ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಕ್‌, ದೇವಸ್ಥಾನದ ಹುಂಡಿ ಕಳವು; ವಿಎಚ್‌ಪಿ ಸಂಚಾಲಕನ ಬಂಧನ

Last Updated 8 ಮಾರ್ಚ್ 2021, 7:38 IST
ಅಕ್ಷರ ಗಾತ್ರ

ಉಳ್ಳಾಲ: ದೇವಸ್ಥಾನದ ಕಾಣಿಕೆ ಡಬ್ಬಿ ಹಾಗೂ ಬೈಕ್‌ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್‌ ಸಂಚಾಲಕನನ್ನು ಕೊಣಾಜೆ ಪೊಲೀಸರು ಭಾನುವಾರ ಮಧ್ಯರಾತ್ರಿ ಬಂಧಿಸಿದ್ದಾರೆ.

ಮೊಂಟೆಪದವು ನಿವಾಸಿ ತಾರನಾಥ್ ಮೋಹನ್ ಬಂಧಿತ ಆರೋಪಿ. ಮಂಜನಾಡಿ ದೇವಸ್ಥಾನದಿಂದ ಕಾಣಿಕೆ ಡಬ್ಬಿ ಕಳವಾಗಿತ್ತು. ಅಲ್ಲದೇ ಮೊಂಟೆಪದವು ಬಳಿಯ ಮೆನೆಯೊಂದರಿಂದ ಬೈಕ್ ಕಳವು ಮಾಡಲಾಗಿತ್ತು. ಈ ಕುರಿತು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳಿಂದ ದೊರೆತ ಮಾಹಿತಿ ಆಧಾರದಲ್ಲಿ ಭಾನುವಾರ ಮಧ್ಯರಾತ್ರಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT