<p><strong>ಮಂಗಳೂರು:</strong> ಪ್ರತಿ ಜನನ– ಮರಣದ ನೋಂದಣಿ ಕಡ್ಡಾಯವಾಗಿದ್ದು, ಘಟನೆ ಸಂಭವಿಸಿದ 21 ದಿನಗಳ ಒಳಗೆ ನಗರ, ಗ್ರಾಮ ಪಂಚಾಯಿತಿ ನೋಂದಣಾಧಿಕಾರಿ ಮೂಲಕ ನೋಂದಣಿ ಮಾಡಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಜಿ.ಸಂತೋಷ್ ಕುಮಾರ್ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜನನ-ಮರಣ ನೋಂದಣಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ನಗರ ವ್ಯಾಪ್ತಿಯಲ್ಲಿ ಬೇರೆ ಜಿಲ್ಲೆಯ ವ್ಯಕ್ತಿ ಅಪಘಾತ ಅಥವಾ ಇನ್ನಿತರ ಅಪರಾಧ ಕೃತ್ಯಗಳ ಮೂಲಕ ಮೃತಪಟ್ಟರೆ ಮರಣ ನೋಂದಣಿ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ನಿಖರ ಮಾಹಿತಿ, ದಾಖಲೆ ನೀಡಬೇಕು ಎಂದು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಗ್ರಾಮಾಂತರ ಮತ್ತು ನಗರ ಪ್ರದೇಶದಲ್ಲಿ 678 ನೋಂದಣಿ ಘಟಕಗಳು ಕಾರ್ಯನಿರ್ವಹಿಸುತ್ತಿವೆ. ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ ಮಾಡಬಾರದು. 21 ದಿನದ ನಂತರ ನೋಂದಾಯಿಸಿದರೆ ಅದನ್ನು ತಡನೋಂದಣಿ ಎಂದು ಪರಿಗಣಿಸಿ, ವಿಳಂಬ ಶುಲ್ಕ ₹ 20 ಪಡೆಯಲಾಗುತ್ತದೆ. ತಡ ನೋಂದಣಿಯನ್ನು ಕಡಿಮೆಗೊಳಿಸಲು ಕ್ರಮ ವಹಿಸಬೇಕು ಎಂದು ತಿಳಿಸಿದರು.</p>.<p>ತಾಲ್ಲೂಕು ಮಟ್ಟದಲ್ಲಿ ಜನನ–ಮರಣ ನೋಂದಣಿ ಸಮನ್ವಯ ಸಮಿತಿ ಸಭೆಯನ್ನು ನಡೆಸಬೇಕು. ನೋಂದಣಿ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದರು.</p>.<p>ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎ.ಆರ್.ಶ್ರೀಧರ್ ಮಾತನಾಡಿ, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸುವ ಎಲ್ಲ ಜನನ ಮತ್ತು ಮರಣ ಘಟನೆಗಳನ್ನು ನೋಂದಣಾಧಿಕಾರಿಗೆ ವರದಿ ಮಾಡಬೇಕು. ನೋಂದಣಾಧಿಕಾರಿ ಅಥವಾ ಉಪ ನೋಂದಣಾಧಿಕಾರಿ ವರದಿ ಮಾಡಿದ ಘಟನೆಗಳನ್ನು ನೋಂದಣಿ ಮಾಡಿ ಪ್ರಕ್ರಿಯೆ ಮುಗಿದ ನಂತರ ಮಾಹಿತಿದಾರರಿಗೆ ಜನನ ಪ್ರಮಾಣ ಪತ್ರವನ್ನು ಒದಗಿಸಬೇಕು. ಗ್ರಾಮ ಒನ್ ಕಚೇರಿಯಲ್ಲಿ ಸಾರ್ವಜನಿಕರು ಜನನ ಮರಣ ನೋಂದಣಿಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದರು.</p>.<p>ಇ-ಜನ್ಮ ತಂತ್ರಾಂಶದಲ್ಲಿ ಜನನ ಮರಣ ಘಟನೆಗಳನ್ನು ನೋಂದಾಯಿಸುವಾಗ ಆಧಾರ್ ಸಂಖ್ಯೆಯನ್ನು ಅಥವಾ ಇತರ ದಾಖಲೆಗಳನ್ನೂ ಅಪ್ಲೋಡ್ ಮಾಡಬೇಕು. ಮರಣ ಘಟನೆಗಳ ಸಂದರ್ಭದಲ್ಲಿ ಮೃತರ ಆಧಾರ್ ನಂಬರ್ ಬದಲು ಅರ್ಜಿದಾರರ ಆಧಾರ್ ನಂಬರ್ ನಮೂದಿಸಿದರೆ, ಸರ್ಕಾರದಿಂದ ಸವಲತ್ತುಗಳು ಸಿಗುವುದಿಲ್ಲ ಎಂದು ಹೇಳಿದರು. </p>.<p>ಜಿಲ್ಲೆಯ ಎಲ್ಲ ನೋಂದಣಿ ಘಟಕಗಳು ನಿಯಮಾನುಸಾರ ನೋಂದಣಿ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಹಾಗೂ ಶೇ 100ರಷ್ಟು ಘಟನೆಗಳು ದಾಖಲಾಗುತ್ತಿರುವ ಬಗ್ಗೆ ತಾಂತ್ರಿಕ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.</p>.<p>ಜಿಲ್ಲಾ ಸಂಖ್ಯಾ ಸಂಗ್ರಹಣಾ ಇಲಾಖೆ ಉಪನಿರ್ದೇಶಕಿ ಸುಷ್ಮಾ ಕೆ.ಎಸ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಉಸ್ಮಾನ್ ಎ., ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಪ್ರತಿ ಜನನ– ಮರಣದ ನೋಂದಣಿ ಕಡ್ಡಾಯವಾಗಿದ್ದು, ಘಟನೆ ಸಂಭವಿಸಿದ 21 ದಿನಗಳ ಒಳಗೆ ನಗರ, ಗ್ರಾಮ ಪಂಚಾಯಿತಿ ನೋಂದಣಾಧಿಕಾರಿ ಮೂಲಕ ನೋಂದಣಿ ಮಾಡಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಜಿ.ಸಂತೋಷ್ ಕುಮಾರ್ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜನನ-ಮರಣ ನೋಂದಣಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ನಗರ ವ್ಯಾಪ್ತಿಯಲ್ಲಿ ಬೇರೆ ಜಿಲ್ಲೆಯ ವ್ಯಕ್ತಿ ಅಪಘಾತ ಅಥವಾ ಇನ್ನಿತರ ಅಪರಾಧ ಕೃತ್ಯಗಳ ಮೂಲಕ ಮೃತಪಟ್ಟರೆ ಮರಣ ನೋಂದಣಿ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ನಿಖರ ಮಾಹಿತಿ, ದಾಖಲೆ ನೀಡಬೇಕು ಎಂದು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಗ್ರಾಮಾಂತರ ಮತ್ತು ನಗರ ಪ್ರದೇಶದಲ್ಲಿ 678 ನೋಂದಣಿ ಘಟಕಗಳು ಕಾರ್ಯನಿರ್ವಹಿಸುತ್ತಿವೆ. ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ ಮಾಡಬಾರದು. 21 ದಿನದ ನಂತರ ನೋಂದಾಯಿಸಿದರೆ ಅದನ್ನು ತಡನೋಂದಣಿ ಎಂದು ಪರಿಗಣಿಸಿ, ವಿಳಂಬ ಶುಲ್ಕ ₹ 20 ಪಡೆಯಲಾಗುತ್ತದೆ. ತಡ ನೋಂದಣಿಯನ್ನು ಕಡಿಮೆಗೊಳಿಸಲು ಕ್ರಮ ವಹಿಸಬೇಕು ಎಂದು ತಿಳಿಸಿದರು.</p>.<p>ತಾಲ್ಲೂಕು ಮಟ್ಟದಲ್ಲಿ ಜನನ–ಮರಣ ನೋಂದಣಿ ಸಮನ್ವಯ ಸಮಿತಿ ಸಭೆಯನ್ನು ನಡೆಸಬೇಕು. ನೋಂದಣಿ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದರು.</p>.<p>ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎ.ಆರ್.ಶ್ರೀಧರ್ ಮಾತನಾಡಿ, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸುವ ಎಲ್ಲ ಜನನ ಮತ್ತು ಮರಣ ಘಟನೆಗಳನ್ನು ನೋಂದಣಾಧಿಕಾರಿಗೆ ವರದಿ ಮಾಡಬೇಕು. ನೋಂದಣಾಧಿಕಾರಿ ಅಥವಾ ಉಪ ನೋಂದಣಾಧಿಕಾರಿ ವರದಿ ಮಾಡಿದ ಘಟನೆಗಳನ್ನು ನೋಂದಣಿ ಮಾಡಿ ಪ್ರಕ್ರಿಯೆ ಮುಗಿದ ನಂತರ ಮಾಹಿತಿದಾರರಿಗೆ ಜನನ ಪ್ರಮಾಣ ಪತ್ರವನ್ನು ಒದಗಿಸಬೇಕು. ಗ್ರಾಮ ಒನ್ ಕಚೇರಿಯಲ್ಲಿ ಸಾರ್ವಜನಿಕರು ಜನನ ಮರಣ ನೋಂದಣಿಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದರು.</p>.<p>ಇ-ಜನ್ಮ ತಂತ್ರಾಂಶದಲ್ಲಿ ಜನನ ಮರಣ ಘಟನೆಗಳನ್ನು ನೋಂದಾಯಿಸುವಾಗ ಆಧಾರ್ ಸಂಖ್ಯೆಯನ್ನು ಅಥವಾ ಇತರ ದಾಖಲೆಗಳನ್ನೂ ಅಪ್ಲೋಡ್ ಮಾಡಬೇಕು. ಮರಣ ಘಟನೆಗಳ ಸಂದರ್ಭದಲ್ಲಿ ಮೃತರ ಆಧಾರ್ ನಂಬರ್ ಬದಲು ಅರ್ಜಿದಾರರ ಆಧಾರ್ ನಂಬರ್ ನಮೂದಿಸಿದರೆ, ಸರ್ಕಾರದಿಂದ ಸವಲತ್ತುಗಳು ಸಿಗುವುದಿಲ್ಲ ಎಂದು ಹೇಳಿದರು. </p>.<p>ಜಿಲ್ಲೆಯ ಎಲ್ಲ ನೋಂದಣಿ ಘಟಕಗಳು ನಿಯಮಾನುಸಾರ ನೋಂದಣಿ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಹಾಗೂ ಶೇ 100ರಷ್ಟು ಘಟನೆಗಳು ದಾಖಲಾಗುತ್ತಿರುವ ಬಗ್ಗೆ ತಾಂತ್ರಿಕ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.</p>.<p>ಜಿಲ್ಲಾ ಸಂಖ್ಯಾ ಸಂಗ್ರಹಣಾ ಇಲಾಖೆ ಉಪನಿರ್ದೇಶಕಿ ಸುಷ್ಮಾ ಕೆ.ಎಸ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಉಸ್ಮಾನ್ ಎ., ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>