‘ಬೈಕಂಪಾಡಿಯಲ್ಲಿರುವ ಷಿಯಾರ್ ಎಂಟರ್ಪ್ರೈಸಸ್ಗೆ ಬೆಂಕಿ ಬಿದ್ದ ಬಗ್ಗೆ ಮುಂಜಾನೆ 5.15ಕ್ಕೆ ಮಾಹಿತಿ ಬಂದಿತ್ತು. ತಕ್ಷಣವೇ ಪಾಂಡೇಶ್ವರ ಹಾಗೂ ಕದ್ರಿ ಘಟಕಗಳ ತಲಾ ಒಂದು ಅಗ್ನಿಶಾಮಕ ವಾಹನ ಸ್ಥಳಕ್ಕೆ ತೆರಳಿವೆ. ಬೆಂಕಿಯ ತೀವ್ರತೆ ಜಾಸ್ತಿ ಇದ್ದುದರಿಂದ ಎಂಆರ್ಪಿಎಲ್, ಎಚ್ಪಿಸಿಎಲ್, ಒಎನ್ಜಿಸಿಯ ತಲಾ ಒಂದು ಅಗ್ನಿಶಾಮಕ ವಾಹನಗಳನ್ನು ಹಾಗೂ ನವಮಂಗಳೂರು ಬಂದರು ಪ್ರಾಧಿಕಾರದ ಎರಡು ಅಗ್ನಿಶಾಮಕ ವಾಹನಗಳನ್ನು ತರಿಸಿ ಬೆಂಕಿ ನಂದಿಸಿದ್ದೇವೆ. ಬೆಂಕಿ ಅವಘಡ ಸಂಭವಿಸಿದ ಕಟ್ಟಡದ ಅಕ್ಕಪಕ್ಕದ ಕಟ್ಟಡಗಳಿಗೆ ಬೆಂಕಿ ತಗಲುವುದನ್ನು ತಪ್ಪಿಸಿದ್ದೇವೆ’ ಎಂದು ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ರಂಗನಾಥ ಸಿ.ಆರ್. ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.