<p><strong>ಮಂಗಳೂರು:</strong> ಕ್ರಿಸ್ಮಸ್ ಸಂಭ್ರಮದ ನಡುವೆಯೇ ಮಂಗಳೂರು ಕೆಥೋಲಿಕ್ ಧರ್ಮಪ್ರಾಂತ್ಯದ ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನ ಅವರು ನಗರದ ಉಳ್ಳಾಲ ವ್ಯಾಪ್ತಿಯ ಪೆರ್ಮನ್ನೂರು ವಿಠೋಬ ರುಕುಮಾಯಿ ದೇವಸ್ಥಾನಕ್ಕೆ ಮಂಗಳವಾರ ಸೌಹಾರ್ದ ಭೇಟಿ ನೀಡಿದರು.</p>.<p>ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ಮಂಗಳೂರು ಬಿಷಪ್ ಡಾ| ಪೀಟರ್ ಪೌಲ್ ಸಲ್ದಾನ್ಹ, ಸಚಿವ ಯು.ಟಿ.ಖಾದರ್ ಅವರ ನೇತೃತ್ವದಲ್ಲಿ ಚರ್ಚ್ ಆಡಳಿತ ಮಂಡಳಿ ಸದಸ್ಯರು, ಚರ್ಚಿನ ಹತ್ತಿರದಲ್ಲೇ ಇರುವ ವಿಠೋಬ ರುಕುಮಾಯಿ ಭಜನಾ ಮಂಡಳಿ ವಾರ್ಷಿಕೋತ್ಸವ ಸಮಾರಂಭಕ್ಕೆ ಭೇಟಿ ನೀಡಿ, ಕ್ರಿಸ್ಮಸ್ ಹಬ್ಬದ ಸಿಹಿತಿಂಡಿಗಳನ್ನು ಹಂಚಿಕೊಂಡರು.</p>.<p>ಇದೇ ಸಂದರ್ಭ ಮಾತನಾಡಿದ ಬಿಷಪ್ ಪೌಲ್ ಸಲ್ದಾನ್ಹ, 'ಮಂದಿರದ ವಾರ್ಷಿಕೋತ್ಸವ ಸಮಾರಂಭದ ಶುಭಾಷಯಗಳನ್ನು ಸಲ್ಲಿಸಿದರು. ಕ್ರಿಸ್ಮಸ್ ಹಬ್ಬದ ಮತ್ತು ಮಂದಿರದ ವಾರ್ಷಿಕೋತ್ಸವ ಆಚರಣೆ ಮೂಲಕ ಎಲ್ಲರಿಗೂ ದೇವರ ಆಶೀರ್ವಾದ ದೊರೆಯಲಿ. ಕುಟುಂಬಗಳು ಸಂತಸದಿಂದ ಬಾಳಲಿ’ಎಂದು ಹಾರೈಸಿದರು.</p>.<p>ಸಚಿವ ಯು.ಟಿ.ಖಾದರ್ , ‘ಬಿಷಪ್ ಅವರ ಸೌಹಾರ್ದ ಭೇಟಿಯಿಂದಾಗಿ ಪ್ರೀತಿ ವಿಶ್ವಾಸ ಹಂಚುವ ಅವಕಾಶವಾಗಿದೆ. ಕ್ರಿಸ್ಮಸ್ ಹಬ್ಬ ಎಲ್ಲರೂ ಸೇರಿಸಿಕೊಂಡು ಆಚರಿಸುವಂತಹ ಹಬ್ಬವಾಗಿದೆ. ಈ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ದೊರೆಯಲಿ’ ಎಂದರು. ದೇವಸ್ಥಾನದ ಸರ್ವ ಸಮಿತಿಯವರನ್ನು ಅಭಿನಂದಿಸಿದರು.</p>.<p>ತೊಕ್ಕೊಟ್ಟು ಸಂತ ಸೆಬೆಸ್ತಿಯನ್ನರ ಚರ್ಚಿನಲ್ಲಿ ಸಂಭ್ರಮದ ಕ್ರಿಸ್ ಮಸ್ ಹಬ್ಬದ ಆಚರಣೆ ನಡೆಯಿತು. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮಂಗಳೂರು ಬಿಷಪ್ ಫಾ. ಪೀಟರ್ ಪೌಲ್ ಸಲ್ದಾನ್ಹ ಭಾಗವಹಿಸಿದರು. ಚರ್ಚ್ ಧರ್ಮಗುರು ಫಾ. ಜೆಬಿ ಸಲ್ದಾನ್ಹ ಜೊತೆಗಿದ್ದರು.</p>.