ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಳ್ಳಾಲ ಸಮೀಪ ಬೈಕ್ ಅಪಘಾತ: ಬಾಗಲಕೋಟೆಯ ಯುವಕ ಸಾವು

ಬಾಗಲಕೋಟೆಯ ಸುರೇಶ್ (30) ಮೃತ ಯುವಕ
Published 24 ಜನವರಿ 2024, 4:16 IST
Last Updated 24 ಜನವರಿ 2024, 4:16 IST
ಅಕ್ಷರ ಗಾತ್ರ

ಉಳ್ಳಾಲ (ದಕ್ಷಿಣ ಕನ್ನಡ): ಉಳ್ಳಾಲ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನೇತ್ರಾವತಿ ಸೇತುವೆಯ ಬಳಿ ಮಂಗಳವಾರ ಮಧ್ಯರಾತ್ರಿ ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

'ಕಲ್ಲಾಪು ನಿವಾಸಿ ಬಾಗಲಕೋಟೆಯ ಸುರೇಶ್ (30) ಮೃತರು. ಕಲ್ಲಾಪು ಸಲಫಿ ಮಸೀದಿ ಸಮೀಪ ಅವರು ಕುಟುಂಬ ಸಮೇತರಾಗಿ ಹಲವು ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಮಂಗಳೂರಿನ ಬುಲೆಟ್ ಷೋರೂಂ ಒಂದರಲ್ಲಿ ಕೆಲಸಕ್ಕಿದ್ದ ಸುರೇಶ್, ಬಳಿಕ ಪಂಪ್ವೆಲ್ ಸಮೀಪ ಗ್ಯಾರೇಜ್ ನಡೆಸುತ್ತಿದ್ದರು‌. ಗ್ಯಾರೇಜ್ ನಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ಸಂದರ್ಭ ತಡರಾತ್ರಿ 1.30 ಗಂಟೆ ಸುಮಾರಿಗೆ ಬೈಕ್ ರಸ್ತೆ ವಿಭಜಕಕ್ಕೆ ಬಡಿದು ಅವರ ತಲೆಗೆ ಗಂಭೀರ ಗಾಯವಾಗಿತ್ತು.

ಅವರಿಗೆ ತಂದೆ, ತಾಯಿ ಹಾಗೂ ಸಹೋದರಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT