ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಶ್ರದ್ಧಾ-ಭಕ್ತಿಯಿಂದ ಭಾಷಾ ಶುದ್ಧಿಯೊಂದಿಗೆ ರಾಗ, ತಾಳ, ಲಯಬದ್ಧವಾಗಿ ಭಜನೆ ಹಾಡಬೇಕು. ಯಾವುದೇ ವಿಚಾರಗಳನ್ನು ಸರಿಯಾಗಿ ತಿಳಿದುಕೊಂಡು ಆಚರಣೆ ಮಾಡಬೇಕು. ಸಂಸ್ಕೃತಿಯ ಪಲ್ಲಟದಿಂದಾಗಿ ಮೂಲ ಸ್ವರೂಪ, ತತ್ವ ಮತ್ತು ಸತ್ವಕ್ಕೆ ಧಕ್ಕೆಯಾಗಬಾರದು. ಭಜನೆ ಮೂಲಕ ಮುಕ್ತ ಹಾಗೂ ಮುಗ್ಧ ಮನಸ್ಸಿನಿಂದ ದೇವರ ಆರಾಧನೆ ಮಾಡಬೇಕು’ ಎಂದು ಹೆಗ್ಗಡೆ ಸಲಹೆ ನೀಡಿದರು.