ಬಿಜೆಪಿ ಕಚೇರಿಯಲ್ಲಿ 13 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದ ರುಕ್ಮಯ್ಯ ಇದ್ಪಾಡಿ ಅವರು ಇದೀಗ ಸಹಕಾರಿ ಸಂಸ್ಥೆಯಲ್ಲಿ ಉದ್ಯೋಗ ಪಡೆದುಕೊಂಡಿದ್ದು, ಪಕ್ಷಕ್ಕಾಗಿ ಕೆಲಸ ಮಾಡಿದ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ ನಾರಾಯಣ ರೆಂಜ ಅಧ್ಯಕ್ಷತೆ ವಹಿಸಿದ್ದರು. ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಘಟಕದ ಕಾರ್ಯದರ್ಶಿ ವಿಠಲ ಪೂಜಾರಿ, ಜಿಲ್ಲಾ ಪ್ರಭಾರಿ ಭರತ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೋಗಿ ಇದ್ದರು.