ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ, ಮುಖ್ಯಮಂತ್ರಿ ಬರುವಾಗ ಕಪ್ಪುಪಟ್ಟಿ ಹಿಡಿದು ಪ್ರತಿಭಟಿಸಲು 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಬೊಂದೆಲ್ ಬಳಿ ಸೇರಿದ್ದರು. ಅಲ್ಲಿಂದ ಹೊರಡುವಂತೆ ಪೊಲೀಸರು ಸೂಚಿಸಿದರು. ಇದೇ ವೇಳೆ ಸ್ಥಳಕ್ಕೆ ಬಂದ ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.