<p>ಇದೇ ಸಂದರ್ಭ ಕಾಂಗ್ರೆಸ್ ಮುಖಂಡರುಗಳಾದ ಸುರೇಶ್ ಭಟ್ನಗರ, ಬಾಝಿಲ್ ಡಿಸೋಜ, ಮಂದಿರದ ಅಧ್ಯಕ್ಷ ಪದ್ಮನಾಭ, ಮೋಹನ್ ಬಂಗೇರ, ಚೇತನ್ ಕುಮಾರ್ ಶೆಟ್ಟಿ, ಸಚ್ಚೀಂದ್ರ ಸಾಲ್ಯಾನ್ ಮುಂತಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಕ್ರಿಸ್ಮಸ್ ಸಂಭ್ರಮದ ನಡುವೆಯೇ ಮಂಗಳೂರು ಕೆಥೋಲಿಕ್ ಧರ್ಮಪ್ರಾಂತ್ಯದ ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನ ಅವರು ನಗರದ ಉಳ್ಳಾಲ ವ್ಯಾಪ್ತಿಯ ಪೆರ್ಮನ್ನೂರು ವಿಠೋಬ ರುಕುಮಾಯಿ ದೇವಸ್ಥಾನಕ್ಕೆ ಮಂಗಳವಾರ ಸೌಹಾರ್ದ ಭೇಟಿ ನೀಡಿದರು.</p>.<p>ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ಮಂಗಳೂರು ಬಿಷಪ್ ಡಾ| ಪೀಟರ್ ಪೌಲ್ ಸಲ್ದಾನ್ಹ, ಸಚಿವ ಯು.ಟಿ.ಖಾದರ್ ಅವರ ನೇತೃತ್ವದಲ್ಲಿ ಚರ್ಚ್ ಆಡಳಿತ ಮಂಡಳಿ ಸದಸ್ಯರು, ಚರ್ಚಿನ ಹತ್ತಿರದಲ್ಲೇ ಇರುವ ವಿಠೋಬ ರುಕುಮಾಯಿ ಭಜನಾ ಮಂಡಳಿ ವಾರ್ಷಿಕೋತ್ಸವ ಸಮಾರಂಭಕ್ಕೆ ಭೇಟಿ ನೀಡಿ, ಕ್ರಿಸ್ಮಸ್ ಹಬ್ಬದ ಸಿಹಿತಿಂಡಿಗಳನ್ನು ಹಂಚಿಕೊಂಡರು.</p>.<p>ಇದೇ ಸಂದರ್ಭ ಮಾತನಾಡಿದ ಬಿಷಪ್ ಪೌಲ್ ಸಲ್ದಾನ್ಹ, 'ಮಂದಿರದ ವಾರ್ಷಿಕೋತ್ಸವ ಸಮಾರಂಭದ ಶುಭಾಷಯಗಳನ್ನು ಸಲ್ಲಿಸಿದರು. ಕ್ರಿಸ್ಮಸ್ ಹಬ್ಬದ ಮತ್ತು ಮಂದಿರದ ವಾರ್ಷಿಕೋತ್ಸವ ಆಚರಣೆ ಮೂಲಕ ಎಲ್ಲರಿಗೂ ದೇವರ ಆಶೀರ್ವಾದ ದೊರೆಯಲಿ. ಕುಟುಂಬಗಳು ಸಂತಸದಿಂದ ಬಾಳಲಿ’ಎಂದು ಹಾರೈಸಿದರು.</p>.<p>ಸಚಿವ ಯು.ಟಿ.ಖಾದರ್ , ‘ಬಿಷಪ್ ಅವರ ಸೌಹಾರ್ದ ಭೇಟಿಯಿಂದಾಗಿ ಪ್ರೀತಿ ವಿಶ್ವಾಸ ಹಂಚುವ ಅವಕಾಶವಾಗಿದೆ. ಕ್ರಿಸ್ಮಸ್ ಹಬ್ಬ ಎಲ್ಲರೂ ಸೇರಿಸಿಕೊಂಡು ಆಚರಿಸುವಂತಹ ಹಬ್ಬವಾಗಿದೆ. ಈ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ದೊರೆಯಲಿ’ ಎಂದರು. ದೇವಸ್ಥಾನದ ಸರ್ವ ಸಮಿತಿಯವರನ್ನು ಅಭಿನಂದಿಸಿದರು.</p>.<p>ತೊಕ್ಕೊಟ್ಟು ಸಂತ ಸೆಬೆಸ್ತಿಯನ್ನರ ಚರ್ಚಿನಲ್ಲಿ ಸಂಭ್ರಮದ ಕ್ರಿಸ್ ಮಸ್ ಹಬ್ಬದ ಆಚರಣೆ ನಡೆಯಿತು. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮಂಗಳೂರು ಬಿಷಪ್ ಫಾ. ಪೀಟರ್ ಪೌಲ್ ಸಲ್ದಾನ್ಹ ಭಾಗವಹಿಸಿದರು. ಚರ್ಚ್ ಧರ್ಮಗುರು ಫಾ. ಜೆಬಿ ಸಲ್ದಾನ್ಹ ಜೊತೆಗಿದ್ದರು.</p>.<p>ಇದೇ ಸಂದರ್ಭ ಕಾಂಗ್ರೆಸ್ ಮುಖಂಡರುಗಳಾದ ಸುರೇಶ್ ಭಟ್ನಗರ, ಬಾಝಿಲ್ ಡಿಸೋಜ, ಮಂದಿರದ ಅಧ್ಯಕ್ಷ ಪದ್ಮನಾಭ, ಮೋಹನ್ ಬಂಗೇರ, ಚೇತನ್ ಕುಮಾರ್ ಶೆಟ್ಟಿ, ಸಚ್ಚೀಂದ್ರ ಸಾಲ್ಯಾನ್ ಮುಂತಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>