<p><strong>ಮಂಗಳೂರು</strong>: ಅಖಿಲ ಭಾರತ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿರುವ ಭಾರತ್ ಜೋಡೊ ಯಾತ್ರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಟ್ಟು 10 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ತಿಳಿಸಿದರು.</p>.<p>ಭಾರತ್ ಜೋಡೊ ಯಾತ್ರೆಗೆ ಜಿಲ್ಲೆಯಿಂದ ಕಾರ್ಯಕರ್ತರನ್ನು ಕಳುಹಿಸಿಕೊಡುವ ಹಾಗೂ ಇದೇ 26ರಂದು ನಗರದ ಕುದ್ಮುಲ್ ರಂಗರಾವ್ ಪುರಭನದಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಯಶಸ್ವಿಗೊಳಿಸುವ ಸಲುವಾಗಿ ಶನಿವಾರ ಇಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಭಾರತ್ ಜೋಡೊ ಯಾತ್ರೆಯಲ್ಲಿ ಇದೇ 30ರಂದು ಬೆಳ್ತಂಗಡಿ, ಪುತ್ತೂರು, ಸುಳ್ಯ ಹಾಗೂ ಬಂಟ್ವಾಳ ಕ್ಷೇತ್ರಗಳಿಂದ ಒಟ್ಟು 5 ಸಾವಿರ ಮಂದಿ ಭಾಗವಹಿಸಬೇಕು. ಅ. 2ರಂದು ಮಂಗಳೂರು, ಮಂಗಳೂರು ಉತ್ತರ, ಮಂಗಳೂರು ದಕ್ಷಿಣ ಹಾಗೂ ಮೂಡುಬಿದಿರೆ ಕ್ಷೇತ್ರಗಳಿಂದ 5 ಸಾವಿರ ಮಂದಿಯಾದರೂ ಭಾಗವಹಿಸಬೇಕು. ಆಯಾ ಕ್ಷೇತ್ರಗಳ ಶಾಸಕರು ಹಾಗೂ ಮಾಜಿ ಶಾಸಕರು ಕಾರ್ಯಕರ್ತರನ್ನು ಕರೆದೊಯ್ಯುವ ಉಸ್ತುವಾರಿ ನೊಡಿಕೊಳ್ಳಬೇಕು’ ಎಂದು ಅವರು ಸೂಚಿಸಿದರು.</p>.<p>‘ಇದೇ 26ರಂದು ಪುರಭವನದಲ್ಲಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಸುಮಾರು 3 ಸಾವಿರ ಮಂದಿ ಸೇರಿಲಿದ್ದಾರೆ. ಪ್ರತಿಯೊಂದು ಬ್ಲಾಕ್ ಕಾಂಗ್ರೆಸ್ ಸಮಿತಿಯ ನಾಯಕರು, ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಬೇಕು’ ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮುಖಂಡರಾದ ಬಿ.ರಮಾನಾಥ ರೈ, ಜೆ.ಆರ್.ಲೋಬೊ, ಐವನ್ ಡಿಸೋಜಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಇನಾಯತ್ ಅಲಿ, ರಕ್ಷಿತ್ ಶಿವರಾಂ, ಮಮತಾ ಗಟ್ಟಿ ಸಲಹೆ ನೀಡಿದರು.</p>.<p>ಕೆಪಿಸಿಸಿ ಸಂಯೋಜಕರು, ಕೆಪಿಸಿಸಿ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು, ಪಕ್ಷದ ವಿವಿಧ ಘಟಕಗಳ ರಾಜ್ಯ ಪದಾಧಿಕಾರಿಗಳು, ಬ್ಲಾಕ್ ಉಸ್ತುವಾರಿಗಳು, ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರು ಭಾಗವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಅಖಿಲ ಭಾರತ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿರುವ ಭಾರತ್ ಜೋಡೊ ಯಾತ್ರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಟ್ಟು 10 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ತಿಳಿಸಿದರು.</p>.<p>ಭಾರತ್ ಜೋಡೊ ಯಾತ್ರೆಗೆ ಜಿಲ್ಲೆಯಿಂದ ಕಾರ್ಯಕರ್ತರನ್ನು ಕಳುಹಿಸಿಕೊಡುವ ಹಾಗೂ ಇದೇ 26ರಂದು ನಗರದ ಕುದ್ಮುಲ್ ರಂಗರಾವ್ ಪುರಭನದಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಯಶಸ್ವಿಗೊಳಿಸುವ ಸಲುವಾಗಿ ಶನಿವಾರ ಇಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಭಾರತ್ ಜೋಡೊ ಯಾತ್ರೆಯಲ್ಲಿ ಇದೇ 30ರಂದು ಬೆಳ್ತಂಗಡಿ, ಪುತ್ತೂರು, ಸುಳ್ಯ ಹಾಗೂ ಬಂಟ್ವಾಳ ಕ್ಷೇತ್ರಗಳಿಂದ ಒಟ್ಟು 5 ಸಾವಿರ ಮಂದಿ ಭಾಗವಹಿಸಬೇಕು. ಅ. 2ರಂದು ಮಂಗಳೂರು, ಮಂಗಳೂರು ಉತ್ತರ, ಮಂಗಳೂರು ದಕ್ಷಿಣ ಹಾಗೂ ಮೂಡುಬಿದಿರೆ ಕ್ಷೇತ್ರಗಳಿಂದ 5 ಸಾವಿರ ಮಂದಿಯಾದರೂ ಭಾಗವಹಿಸಬೇಕು. ಆಯಾ ಕ್ಷೇತ್ರಗಳ ಶಾಸಕರು ಹಾಗೂ ಮಾಜಿ ಶಾಸಕರು ಕಾರ್ಯಕರ್ತರನ್ನು ಕರೆದೊಯ್ಯುವ ಉಸ್ತುವಾರಿ ನೊಡಿಕೊಳ್ಳಬೇಕು’ ಎಂದು ಅವರು ಸೂಚಿಸಿದರು.</p>.<p>‘ಇದೇ 26ರಂದು ಪುರಭವನದಲ್ಲಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಸುಮಾರು 3 ಸಾವಿರ ಮಂದಿ ಸೇರಿಲಿದ್ದಾರೆ. ಪ್ರತಿಯೊಂದು ಬ್ಲಾಕ್ ಕಾಂಗ್ರೆಸ್ ಸಮಿತಿಯ ನಾಯಕರು, ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಬೇಕು’ ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮುಖಂಡರಾದ ಬಿ.ರಮಾನಾಥ ರೈ, ಜೆ.ಆರ್.ಲೋಬೊ, ಐವನ್ ಡಿಸೋಜಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಇನಾಯತ್ ಅಲಿ, ರಕ್ಷಿತ್ ಶಿವರಾಂ, ಮಮತಾ ಗಟ್ಟಿ ಸಲಹೆ ನೀಡಿದರು.</p>.<p>ಕೆಪಿಸಿಸಿ ಸಂಯೋಜಕರು, ಕೆಪಿಸಿಸಿ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು, ಪಕ್ಷದ ವಿವಿಧ ಘಟಕಗಳ ರಾಜ್ಯ ಪದಾಧಿಕಾರಿಗಳು, ಬ್ಲಾಕ್ ಉಸ್ತುವಾರಿಗಳು, ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರು ಭಾಗವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>