತು ಆದಿಸುಬ್ರಹ್ಮಣ್ಯದಲ್ಲಿ ಹಚ್ಚಲಾಗುವುದು. ಏಕ ಕಾಲದಲ್ಲಿ ಹಣತೆಯನ್ನು ಉರಿಸಲು ಸ್ಥಳಿಯ ಭಕ್ತ ವೃಂದದವರಿಗೆ ಅವಕಾಶ ಕಲ್ಪಿಸಲಾಗಿದೆ. ದೇಗುಲದ ರಾಜಗೋಪುರ ಬಳಿಯಿಂದ ರಥಬೀದಿ, ಅಡ್ಡಬೀದಿಯಲ್ಲಿ ಕುಣಿತ ಭಜನೆ ನಡೆಯಲಿದೆ. ಮೈಸೂರು ರಾಮಚಂದ್ರ ಆಚಾರ್ ಮತ್ತು ತಂಡ ಭಜನಾ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.