ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾವಿಗೆ ಬಿದ್ದು ಸ್ಕೂಟರ್ ಸವಾರ ಸಾವು

Last Updated 5 ಜನವರಿ 2021, 7:58 IST
ಅಕ್ಷರ ಗಾತ್ರ

ಮಂಗಳೂರು: ಚಲಿಸುತ್ತಿದ್ದ ಸ್ಕೂಟರ್‌ ಸ್ಕಿಡ್ ಆಗಿದ್ದು, ಆಯತಪ್ಪಿ ಪಕ್ಕದಲ್ಲೇ ಇದ್ದ ಬಾವಿಗೆ ಬಿದ್ದ ಸವಾರ ಮೃತಪಟ್ಟಿದ್ದಾರೆ.

ನಗರದ ಹೊರವಲಯದ ಪಕ್ಕಲಡ್ಕ ಸಮೀಪದ ಬಜಾಲ್‌ನಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ಅಜಿತ್ ಮೃತಪಟ್ಟಿದ್ದಾರೆ. ಸಂಜೆ 7.15ರ ವೇಳೆಗೆ ಬಜಾಲ್ ಎತ್ತರದ ಪ್ರದೇಶದಲ್ಲಿ ಚಲಿಸುತ್ತಿದ್ದ ಸ್ಕೂಟರ್, ಸವಾರ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲೇ ಇದ್ದ ಆವರಣ ಇರುವ ಬಾವಿಗೆ ಬಿದ್ದಿದ್ದಾರೆ.

ಘಟನೆ ನಡೆದ ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಬಂದ ಸಿಬ್ಬಂದಿ ಬಾವಿಗೆ ಬಿದ್ದ ವ್ಯಕ್ತಿಯನ್ನು ಮೇಲಕ್ಕೆತ್ತಿದ್ದಾರೆ. ಅಷ್ಟರಲ್ಲಿಯೇ ಮೃತಪಟ್ಟಿದ್ದರು ಎನ್ನಲಾಗಿದೆ. ಘಟನೆ ನಡೆದ ಸ್ಥಳ ಎತ್ತರದ ಪ್ರದೇಶವಾಗಿದ್ದರಿಂದ ಸ್ಕೂಟರ್ ಸವಾರ ನಿಯಂತ್ರಣ ಕಳೆದುಕೊಂಡಿದ್ದು, ಬೈಕ್‌ ಸ್ಕಿಡ್ ಆಗಿದೆ. ಸ್ಕೂಟರ್ ಬಿದ್ದ ಕೆಲ ದೂರದಲ್ಲಿಯೇ ಬಾವಿ ಇದ್ದುದರಿಂದ ಸವಾರ ಬಾವಿಯೊಳಗೆ ಬಿದ್ದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT