ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ಅಲ್ಪಸಂಖ್ಯಾತರಿಗೆ ಹೆದರಿಕೆ ಹುಟ್ಟಿಸಿ, ಅವರಿಗೆ ತಪ್ಪು ಮಾಹಿತಿ ನೀಡುವ ಕೆಲಸ ಕಾಂಗ್ರೆಸ್ನಿಂದ ಆಗುತ್ತಿದೆ. ಇದನ್ನು ಸರಿಪಡಿಸುವ ಕೆಲಸ ಬಿಜೆಪಿ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಅವರು ಅನ್ಯಾಯ, ತುಳಿತಕ್ಕೊಳಗಾದವರಿಗೆ ಭದ್ರತೆ ಕೊಡಲು ಮುಂದಾದರೆ ಕಾಂಗ್ರೆಸ್ ನಾಯಕರುಅಡ್ಡಗಾಲು ಹಾಕುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.