<p><strong>ಮಂಗಳೂರು:</strong> ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಲಾಭ ಪಡೆದವರನ್ನು ನಮ್ಮ ಮತದಾರರನ್ನಾಗಿ ಮಾಡಬೇಕು. ನಾವು ಜನರ ಬಳಿಗೆ ಹೋಗಿ ಮೋದಿಯವರ ಕಾರ್ಯದ ಬಗ್ಗೆ ತಿಳಿಸಬೇಕು ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟ ಹೇಳಿದರು.</p>.<p>ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆದ ಚುನಾವಣಾ ನಿರ್ವಹಣಾ ಸಮಿತಿ ಮತ್ತು ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ‘ಮೋದಿಯವರ ಸಾಧನೆ ತಿಳಿಸಿ, ಮತಗಳಾಗಿ ಪರಿವರ್ತಿಸುವ ದೊಡ್ಡ ಜವಾಬ್ದಾರಿ ನಮ್ಮ ಮೇಲಿದೆ’ ಎಂದರು.</p>.<p>ಶುಕ್ರವಾರ ಸಂಜೆ ಕಂಕನಾಡಿಯ ಬ್ರಹ್ಮ ಬೈದರ್ಕಳ ಗರಡಿಗೆ ಭೇಟಿ ನೀಡಿದ ಬೃಜೇಶ್, ದೇವರ ದರ್ಶನ ಪಡೆದರು. ನಾರಾಯಣ ಗುರು ಮತ್ತು ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಗರೋಡಿ ದೈವಸ್ಥಾನ ಸಮಿತಿ ಅಧ್ಯಕ್ಷ ಚಿತ್ತರಂಜನ್, ಚೌಟ ಅವರನ್ನು ಬರಮಾಡಿಕೊಂಡರು. </p>.<p>ವಿಧಾನ ಪರಿಷತ್ ಮಾಜಿ ಸದಸ್ಯ ಬಾಲಕೃಷ್ಣ ಭಟ್ ಮನೆಗೆ ಭೇಟಿ ನೀಡಿದರು. ಆದಿಚುಂಚನಗಿರಿ ಶಾಖಾ ಮಠ ಕಾವೂರಿನ ಧರ್ಮಪಾಲನಾಥ ಸ್ವಾಮೀಜಿ ಭೇಟಿಯಾಗಿ ಆಶೀರ್ವಾದ ಪಡೆದರು. ಆರ್ಎಸ್ಎಸ್ ಮುಖಂಡ ಸುನಿಲ್ ಆಚಾರ್ ಮನೆಗೆ ತೆರಳಿ ಆಶೀರ್ವಾದ ಪಡೆದರು.</p>.<p><strong>ಮಂಗಳೂರು:</strong> ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಲಾಭ ಪಡೆದವರನ್ನು ನಮ್ಮ ಮತದಾರರನ್ನಾಗಿ ಮಾಡಬೇಕು. ನಾವು ಜನರ ಬಳಿಗೆ ಹೋಗಿ ಮೋದಿಯವರ ಕಾರ್ಯದ ಬಗ್ಗೆ ತಿಳಿಸಬೇಕು ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಲಾಭ ಪಡೆದವರನ್ನು ನಮ್ಮ ಮತದಾರರನ್ನಾಗಿ ಮಾಡಬೇಕು. ನಾವು ಜನರ ಬಳಿಗೆ ಹೋಗಿ ಮೋದಿಯವರ ಕಾರ್ಯದ ಬಗ್ಗೆ ತಿಳಿಸಬೇಕು ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟ ಹೇಳಿದರು.</p>.<p>ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆದ ಚುನಾವಣಾ ನಿರ್ವಹಣಾ ಸಮಿತಿ ಮತ್ತು ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ‘ಮೋದಿಯವರ ಸಾಧನೆ ತಿಳಿಸಿ, ಮತಗಳಾಗಿ ಪರಿವರ್ತಿಸುವ ದೊಡ್ಡ ಜವಾಬ್ದಾರಿ ನಮ್ಮ ಮೇಲಿದೆ’ ಎಂದರು.</p>.<p>ಶುಕ್ರವಾರ ಸಂಜೆ ಕಂಕನಾಡಿಯ ಬ್ರಹ್ಮ ಬೈದರ್ಕಳ ಗರಡಿಗೆ ಭೇಟಿ ನೀಡಿದ ಬೃಜೇಶ್, ದೇವರ ದರ್ಶನ ಪಡೆದರು. ನಾರಾಯಣ ಗುರು ಮತ್ತು ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಗರೋಡಿ ದೈವಸ್ಥಾನ ಸಮಿತಿ ಅಧ್ಯಕ್ಷ ಚಿತ್ತರಂಜನ್, ಚೌಟ ಅವರನ್ನು ಬರಮಾಡಿಕೊಂಡರು. </p>.<p>ವಿಧಾನ ಪರಿಷತ್ ಮಾಜಿ ಸದಸ್ಯ ಬಾಲಕೃಷ್ಣ ಭಟ್ ಮನೆಗೆ ಭೇಟಿ ನೀಡಿದರು. ಆದಿಚುಂಚನಗಿರಿ ಶಾಖಾ ಮಠ ಕಾವೂರಿನ ಧರ್ಮಪಾಲನಾಥ ಸ್ವಾಮೀಜಿ ಭೇಟಿಯಾಗಿ ಆಶೀರ್ವಾದ ಪಡೆದರು. ಆರ್ಎಸ್ಎಸ್ ಮುಖಂಡ ಸುನಿಲ್ ಆಚಾರ್ ಮನೆಗೆ ತೆರಳಿ ಆಶೀರ್ವಾದ ಪಡೆದರು.</p>.<p><strong>ಮಂಗಳೂರು:</strong> ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಲಾಭ ಪಡೆದವರನ್ನು ನಮ್ಮ ಮತದಾರರನ್ನಾಗಿ ಮಾಡಬೇಕು. ನಾವು ಜನರ ಬಳಿಗೆ ಹೋಗಿ ಮೋದಿಯವರ ಕಾರ್ಯದ ಬಗ್ಗೆ ತಿಳಿಸಬೇಕು ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>