ಒಂದೇ ತಂಡ ಸರಣಿ ಕಳ್ಳತನ ನಡೆಸಿದ್ದು ರಾಷ್ಟ್ರೀಯ ಹೆದ್ದಾರಿ 66ರ ಮೂಲಕ ಉಡುಪಿ ಜಿಲ್ಲೆಯತ್ತ ಸಾಗಿದ್ದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ಮೂಲ್ಕಿ ಬಪ್ಪನಾಡು ಪರಿಸರದ ನಿವಾಸಿ ನಿತೀಶ್ ಭಂಡಾರಿ ಅವರು ಬಪ್ಪನಾಡು ದೇವಸ್ಥಾನದ ಹತ್ತಿರ ನಿಲ್ಲಿಸಿದ್ದ ಬೈಕ್ ಕದ್ದಿರುವುದರ ತನಿಖೆ ನಡೆಸಿದ ಪೊಲೀಸರು ಹೆಜಮಾಡಿ ಟೋಲ್ ಗೇಟ್ನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಆ ಮೂಲಕ ಕಳ್ಳರು ಸಾಗಿದ್ದು ಗೊತ್ತಾಗಿದೆ. ಪಡುಬಿದ್ರಿ, ಎರ್ಮಾಳ್ ಮೂಲಕ ಕಳ್ಳರು ಸಾಗಿದ್ದಾರೆ.