ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಲ್ಸೇತುವೆ ಕಾಮಗಾರಿ ಅಪೂರ್ಣ: ತಲಪಾಡಿಯಲ್ಲಿ ಬಿಜೆಪಿಯಿಂದ ಟೋಲ್ ನಿರಾಕರಣೆ ಚಳವಳಿ

ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸದಿರುವುದಕ್ಕೆ ಆಕ್ರೋಶ
Last Updated 1 ಜನವರಿ 2020, 5:21 IST
ಅಕ್ಷರ ಗಾತ್ರ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿಯನ್ನು ನಿಗದಿತ ಗಡುವಿನಂತೆ ಪೂರ್ಣಗೊಳಿಸದಿರುವುದನ್ನು ವಿರೋಧಿಸಿ ಇಲ್ಲಿನ ಕೇರಳ ಗಡಿಯಲ್ಲಿರುವ ತಲಪಾಡಿ ಟೋಲ್ ಗೇಟ್‌ನಲ್ಲಿ ಬಿಜೆಪಿ ಶಾಸಕರ ನೇತೃತ್ವದಲ್ಲಿ ಟೋಲ್ ನಿರಾಕರಣೆ ಚಳವಳಿ ನಡೆಸಲಾಯಿತು.

ಶಾಸಕರಾದ ಡಿ.ವೇದವ್ಯಾಸ ಕಾಮತ್ ಮತ್ತು ಡಾ.ವೈ.ಭರತ್ ಶೆಟ್ಟಿ ಪ್ರತಿಭಟನೆಯ ನೇತೃತ್ವ ವಹಿಸಿದ್ದಾರೆ. ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳ್ಳುವವರೆಗೂ ವಾಹನ ಸವಾರರಿಂದ ಟೋಲ್ ಸಂಗ್ರಹಿಸದಂತೆ ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.

ಸದ್ಯ ಕೇರಳ ಮತ್ತು ಮಂಗಳೂರು ನಡುವೆ ಸಂಚರಿಸುತ್ತಿರುವ ವಾಹನಗಳಿಂದ ಟೋಲ್ ಸಂಗ್ರಹಿಸುವುದನ್ನು ಸ್ಥಗಿತಗೊಳಿಸಲಾಗಿದೆ. ವಾಹನ ಸವಾರರು ಟೋಲ್ ಪಾವತಿಸದೇ ಸಂಚರಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT