ಗಂಧ, ರಕ್ತಚಂದನ ಮತ್ತು ಬೀಟಿ ಗಿಡ ನೆಡುವ ಮೂಲಕ ಸಮಾವೇಶವನ್ನು ಉದ್ಘಾಟಿಸಿದ ಮಂಗಳೂರು ಬಿಷಪ್ ಪೀಟರ್ ಪಾವ್ಲ್ ಸಲ್ದಾನ್ಹಾ ಮಾತನಾಡಿ, ‘ ಕ್ರೈಸ್ತರು ಅಲ್ಪ ಸಂಖ್ಯಾತರಾಗಿದ್ದು ಎಲ್ಲಾ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು’ ಎಂದು ಅವರು ಸಲಹೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಕಥೋಲಿಕ್ ಸಭಾದ ಅಧ್ಯಕ್ಷ ಪೌಲ್ ರೋಲ್ಫಿ ಡಿಕೋಸ್ತ ಮಾತನಾಡಿ, ‘ಕಥೋಲಿಕರು ನೆರೆ ಸಂತ್ರಸ್ತರಿಗೆ ₹3 ಕೋಟಿ ನೆರವು ನೀಡಿದ್ದೇವೆ’ ಎಂದು ಅವರು ಪ್ರಕಟಿಸಿದರು.