<p><strong>ಮಂಗಳೂರು: </strong>ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರು ಇಡುವಂತೆ ಆಗ್ರಹಿಸಿ ಬಿಲ್ಲವ ಬ್ರಿಗೇಡ್ ನೇತೃತ್ವದಲ್ಲಿ ಕೋಟಿ-ಚೆನ್ನಯ ಸಂಚಾಲನಾ ಸಮಿತಿಯ ಸಹಯೋಗದೊಂದಿಗೆ ವಿವಿಧ ಸಂಘಟನೆಗಳ ಸಹಕಾರದಲ್ಲಿ ಇದೇ 7ರಂದು ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ.</p>.<p>ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಸಂಚಾಲನಾ ಸಮಿತಿ ಪ್ರಧಾನ ಸಂಚಾಲಕ ಸತ್ಯಜಿತ್ ಸುರತ್ಕಲ್, ಅಂದು ಬೆಳಿಗ್ಗೆ 10 ಗಂಟೆಗೆ ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಿಂದ ಹೊರಡುವ ಬೈಕ್ ರ್ಯಾಲಿ ಬಜ್ಪೆ ಕೆಂಜಾರಿನ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ ಸಾಗಲಿದೆ ಎಂದರು.</p>.<p>ಬೈಕ್ ರ್ಯಾಲಿಯಲ್ಲಿ ಕನಿಷ್ಠ 500 ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಭಾಗವಹಿಸವವರು ಮಾಸ್ಕ್ ಧರಿಸುವುದು ಹಾಗೂ ಹೆಲ್ಮೆಟ್ ಹಾಕುವುದು ಕಡ್ಡಾಯವಾಗಿದೆ ಎಂದು ಹೇಳಿದರು.</p>.<p>ಗ್ರಾಮ ಪಂಚಾಯಿತಿಯಲ್ಲಿ ಆದ ನಿರ್ಣಯ, 2019ರ ಜನವರಿ 30ರಂದು ನಡೆದ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಹೆಸರಿಡಲು ಸರ್ವಾನುಮತದಿಂದ ನಿರ್ಣಯ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಆದರೆ, ರಾಜ್ಯ ಸರ್ಕಾರದಿಂದ ಅದು ವಾಪಸಾಗಿದೆ. ರಾಜ್ಯ ಸರ್ಕಾರ ಈ ನಿರ್ಣಯವನ್ನು ಅಂಗೀಕರಿಸಿ ಸೂಕ್ತ ಕ್ರಮಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು ಎಂದು ಒತ್ತಾಯಿಸಿದರು.</p>.<p>ಸಮಿತಿಯ ಉಪಾಧ್ಯಕ್ಷ ಸೂರಜ್ ಕಲ್ಯ, ಬಿಲ್ಲವ ಬ್ರಿಗೇಡ್ನ ಅಧ್ಯಕ್ಷ ಜೀವನ್ ಪೂಜಾರಿ, ಸ್ಥಾಪಕ ಅಧ್ಯಕ್ಷ ಅವಿನಾಶ್ ಸುವರ್ಣ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಸನಿಲ್, ಸಂಘಟನಾ ಕಾರ್ಯದರ್ಶಿ ಅಶ್ವಥ್ ಉಪ್ಪಳ ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರು ಇಡುವಂತೆ ಆಗ್ರಹಿಸಿ ಬಿಲ್ಲವ ಬ್ರಿಗೇಡ್ ನೇತೃತ್ವದಲ್ಲಿ ಕೋಟಿ-ಚೆನ್ನಯ ಸಂಚಾಲನಾ ಸಮಿತಿಯ ಸಹಯೋಗದೊಂದಿಗೆ ವಿವಿಧ ಸಂಘಟನೆಗಳ ಸಹಕಾರದಲ್ಲಿ ಇದೇ 7ರಂದು ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ.</p>.<p>ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಸಂಚಾಲನಾ ಸಮಿತಿ ಪ್ರಧಾನ ಸಂಚಾಲಕ ಸತ್ಯಜಿತ್ ಸುರತ್ಕಲ್, ಅಂದು ಬೆಳಿಗ್ಗೆ 10 ಗಂಟೆಗೆ ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಿಂದ ಹೊರಡುವ ಬೈಕ್ ರ್ಯಾಲಿ ಬಜ್ಪೆ ಕೆಂಜಾರಿನ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ ಸಾಗಲಿದೆ ಎಂದರು.</p>.<p>ಬೈಕ್ ರ್ಯಾಲಿಯಲ್ಲಿ ಕನಿಷ್ಠ 500 ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಭಾಗವಹಿಸವವರು ಮಾಸ್ಕ್ ಧರಿಸುವುದು ಹಾಗೂ ಹೆಲ್ಮೆಟ್ ಹಾಕುವುದು ಕಡ್ಡಾಯವಾಗಿದೆ ಎಂದು ಹೇಳಿದರು.</p>.<p>ಗ್ರಾಮ ಪಂಚಾಯಿತಿಯಲ್ಲಿ ಆದ ನಿರ್ಣಯ, 2019ರ ಜನವರಿ 30ರಂದು ನಡೆದ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಹೆಸರಿಡಲು ಸರ್ವಾನುಮತದಿಂದ ನಿರ್ಣಯ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಆದರೆ, ರಾಜ್ಯ ಸರ್ಕಾರದಿಂದ ಅದು ವಾಪಸಾಗಿದೆ. ರಾಜ್ಯ ಸರ್ಕಾರ ಈ ನಿರ್ಣಯವನ್ನು ಅಂಗೀಕರಿಸಿ ಸೂಕ್ತ ಕ್ರಮಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು ಎಂದು ಒತ್ತಾಯಿಸಿದರು.</p>.<p>ಸಮಿತಿಯ ಉಪಾಧ್ಯಕ್ಷ ಸೂರಜ್ ಕಲ್ಯ, ಬಿಲ್ಲವ ಬ್ರಿಗೇಡ್ನ ಅಧ್ಯಕ್ಷ ಜೀವನ್ ಪೂಜಾರಿ, ಸ್ಥಾಪಕ ಅಧ್ಯಕ್ಷ ಅವಿನಾಶ್ ಸುವರ್ಣ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಸನಿಲ್, ಸಂಘಟನಾ ಕಾರ್ಯದರ್ಶಿ ಅಶ್ವಥ್ ಉಪ್ಪಳ ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>