ಈ ಕುರಿತು ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶೀರ್ಷಿಕೆಯನ್ನು ಸುಬ್ರಹ್ಮಣ್ಯದಲ್ಲಿ ಮಂಗಳವಾರ ಸಚಿವ ಅಂಗಾರ ಬಿಡುಗಡೆ ಮಾಡಿದ್ದಾರೆ. ಅಂತರರಾಷ್ಟ್ರೀಯ ಗುಣಮಟ್ಟದ ಚಲನಚಿತ್ರವನ್ನು ತುಳುನಾಡಿನ ಕಂಬಳದ ಬಗ್ಗೆ ನಿರ್ಮಿಸುವ ಗುರಿ ಹೊಂದಿದ್ದೇನೆ. ಈ ಚಲನಚಿತ್ರವನ್ನು ಕನ್ನಡ, ತಮಿಳು, ತೆಲುಗು, ಹಿಂದಿಗೂ ಡಬ್ಬಿಂಗ್ ಮಾಡುವ ಉದ್ದೇಶ ಇದೆ. ಬಳಿಕ ಇಂಗ್ಲಿಷ್ನಲ್ಲೂ ಬಿಡುಗಡೆ ಮಾಡಲಾಗುವುದು’ ಎಂದು ವಿವರಿಸಿದರು.