ಕಾಸರಗೋಡು ಜಿಲ್ಲೆಯ ಮಣಿಯಂಪಾರೆ ಚರ್ಚ್ನಲ್ಲಿ ಮಂಗಳೂರು ಬಿಷಪ್ ರೆ.ಡಾ.ಪೀಟರ್ ಪಾವ್ಲ್ ಸಲ್ಡಾನ, ಬಲಿಪೂಜೆ ಮತ್ತು ಪರಮ ಪ್ರಸಾದದ ಮೆರವಣಿಗೆ ನೇತೃತ್ವ ವಹಿಸಿದ್ದರು. ಯೇಸು ಕ್ರಿಸ್ತರು ತಮ್ಮ ಕೊನೆಯ ಭೋಜನದ ಸಂದರ್ಭದಲ್ಲಿ 12 ಶಿಷ್ಯರ ಪಾದ ತೊಳೆದು ಸೇವೆಯ ಸಂಸ್ಕಾರವನ್ನು ಪ್ರತಿಪಾದಿಸಿದ್ದು, ಅದರ ಸಂಕೇತವಾಗಿ ಬಿಷಪರು ಮತ್ತು ಇತರ ಚರ್ಚ್ಗಳಲ್ಲಿ ಸ್ಥಳೀಯ ಧರ್ಮಗುರುಗಳು, 12 ಕ್ರೈಸ್ತರ ಪಾದಗಳನ್ನು ತೊಳೆದರು.