ಬಂಟ್ವಾಳ: ಇಲ್ಲಿನ ಬಂಟ್ವಾಳ ಪೇಟೆ ತಿರುಮಲ ವೆಂಕಟರಮಣ ಸ್ವಾಮಿ ದೇವಳದಲ್ಲಿ ‘ವೈಕುಂಠ ಏಕಾದಶಿ’ ಪ್ರಯುಕ್ತ ಡಿ.23ರಂದು ‘ಭಜನಾ ಮಹೋತ್ಸವ’ ನಡೆಯಲಿದೆ. ಅಂದು ಬೆಳಿಗ್ಗೆ 6 ಗಂಟೆಗೆ ದೇವರ ಗರ್ಭಗೃಹ ಬಾಗಿಲು ತೆರೆದು 6.10ಕ್ಕೆ ದೀಪ ಪ್ರಜ್ವಲನೆ, ಸಾಮೂಹಿಕ ಶ್ರೀವಿಷ್ಣು ಸಹಸ್ರನಾಮ ಪಠಣ, 6.30ಕ್ಕೆ ಭಜನಾ ಸಂಕೀರ್ತನೆ ಆರಂಭಗೊಳ್ಳಲಿದೆ. ರಾತ್ರಿ ವಿವಿಧ ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.